Onion Prices: ಗ್ರಾಹಕರಿಗೆ ಸಂತಸ ರೈತರಿಗೆ ಕಣ್ಣೀರು ತಂದ ಈರುಳ್ಳಿ!
ಬೆಂಗಳೂರು ಮಾರ್ಚ್ 13: ರಾಜ್ಯದಲ್ಲಿ ಈರುಳ್ಳಿ ಗ್ರಾಹಕರಿಗೆ ಸಂತಸ ತಂದರೆ ರೈತರ ಕಣ್ಣಲ್ಲಿ ನೀರು ತರಿಸಿದೆ. ಪ್ರತೀ ಭಾರಿ ಬೆಲೆ ಏರಿಕೆ ಮೂಲಕ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ರೈತರ ಹೆಗಲಿಗೆ ಹೊರೆಯಾಗಿದೆ. ಏಕಾಏಕಿ ಬೆಲೆ ಕುಸಿತದಿಂದ ಈರುಳ್ಳಿ ಬೆಳೆದ ರೈತರು ಕಂಗಾಲಾಗಿದ್ದಾರೆ.
ಹೌದು.. ಈರುಳ್ಳಿ 10 ರೂಪಾಯಿಯಂತೆ. 10 ಕೆಜಿ (100 ರೂಪಾಯಿ) ಲೆಕ್ಕದಲ್ಲಿ ಮಾರಾಟವಾಗುತ್ತಿದೆ. ಈಗ ಮಾರುಕಟ್ಟೆಗಿಂತಲೂ ಗಲ್ಲಿ, ಗಲ್ಲಿಯಲ್ಲಿ ಈರುಳ್ಳಿಯನ್ನು ಚೀಲಗಟ್ಟಲೆ ಮಾರುತ್ತಿರುವುದು ಸಾಮಾನ್ಯವಾಗಿದೆ. ಇನ್ನು ಸಂಜೆಯಾಗುತ್ತಿದ್ದಂತೆ ಉಳಿದ ಈರುಳ್ಳಿಯನ್ನು ಕೇಳಿದಷ್ಟು ಕೊಟ್ಟು ಹೋಗುತ್ತಿದ್ದಾರೆ ಮಾರಾಟಗಾರರು.

ಈರುಳ್ಳಿಯನ್ನು ಈಗ ಕೆಜಿ ಲೆಕ್ಕಚಾರದಲ್ಲಿ ಮಾರುವುದೇ ಅಪರೂಪವಾಗಿದೆ. ಈಗೇನಿದ್ರು ಐದು ಕೆಜಿಗೆ ಇಷ್ಟು ರೂಪಾಯಿಯಂತೆ ಮಾರಾಟ ಮಾಡಲಾಗುತ್ತಿದೆ. 10 ಕೆಜಿಗೆ ಇಷ್ಟು ಎಂದೇ ಮಾರಾಟಗಾರರು ಮಾರಾಟ ಮಾಡುತ್ತಾರೆ. ಪ್ರತಿ ಚೀಲ ಈರುಳ್ಳಿ (50 ಕೆಜಿ) ದರ ಮಾರುಕಟ್ಟೆಯಲ್ಲಿ ಸೂಪರ್ಕ್ವಾಲಿಟಿ ಇದ್ದರೆ 600-700 ರೂಪಾಯಿ. ಅಬ್ಬಾಬ್ಬ ಎಂದರೆ ಸಾವಿರ ರೂಪಾಯಿ. ಇನ್ನು ಗುಣಮಟ್ಟದಲ್ಲಿ ಒಂಚೂರು ಕಡಿಮೆ ಇದ್ದರೂ ಐದು ನೂರು ರೂಪಾಯಿಗೆ ಚೀಲವನ್ನೇ ಕೊಡುತ್ತಿದ್ದಾರೆ.
ಇನ್ನೂ ಕೆಲವರು ತೂಕದ ಬಗ್ಗೆಯೂ ಅಷ್ಟೊಂದು ತಲೆ ಕೆಡಿಸಿಕೊಳ್ಳುವುದಿಲ್ಲ. ನಾಲ್ಕಾರು ಕೆಜಿ ಹೆಚ್ಚಿದ್ದರೂ ಚೀಲದ ಲೆಕ್ಕದಲ್ಲೇ ಮಾರಾಟ ಮಾಡುತ್ತಾರೆ. ಹೀಗಾಗಿ ಈರುಳ್ಳಿ ಬೆಳೆದ ರೈತರು ಪರಿತಪಿಸುವಂತಾಗಿದೆ. ರಾಜ್ಯಾದ್ಯಂತ ಈರುಳ್ಳಿ ಬೆಲೆ ಕುಸಿದಿದೆ. ಇದರಿಂದಾಗಿ ರೈತರು ನಷ್ಟವನ್ನು ಅನುಭವಿಸುತ್ತಿದ್ದಾರೆ. ಹೇಗಾದರೂ ಮಾಡಿ ಈರುಳ್ಳಿ ಬೆಳೆದ ರೈತರನ್ನು ಕಾಪಾಡಲು ಕನಿಷ್ಠ ಬೆಂಬಲ ಬೆಲೆಯನ್ನಾದರೂ ಘೋಷಣೆ ಮಾಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ.

ದಾಸ್ತಾನನಿಂದ ಮಾರಾಟ:
ಈರುಳ್ಳಿ ಬೆಲೆಯನ್ನು ನಿಯಂತ್ರಣ ಮಾಡಲು ಕೇಂದ್ರ ಸರ್ಕಾರ ರಫ್ತು ನಿಷೇಧ ಮಾಡಿರುವುದು ಹಾಗೂ ದಾಸ್ತಾನು ಮಾಡಿಟ್ಟುಕೊಂಡಿರುವ ಈರುಳ್ಳಿಯನ್ನು ಮಾರುಕಟ್ಟೆಗೆ ಬಿಟ್ಟಿರುವುದೇ ದರ ಕುಸಿತಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರ ಹೊಸ ಈರುಳ್ಳಿಯನ್ನು ಸಂಗ್ರಹಿಸಿಟ್ಟುಕೊಳ್ಳಲು ಹಳೆ ದಾಸ್ತಾನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದರಿಂದ ಬೆಲೆ ಕುಸಿದಿದೆ ಎಂಬುದು ರೈತರ ವಿಶ್ಲೆಷಣೆಯಾಗಿದೆ.
ಈರುಳ್ಳಿ ದರ ಕುಸಿದಿದ್ದರೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದರೆ, ರಫ್ತಿಗೆ ಅವಕಾಶ ಯಾಕೆ ನೀಡುತ್ತಿಲ್ಲ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಬೇಸಿಗೆಯಲ್ಲಿಯೂ ರೈತರು ಕಷ್ಟಪಟ್ಟು ಈರುಳ್ಳಿ ಬೆಳೆದಿದ್ದಾರೆ. ಬರದ ನಡುವೆ, ನೀರಿನ ಅಭಾವದ ನಡುವೆಯೂ ಈರುಳ್ಳಿ ಬೆಳೆದಿದ್ದಾರೆ. ಈ ವರ್ಷ ಈರುಳ್ಳಿ ದರ ಬಂದೇ ಬರುತ್ತದೆ ಎಂದು ನಿರೀಕ್ಷೆ ಇಟ್ಟುಕೊಂಡು ಸಾಲಸೋಲ ಮಾಡಿ ಬೆಳೆದಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಕುಸಿತವಾಗಿರುವುದು ರೈತರನ್ನು ಕಂಗೆಡುವಂತೆ ಮಾಡಿದೆ.

ಆದರೆ ಗ್ರಾಹಕರು ಮಾತ್ರ ಈರುಳ್ಳಿ ಬೆಲೆ ಕುಸಿತದಿಂದಾಗಿ ಸಂತೋಷದಿಂದ ಕನಿಷ್ಠ ಅಂದ್ರು ಐದಾರು ಕೆಜಿ ಖರೀದಿಸುತ್ತಿದ್ದಾರೆ. ಪ್ರತೀ ಭಾರಿ ಬೆಲೆ ಏರಿಕೆಯಿಂದ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ಬೆಲೆ ಕಡಿಮೆಯಿಂದಾಗಿ ಗ್ರಾಹಕ ಮೊಗದಲ್ಲಿ ಮಂದಹಾಸ ಮೂಡಿಸಿದೆ.
-
Horoscope March 6: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒಳಿತು, ಪ್ರೇಮಿಗಳಿಗೆ ಕಾದಿವೆ ಮಧುರ ಕ್ಷಣ, ದಿನ ಭವಿಷ್ಯ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Farmer Mall: ಕೋಲಾರದಲ್ಲಿ ರೈತ ಮಾಲ್ ಸ್ಥಾಪನೆ: ಕೃಷಿ ಸಹಾಯವಾಣಿಗೆ ಎಐ ತಂತ್ರಜ್ಞಾನದ ಸ್ಪರ್ಶ -
ಕರ್ನಾಟಕ ಬಜೆಟ್ 2026-27: ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ನಾಗರಿಕ - ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ -
ತಿಪಟೂರಿನಲ್ಲಿ ರಾಶಿ ಪೂಜೆ: ಸಾವಯವ ಕೃಷಿಗೆ ಸಾವಿರಕ್ಕೂ ಹೆಚ್ಚು ರೈತರ ಬೆಂಬಲ -
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್












Click it and Unblock the Notifications