ರೈತರ ಠೇವಣಿ ಹಣ ಸಾಲಕ್ಕೆ ವಜಾ ಇಲ್ಲ: ಬಂಡೆಪ್ಪ ಕಾಶೆಂಪುರ
ಬೆಂಗಳೂರು, ಸೆಪ್ಟೆಂಬರ್ 24: ಸಹಕಾರಿ ಬ್ಯಾಂಕುಗಳಲ್ಲಿ ರೈತರು ಹಣ ಠೇವಣಿ ಇಟ್ಟಿದ್ದರೂ ಸಹ ಆ ಠೇವಣಿಯನ್ನು ಸಾಲಕ್ಕೆ ಜಮಾ ಮಾಡಲಾಗುವುದಿಲ್ಲ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಹೇಳಿದ್ದಾರೆ.
ಸಹಕಾರಿ ಬ್ಯಾಂಕುಗಳಲ್ಲಿ ರೈತರ ಸಾಲಮನ್ನಾ ಮಾಡುವ ಕುರಿತು ಈ ಮುಂಚೆ ಹೊರಡಿಸಿದ್ದ ಆದೇಶದಲ್ಲಿ, ರೈತರು ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇಟ್ಟ ಹಣವನ್ನು ಅವರ ಸಾಲಕ್ಕೆ ಜಮಾ ಮಾಡಲಾಗುವುದು ಎಂಬ ನಿಯಮಾವಳಿ ಇತ್ತು ಈಗ ಅದನ್ನು ತಿದ್ದುಪಡಿ ಮಾಡಲಾಗಿದೆ.
ಸಹಕಾರಿ ಬ್ಯಾಂಕುಗಳಲ್ಲಿ ಒಂದು ಲಕ್ಷದ ವರೆಗಿನ ರೈತರ ಸಾಲಮನ್ನಾ ಮಾಡಿ ಈಗಾಗಲೇ ಆದೇಶ ಹೊರಡಿಸಿದೆ. ಸಹಕಾರಿ ಬ್ಯಾಂಕುಗಳ ಸಾಲಮನ್ನಾಕ್ಕೆ ಈಗಾಗಲೇ ಎರಡು ಕಂತಿನಲ್ಲಿ ಹಣವನ್ನು ಸಹ ಬಿಡುಗಡೆ ಮಾಡಲಾಗಿದೆ.

ಈ ಹಿಂದಿನ ಸಿದ್ದರಾಮಯ್ಯ ಸರ್ಕಾರವು ಸಹಕಾರಿ ಬ್ಯಾಂಕುಗಳಲ್ಲಿನ 8165 ಕೋಟಿ ರೂಪಾಯಿ ರೈತರ ಸಾಲವನ್ನು ಮನ್ನಾ ಮಾಡಿತ್ತು. ಅದರ ಉಳಿದ ಕಂತನ್ನು ಮೈತ್ರಿ ಸರ್ಕಾರ ಬಿಡುಗಡೆ ಮಾಡಿದೆ.
ದಸರಾ, ದೀಪಾವಳಿ ವೇಳೆಗೆ ರೈತರಿಗೆ ಸಾಲ ಋಣಮುಕ್ತ ಪ್ರಮಾಣ ಪತ್ರ ನೀಡಲಾಗುವುದು. ಸುಮಾರು 22 ಲಕ್ಷ ರೈತರಿಗೆ ಇದರ ಪ್ರಯೋಜನ ದೊರೆಯಲಿದೆ. ಇನ್ನೊಂದು ವರ್ಷದಲ್ಲಿ ಹೊಸದಾಗಿ 15 ಲಕ್ಷ ರೈತರನ್ನು ಸಹಕಾರಿ ಸಂಸ್ಥೆಗಳ ಬೆಳೆ ಸಾಲದ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ. 30 ಸಾವಿರ ಕೋಟಿ ವರೆಗಿನ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾಕ್ಕೂ ಚಾಲನೆ ದೊರೆತಿದೆ ಎಂದು ಬಂಡೆಪ್ಪ ಕಾಶೇಂಪುರ ಹೇಳಿದರು.
ಲೇವಾದೇವಿದಾರರಿಂದ ರೈತರಿಗೆ ಕಿರುಕುಳ ಆಗುತ್ತಿರುವ ಬಗ್ಗೆ ಮಾತನಾಡಿದ ಸಚಿವರು, ಲೇವಾದೇವಿದಾರರು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ ಕೂಡಲೇ ಠಾಣೆಗಳಲ್ಲಿ ದೂರು ದಾಖಲಿಸಿ ಅಥವಾ ಎಸ್ಪಿಗಳ ಗಮನಕ್ಕೆ ತನ್ನಿ ಎಂದು ಸಚಿವರು ಸಲಹೆ ನೀಡಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications