ಶಿವಮೊಗ್ಗ ಕಾರ್ಪೋರೇಷನ್ ಬ್ಯಾಂಕ್ ನಲ್ಲಿ ರೈತರಿಗೆ ಹತ್ತು ಕೋಟಿ ವಂಚನೆ
ಶಿವಮೊಗ್ಗ, ಮೇ 26 : ಬ್ಯಾಂಕ್ ಗಳನ್ನು ಕೂಡ ನಂಬುವುದು ಹೇಗೆ ಎಂದು ಪ್ರಶ್ನೆ ಉದ್ಭವಿಸುವಂಥ ವಂಚನೆಯೊಂದು ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಈ ಹಗರಣ ನಡೆದ ವಾರದ ಮೇಲೆ ಬ್ಯಾಂಕ್ ಅಧಿಕಾರಿಗಳು ಎಚ್ಚರಗೊಂಡಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವಂಚನೆ ನಡೆದಿರುವುದು ಬಿ.ಎಚ್.ರಸ್ತೆಯ ಕಾರ್ಪೋರೇಷನ್ ಬ್ಯಾಂಕ್ ಅಧಿಕಾರಿಗಳಿಂದ. ಈ ಬಗ್ಗೆ ಬ್ಯಾಂಕ್ ನ ಹಿರಿಯ ವ್ಯವಸ್ಥಾಪಕ ವೆಂಕಟ ರಾಘವ ಅವರು ಕ್ಷೇತ್ರಾಧಿಕಾರಿ ಮಧುಸೂದನ್ ರಾವ್ ಮೇಲೆ ವಂಚನೆ ದೂರನ್ನು ದಾಖಲಿಸಿದ್ದಾರೆ. ಅಂದಹಾಗೆ ಏನಿದು ವಂಚನೆ ಎಂಬ ಪ್ರಶ್ನೆ ಮೂಡುತ್ತದೆ ಅಲ್ಲವೆ?[ತೀರ್ಥರಾಮೇಶ್ವರ ದೇಗುಲದಲ್ಲಿ ಪುರಾತನ ಕಾಲದ ವಸ್ತುಗಳು ಪತ್ತೆ]

ತಾಲೂಕಿನ ವಿವಿಧ ಗ್ರಾಮಗಳ ರೈತರು ಕೃಷಿ ಸಾಲಕ್ಕಾಗಿ ಕೆಲ ತಿಂಗಳ ಹಿಂದೆ ದಾಖಲೆ ಸಹಿತ ಅರ್ಜಿ ಹಾಕಿಕೊಂಡಿದ್ದರು. ಅದೆಷ್ಟು ಸಲ ಬ್ಯಾಂಕ್ ಗೆ ಎಡತಾಕಿದರೂ ಸಾಲ ಸಿಕ್ಕಿರಲಿಲ್ಲ. ಆದರೆ ಬ್ಯಾಂಕ್ ಅಧಿಕಾರಿಗಳ ವರ್ತನೆ ಅನುಮಾನ ಮೂಡಿಸಿದೆ. ಆಗ ವಹಿವಾಟಿನ ದಾಖಲೆ ಪುಸ್ತಕವನ್ನು ಪರಿಶೀಲಿಸಿದಾಗ ಜಮೀನು ಅರ್ಜಿ ಸಾಲ ಮಂಜೂರಾಗಿದೆ ಎಂದು ದಾಖಲಾಗಿದೆ.
ಜತೆಗೆ ದಾಖಲೆಗಳ ಪ್ರಕಾರವೇ ಕನಿಷ್ಠ ಐದು ಲಕ್ಷದಿಂದ ಇಪ್ಪತ್ತೆಂಟು ಲಕ್ಷದವರೆಗೆ ಸಾಲ ಮಂಜೂರಾಗಿದೆ. ಹಾಗೆ ಮಂಜೂರಾದ ಒಟ್ಟು ಮೊತ್ತ ಹತ್ತು ಕೋಟಿ ರುಪಾಯಿ. ವಂಚನೆಗೊಳಗಾದ ರೈತರು ಕಳೆದ ಶನಿವಾರ ಬ್ಯಾಂಕ್ ಗೆ ಮುತ್ತಿಗೆ ಹಾಕಿ ತರಾಟೆಗೆ ತೆಗೆದುಕೊಂಡಿದ್ದರು.[ಶಿವಮೊಗ್ಗ ಜೈಲಿನಿಂದ ವಿಚಾರಣಾಧೀನ ಬಾಂಗ್ಲಾ ಕೈದಿ ಪರಾರಿ]
ಅಂದಹಾಗೆ ರೈತರ ಖಾತೆಗೆ ಜಮಾವಣೆ ಆದ ಹಣವನ್ನು ಆಂಧ್ರದ ಕೆಲ ವ್ಯಕ್ತಿಗಳ ಖಾತೆಗೆ ವರ್ಗಾಯಿಸಿರುವುದು ಗೊತ್ತಾಗಿದೆ. ಪೊಲೀಸರು ಹಲವು ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications