ಕೋಟೆ ನಾಡಿನ ಮೇಲೆ ಕರುಣೆ ತೋರಿದ ವರುಣ, ರೈತರಲ್ಲಿ ಸಂತಸ
ಚಿತ್ರದುರ್ಗ, ಅಕ್ಟೋಬರ್ 05 : ಸತತ ಬರದಿಂದ ಕಂಗೆಟ್ಟಿದ್ದ ಕೋಟೆನಾಡು ಚಿತ್ರದುರ್ಗದ ಮೇಲೆ ವರುಣ ಕರುಣೆ ತೋರಿದ್ದಾನೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಾರಿ ಉತ್ತಮವಾಗಿ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಕಳೆದ ಕೆಲವು ದಿನಗಳಿಂದ ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಸೆಪ್ಟೆಂಬರ್ ಅಂತ್ಯದ ವರೆಗೆ ಜಿಲ್ಲೆಯಲ್ಲಿ 265 ಮಿ.ಮೀ.ಮಳೆಯಾಗಿದೆ. ವಾಡಿಕೆಯ ಮಳೆಗೆ ಹೋಲಿಕೆ ಮಾಡಿದರೆ ಈ ಬಾರಿ ಶೇ 29ರಷ್ಟು ಮಳೆಯ ಕೊರತೆ ಉಂಟಾಗಿದೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ರೈತರಿಗೆ ನಮ್ಮದಿ ಉಂಟು ಮಾಡಿದೆ. ಅಲ್ಪಾವಧಿ ಬೆಳೆ ಬೆಳೆಯುವ ರೈತರಿಗೆ ಈ ಮಳೆ ಸಹಾಯಕವಾಗಲಿದೆ ಎನ್ನುವುದು ಕೃಷಿಕರ ಲೆಕ್ಕಾಚಾರ. ಹಿಂಗಾರು ಮಳೆಯೂ ಜಿಲ್ಲೆಯ ಮೇಲೆ ಕರುಣೆ ತೋರಿದರೆ ಅನುಕೂಲವಾಗಲಿದೆ.
ಶೇಂಗಾ ಬಿತ್ತಿದ್ದ ರೈತರು ಬೆಳೆ ವಿಫಲವಾಯಿತು ಎಂದು ತಲೆ ಮೇಲೆ ಕೈಹೊತ್ತು ಕುಳಿತಿದ್ದರು. ಈ ಸಂದರ್ಭದಲ್ಲಿ ಮಳೆ ಬಂದಿದ್ದು, ರೈತರಿಗೆ ಸಲ್ಪ ಮಟ್ಟಿನ ನೆಮ್ಮದಿ ತಂದಿದೆ. ಮಳೆಯಿಂದಾಗಿ ಕೆರೆಗಳು ತುಂಬಿದ್ದು, ಅಂತರ್ಜಲ ಮಟ್ಟವೂ ಹೆಚ್ಚಾಗಿದೆ. ಇದರಿಂದ ಕೊಳವೆ ಬಾವಿಗಳಲ್ಲಿ ನೀರು ಬಂದಿದೆ.
ಹಿರಿಯೂರು ತಾಲೂಕಿನ ಹಿರಿಯೂರು 22, ಬಬ್ಬೂರು 36, ಈಶ್ವರಗೆರೆ 99, ಇಕ್ಕನೂರು 70 ಸೂಗೂರು 16 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲೂಕಿನ ಹೊಳಲ್ಕೆರೆಯಲ್ಲಿ 8.6 ಮಿ.ಮೀ. ಬಿ.ದುರ್ಗದಲ್ಲಿ 16, ಹೆಚ್.ಡಿ.ಪುರದಲ್ಲಿ 5 ಮಿ.ಮೀ.ಮಳೆಯಾಗಿದೆ.

ಮಂಗಳವಾರ ಹಿರಿಯೂರು ತಾಲೂಕಿನ ಈಶ್ವರಗೆರೆಯಲ್ಲಿ ಅತಿಹೆಚ್ಚು ಅಂದರೆ 99 ಮಿ.ಮೀ. ಮಳೆಯಾಗಿದೆ. ಚಳ್ಳಕೆರೆ ತಾಲೂಕಿನ ಚಳ್ಳಕೆರೆಯಲ್ಲಿ 65, ನಾಯಕನಹಟ್ಟಿಯಲ್ಲಿ 25.4, ಡಿ.ಮರಿಕುಂಟೆಯಲ್ಲಿ 26.6, ತಳಕು 26.2 ಮಿ.ಮೀ.ಮಳೆ ಸುರಿದಿದೆ.
ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರುರಿನಲ್ಲಿ 2, ಐನಹಳ್ಳಿ 3.6, ಭರಮಸಾಗರದಲ್ಲಿ 6, ಸಿರಿಗೆರೆಯಲ್ಲಿ 30.8 ಮಿ.ಮೀ.ಮಳೆಯಾಗಿದೆ. ಹೊಸದುರ್ಗ ತಾಲೂಕಿನ ಬಾಗೂರಿನಲ್ಲಿ 6.5, ಮತ್ತೋಡುವಿನಲ್ಲಿ 25.6 ಮಳೆಯಾಗಿದೆ.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications