ರೈತರಿಂದ ಸಿಎಂಗೆ ಕ್ಲಾಸ್, ಮತ್ತೆ ಹಂಗಿನ ಮಾತಾಡಿದ ಕುಮಾರಸ್ವಾಮಿ
Recommended Video

ಬೆಂಗಳೂರು, ಡಿಸೆಂಬರ್ 06: ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ ಸಾಲಮನ್ನಾ ಕುರಿತಾಗಿ 'ನಾನು ಬೇರೆಯವರ ಹಂಗಿನಲ್ಲಿದ್ದೇನೆ' ಎಂದು ಹೇಳಿ ಭಾರಿ ವಿವಾದ ಎದುರುಹಾಕಿಕೊಂಡಿದ್ದರು. ಇಂದು ಮತ್ತೆ ಅದೇ ರೀತಿಯ ಮಾತನ್ನು ಸಿಎಂ ಆಡಿದ್ದಾರೆ.
ಇಂದು ವಿಧಾನಸೌಧದಲ್ಲಿ ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಮತ್ತೆ ತಾವು ಬೇರೆಯವರ ಹಂಗಿನಲ್ಲಿರುವುದಾಗಿ ಹೇಳಿದ್ದಾರೆ.
ಸಭೆಯಲ್ಲಿ ರೈತರು ಸಾಲಮನ್ನಾ ವಿಷಯವಾಗಿ ಸಿಎಂ ಕುಮಾರಸ್ವಾಮಿ ಮೇಲೆ ಸಿಟ್ಟಿನಿಂದ ಮಾತನಾಡಿದರು. ಇದರಿಂದ ಬೇಸರಗೊಂಡ ಕುಮಾರಸ್ವಾಮಿ ಭಾವುಕವಾಗಿ ಮಾತನಾಡುತ್ತಾ, 'ನಾನು ಬೇರೆಯವರ ಹಂಗಿನಲ್ಲಿದ್ದೇನೆ, ಹಾಗಾಗಿ ಎಲ್ಲ ನಿರ್ಣಯಗಳೂ ನಾನೇ ಮಾಡಲಾಗದು' ಎಂದು ಹೇಳಿದರು.

ಭಾವುಕರಾದ ಸಿಎಂ ಕುಮಾರಸ್ವಾಮಿ
ಸಭೆಯಲ್ಲಿ ಭಾವುಕರಾದ ಸಿಎಂ, ಯಾವುದೇ ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನು ಕಣ್ಣೀರು ಹಾಕುತ್ತೇನೆ ಎಂದು ಹೇಳಿದರು. ಸಾಲಮನ್ನಾ ಮಾಡಿಯೇ ಸಿದ್ಧ ಎಂದ ಅವರು, ಕೆಲವು ಮಾಹಿತಿಗಳನ್ನು ರೈತರ ಮುಂದೆ ಇಟ್ಟರು.

ಈಗ ಒಂದು ಲಕ್ಷ ಸಾಲಮನ್ನಾ
ರಾಷ್ಟ್ರೀಯ ಬ್ಯಾಂಕುಗಳ ಒಂದು ಲಕ್ಷ ಸಾಲವನ್ನು ಈ ವರ್ಷ ಮತ್ತು ಇನ್ನೊಂದು ಲಕ್ಷ ಸಾಲವನ್ನು ಮುಂದಿನ ವರ್ಷ ಕಂತಿನಂತೆ ಮನ್ನಾ ಮಾಡಲಾಗುವುದು. ಸಹಕಾರಿ ಬ್ಯಾಂಕುಗಳ 50000 ಸಾವಿರ ಸಾಲಮನ್ನಾ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಸಿಎಂ ವಿರುದ್ಧ ರೈತರು ಗರಂ
ರೈತರೊಂದಿಗಿನ ಸಭೆಯಲ್ಲಿ ಆರಂಭದಲ್ಲಿ ಸಿಎಂ ವಿರುದ್ಧ ರೈತರು ಗರಂ ಆಗಿದ್ದರು. ಸಾಲಮನ್ನಾ ಇನ್ನೂ ಆಗಿಲ್ಲ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರು. ಸಹಕಾರಿ ಬ್ಯಾಂಕಿನ ಸಾಲಮನ್ನಾ ಬಹಳ ಕಡಿಮೆ ಆಯಿತು ಉಪಯೋಗಕ್ಕೆ ಬಾರದು ಎಂದು ಕೆಲವರು ಆಕ್ರೋಶಗೊಂಡರು.

ಸಮಾಧಾನವಾದರು ರೈತರು
ಸಿಎಂ ಅವರು ಭಾವಕರಾಗಿ ಮಾತನಾಡಿ, ಸಾಲಮನ್ನಾದ ಮಾಹಿತಿಯನ್ನು ರೈತರ ಮುಂದೆ ಇಟ್ಟನಂತರ ರೈತರು ಸಮಾಧಾನಗೊಂಡರು. ವಿಧಾನಸೌಧದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ವಿವಿಧ ಜಿಲ್ಲೆಯ ರೈತರು ಭಾಗವಹಿಸಿದ್ದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications