ದೆಹಲಿಯ ಗಡಿ ಭಾಗಗಳಲ್ಲಿ ಪರಿಸ್ಥಿತಿ ಉದ್ವಿಗ್ನ, ಬ್ಯಾರಿಕೇಡ್ ಮುರಿದು ರೈತರ ಮೆರವಣಿಗೆ
ನವದೆಹಲಿ, ಜನವರಿ 26: ಗಣರಾಜ್ಯೋತ್ಸವ ದಿನದಂದು ರೈತರ ಪ್ರತಿಭಟನೆಗೂ ಮುನ್ನ ದೆಹಲಿಯ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ಒದ್ದು ಉರುಳಿಸಿದ ಪ್ರತಿಭಟನಾಕಾರರು ಮಂಗಳವಾರ ಬೆಳಿಗ್ಗೆ ಬರಿಗಾಲಲ್ಲಿ ದೆಹಲಿ ಪ್ರವೇಶಿಸಿದರು. ಬೃಹತ್ ಸಂಖ್ಯೆಯಲ್ಲಿ ನಿಯೋಜನೆಗೊಂಡಿದ್ದ ಪೊಲೀಸರು ಅವರನ್ನು ತಡೆಯಲು ಅಶ್ರುವಾಯುಗಳನ್ನು ಸಿಡಿಸಿದರು.
ದೆಹಲಿ ಮತ್ತು ಹರ್ಯಾಣ ನಡುವೆ ಇರುವ ಸಿಂಘು ಗಡಿಯಲ್ಲಿ ದೊಡ್ಡಮಟ್ಟದಲ್ಲಿ ಗದ್ದಲ ಉಂಟಾಯಿತು. ಜತೆಗೆ ದೆಹಲಿಯ ಪಶ್ಚಿಮ ಭಾಗದಲ್ಲಿನ ಟಿಕ್ರಿ ಗಡಿಯಲ್ಲಿಯೂ ಇದೇ ರೀತಿ ಸಂಘರ್ಷಮಯ ವಾತಾವರಣ ನಿರ್ಮಾಣವಾಯಿತು. ಸಾವಿರಾರು ಜನರು ಬಾವುಟಗಳನ್ನು ಹಿಡಿದು ಮೆರವಣಿಗೆ ಸಾಗಿದರೆ,ನೂರಾರು ಟ್ರ್ಯಾಕ್ಟರ್ಗಳು ಒಳನುಗ್ಗಿದವು.
ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವ ಪಥಸಂಚಲನ ಮುಗಿದ ಬಳಿಕ ಮಧ್ಯಾಹ್ನ 12 ಗಂಟೆ ನಂತರ ರೈತರ ಟ್ರ್ಯಾಕ್ಟರ್ ಮೆರವಣಿಗೆಗೆ ಅನುಮತಿ ನೀಡಲಾಗಿತ್ತು. ಆದರೆ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೇ ಗಡಿಯಲ್ಲಿ ಬೃಹತ್ ಸಂಖ್ಯೆಯಲ್ಲಿ ರೈತರು ಸೇರಿದ್ದರು. ಮುಂದೆ ಓದಿ.

ಗಡಿಗಳಲ್ಲಿ ಮೆರವಣಿಗೆ
ಸಿಂಘು ಗಡಿಯಲ್ಲಿ ಐದು ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರು ಗಡಿ ದಾಡಿ ಮೆರವಣಿಗೆ ಸಾಗಲು ಪಟ್ಟುಹಿಡಿದರು. ಟಿಕ್ರಿಯಲ್ಲಿ ಬೆಳಿಗ್ಗೆ ಒಂಬತ್ತು ಗಂಟೆಗೆ ಮೆರವಣಿಗೆ ಆರಂಭವಾಗಿದ್ದು, ಶಾಂತಿ ಕಾಪಾಡುವಂತೆ ರೈತ ಮುಖಂಡರು ಮನವಿ ಮಾಡಿದರು. ಮೆರವಣಿಗೆ ಸಮಯ ನಿರ್ಧರಿಸಲು ರೈತ ಮುಖಂಡರು ಪೊಲೀಸರ ಜತೆ ಸಭೆ ನಡೆಸಿದರು. ಪಂಜಾಬ್ನ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ಬ್ಯಾರಿಕೇಡ್ ಮುರಿದು ದೆಹಲಿ ಪ್ರವೇಶಿಸಿತು.
|
ಪೊಲೀಸ್ ವಾಹನಗಳ ಮೇಲೆ ದಾಳಿ
ದೆಹಲಿಯ ಮುಕಾರ್ಬಾ ಚೌಕದಲ್ಲಿ ಬ್ಯಾರಿಕೇಡ್ಗಳನ್ನು ಮುರಿಯಲು ಪ್ರಯತ್ನಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದರು. ಕಾಂಝ್ವಾಲಾ ಕಡೆಗೆ ಹೊರಟಿದ್ದ ರೈತರು, ಮುಕಾರ್ಬಾ ಚೌಕದಿಂದ ವರ್ತುಲ ರಸ್ತೆ ಕಡೆಗೆ ಮೆರವಣಿಗೆ ಬದಲಿಸಿದರು. ಈ ಸಂದರ್ಭದಲ್ಲಿ ನಡೆದ ಘರ್ಷಣೆಯಲ್ಲಿ ಪೊಲೀಸ್ ವಾಹನಗಳು, ಏಳು ಬಸ್ಗಳ ಕಿಟಕಿ ಗಾಜುಗಳನ್ನು ಒಡೆಯಲಾಗಿದೆ. ಪೊಲೀಸರ ಮೇಲೆ ಕೂಡ ದಾಳಿಗಳಾಗಿವೆ. ಪೊಲೀಸರ ಜಲಫಿರಂಗಿ ವಾಹನಗಳ ಮೇಲೆ ಹತ್ತಿ ಪ್ರತಿಭಟನೆ ನಡೆಸಿದರು.
|
ಬ್ಯಾರಿಕೇಡ್ ತೆರವು
ಕರ್ನಾಲ್ ಬೈಪಾಸ್ನಲ್ಲಿ ಸಹ ಪ್ರತಿಭಟನಾಕಾರರು ಪೊಲೀಸರ ಬ್ಯಾರಿಕೇಡ್ಗಳನ್ನು ಮುರಿದು ಬಲವಂತವಾಗಿ ದೆಹಲಿಯೊಳಗೆ ಟ್ರ್ಯಾಕ್ಟರ್ ಮೆರವಣಿಗೆ ಆರಂಭಿಸಿದರು. ದೊಣ್ಣೆ, ಕೋಲುಗಳನ್ನು ಬಳಸಿ ವಾಹನಗಳ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು, ಬ್ಯಾರಿಕೇಡ್ಗಳನ್ನು ಎಳೆದು ಕೆಳಗೆ ನೂಕಿದರು. ಬಳಿಕ ಅವುಗಳನ್ನು ಪಕ್ಕಕ್ಕೆ ಎಳೆದು ಹಾಕಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಸಾಗುವಂತೆ ಮಾಡಿದರು.
|
ಪೊಲೀಸರ 37 ಷರತ್ತುಗಳು
ಗಣರಾಜ್ಯ ದಿನದಂದು ದೆಹಲಿಯ ಕೆಲವು ನಿರ್ದಿಷ್ಟ ಮಾರ್ಗಗಳಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಲು ದೆಹಲಿಪೊಲೀಸರು 37 ಷರತ್ತುಗಳನ್ನು ವಿಧಿಸಿದ್ದರು. ಶಾಂತಿಯುತ ಪ್ರತಿಭಟನೆ, ನಿರ್ದಿಷ್ಟ ಸಮಯ ಮತ್ತು ಸ್ಥಳ ಹಾಗೂ ಪಾಳ್ಗೊಳ್ಳುವಿಕೆಯ ಮಿತಿ ಹೇರಿದ್ದರು. ಆದರೆ, ಅವರು ನೀಡಿದ ಸಮಯಕ್ಕೂ ಮುನ್ನವೇ ರೈತರು ಬ್ಯಾರಿಕೇಡ್ಗಳನ್ನು ಮುರಿದು ಒಳಗೆ ಪ್ರವೇಶಿಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications