ಗೋಹತ್ಯೆ ನಿಷೇಧ ಕಾಯ್ದೆ: ವೀರಸಂಗಯ್ಯ ಮನದಾಳದ ಮಾತು
ಜಾನುವಾರು ಹತ್ಯೆ ನಿಷೇಧ ಕಾಯಿದೆಯನ್ನು ರೈತರು ಏಕೆ ವಿರೋಧಿಸಬೇಕು? ರೈತ ಮುಖಂಡ ವೀರಸಂಗಯ್ಯ ಅವರ ತರ್ಕ. ಮೊದಲನೆಯದಾಗಿ ಇದರಲ್ಲಿ ಕೆಲವು ವಿಷಯಗಳು ಅವೈಜ್ಞಾನಿಕವಾಗಿವೆ. ಕೃಷಿ ಜೊತೆಗೆ ಜಾನುವಾರು ಸಾಕಾಣೆ ಕೂಡಾ ಒಂದು. ರಾಜ್ಯದ 27,500 ಗ್ರಾಮಗಳಲ್ಲಿ ಜಾನುವಾರು ಇಲ್ಲದ ಗ್ರಾಮ ಇಲ್ಲವೇ ಇಲ್ಲ. ಇದೊಂದು ಉಪಕಸುಬು. ರೈತರ ಮನೆಗಳಲ್ಲಿ ಆಕಳು, ಎಮ್ಮೆ, ಎತ್ತು ಸಾಕಾಣೆ ಸಾಮಾನ್ಯ.
ಕೃಷಿಯಲ್ಲಿ ಟ್ರಾಕ್ಟರ್ ಬಳಕೆ ಹೆಚ್ಚಾದಾಗಿನಿಂದ ರಂಟೆ ಕುಂಟೆ ಹೊಡೆಯಲು ಎತ್ತುಗಳ ಬಳಕೆ ಕಡಿಮೆ ಆಗಿದೆ. ಹಾಗಾಗಿ ಮನೆಯಲ್ಲಿ ಗಂಡು ಕರ ಜನಿಸಿದರೆ ಅವುಗಳ ಬಗ್ಗೆ ರೈತರಿಗೆ ಸಹಜವಾಗಿ ನಿರ್ಲಕ್ಷ್ಯ ಬಂದಿದೆ. ಹೆಣ್ಣು ಕರು ಹಾಕಿದರೆ ಮುಂದೆ ಹಾಲು ಉತ್ಪಾದನೆ ಆಗುತ್ತೆ ಎಂದು ಎಲ್ಲರೂ ಕಾಳಜಿವಹಿಸುತ್ತಾರೆ.

ರೈತರಿಗೆ ಆರ್ಥಿಕ ಹೊರೆಯಾಗಲ್ಲವೇ?
ಗಂಡು ಕರುಗಳನ್ನು ಅಥವಾ ಕೋಣಗಳನ್ನು ನಾವು ರೈತರು ಮಾರುತಿದ್ವಿ. ಅಲ್ಲಿಂದ ಅವು ಸಹಜವಾಗಿ ಮಾಂಸೋದ್ಯಮಕ್ಕೆ ಹೋಗ್ತಿದ್ವು. ಈಗ ಹೊಸ ಕಾನೂನಿನ ಪ್ರಕಾರ 13 ವರ್ಷಗಳ ಕಾಲ ಸಾಕಾಣೆ ಮಾಡುವುದು ಕಡ್ಡಾಯ. ಇದರಿಂದ ಉತ್ಪಾದನೆ ಏನೂ ಇಲ್ಲವೆಂದ ಮೇಲೆ ರೈತರಿಗೆ ಆರ್ಥಿಕ ಹೊರೆಯಾಗಲ್ಲವೇ? ಗಂಡು ಕರುಗಳನ್ನು ಮಾರಿ ಬರುತ್ತಿದ್ದ ನಾಲ್ಕು ಕಾಸಿಗೂ ಈ ಕಾನೂನು ಕುತ್ತು ತಂದಿದೆ. ಜೊತೆಗೆ 13 ವರ್ಷಗಳ ಕಾಲ ಸಾಕಾಣೆ ಮಾಡುವ ಹೊರೆಯೂ ರೈತನ ಮೇಲೆ ಬಿದ್ದಂತಾಯ್ತು. ಇನ್ನು ಗೋಶಾಲೆಗಳಿಗೆ ಕಳಿಸೋಕೆ ಗೋಶಾಲೆಗಳೇ ಇಲ್ಲ.

ಪಶುಸಂಗೋಪನೆ ಇಲಾಖೆಯ ಅನುಮತಿ ಪಡೆಯಬೇಕು
ಇದೀಗ ಇವರದ್ದೇ ಕಾನೂನಿನ ಪ್ರಕಾರ 13 ವರ್ಷ ದಾಟಿದ ರಾಸುಗಳು ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿವೆ. ಈಗ ಅವುಗಳನ್ನು ಏನು ಮಾಡಬೇಕೆಂಬ ಪ್ರಸ್ತಾವ ಈ ಕಾಯಿದೆಯಲ್ಲಿಲ್ಲ.
ರೈತರ ಮನೆಗಳಲ್ಲಿ ಆಕಳು ಗೊಡ್ಡ ಬಿದ್ದಾಗ್ಲೂ ಮಾರಾಟ ಮಾಡುವುದು ರೂಢಿ. ಅವುಗಳನ್ನು ಮಾರಿದ ನಂತರ ಹಾಲು ಕೊಡುವ ಅಥವಾ ಗಬ್ಬ ಆಗಿರುವ ರಾಸುಗಳನ್ನು ಕೊಳ್ಳುತ್ತೇವೆ. ಈಗಿನ ಕಾನೂನಿನ ಪ್ರಕಾರ ಮಾರುವವ ಮತ್ತು ಕೊಳ್ಳುವವ ಪಶುಸಂಗೋಪನೆ ಇಲಾಖೆಯ ಅನುಮತಿ ಪಡೆಯಬೇಕು. ಆ ಕೆಲಸ ಮಾಡಲು ರೈತರು ಊರಿಂದೂರಿಗೆ ಅಲೆಯಬೇಕಾಗುತ್ತೆ. ಇದು ಪ್ರಾಕ್ಟಿಕಲ್ ಪ್ರಾಬ್ಲಮ್ ಅಲ್ಲವೇ? ಎಂದು ಪ್ರಶ್ನಿಸುತ್ತಾರೆ ಜಿ.ಎಂ.ವೀರಸಂಗಯ್ಯ.

ಒಂದು ವರ್ಷದ ವಹಿವಾಟು 20 ಸಾವಿರ ಕೋಟಿ
ರೈತರ ಆರ್ಥಿಕ ಸ್ಥಿತಿ ಮೊದಲೇ ಕುಸಿದು ಬಿದ್ದಿರುವಾಗ ಈ ಕಾನೂನು ರೈತರನ್ನು ಇನ್ನಷ್ಟು ಸಮಸ್ಯೆಗಳಿಗೆ ದೂಡುವುದರಲ್ಲಿ ಯಾವುದೇ ಸಂಶಯವಿಲ್ಲ. ಕರ್ನಾಟಕದಲ್ಲಿ 8,20,000 ರೈತರು ಹಾಲು ಉತ್ಪಾದಕರ ಸಂಘಗಳಲ್ಲಿ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 14 ಕೇಂದ್ರಗಳ ಮೂಲಕ ಪ್ರತಿ ದಿನ 79 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗ್ತಿದೆ. ಕೆಎಂಎಫ್ ನ ಒಂದು ವರ್ಷದ ವಹಿವಾಟು 20 ಸಾವಿರ ಕೋಟಿ ರೂಗಳಿದೆ. ಇಷ್ಟೆಲ್ಲಾ ವಹಿವಾಟು ನಡೆಯುತ್ತಿರುವುದು ಸಣ್ಣ ರೈತರಿಂದಲೇ ಎಂಬುದು ತಿಳಿಯಬೇಕಿದೆ. ಈಗ ಇಷ್ಟೂ ರೈತ ಕುಟುಂಬಗಳ ಮೇಲೆ ಅನುತ್ಪಾದಕವಾದ ರಾಸುಗಳನ್ನು ಸಾಕುವ ಹೊರೆ ಬೀಳುತ್ತದೆ.

ರೈತರ ಭಾವನೆಗಳೊಂದಿಗೆ ಆಟವಾಡಬೇಡಿ
ಈ ಕಾನೂನಿನಲ್ಲಿ 13 ವರ್ಷ ಮೇಲ್ಪಟ್ಟ ಹಸುಗಳನ್ನು ಏನು ಮಾಡಬೇಕೆಂಬ ಸ್ಪಷ್ಟ ಸೂಚನೆ ಇಲ್ಲ. ಗೋಶಾಲೆಗೆ ಕೊಡಿ ಎನ್ನುತ್ತೀರಿ. ಎಲ್ಲಿವೆ ಗೋಶಾಲೆ? ಗೋಶಾಲೆಗೆ ಕೊಡುವುದಾದರೆ ಉಚಿತವಾಗಿ ಕೊಡಬೇಕೆ? ಮುದಿ ದನವಾದರೂ ಅದು ಅರ್ಧ ಬೆಲೆಗಾದರೂ ಮಾರಾಟವಾಗುತ್ತವೆ. ಆ ಹಣ ನಮಗೆ ಕೊಡುವವರಾರು? ಸರ್ಕಾರ ಆ ಬಗ್ಗೆ ಚಿಂತನೆ ನಡೆಸಿದೆಯೇ?
ಹಸು, ರಾಸು, ಆಕಳು, ಗೋವು ನಿಮಗೆ ಆಪ್ಯಾಯಮಾನವಾದ ಯಾವುದೇ ಹೆಸರಿನಿಂದ ಭಾವನಾತ್ಮಕವಾಗಿ ಸಂಬೋಧಿಸಿ, ಅವುಗಳನ್ನು ಪೂಜಿಸಿ ನಿಮಗೆ ಬೇಕಾದ್ದು ಮಾಡಿ. ಭಾವನೆಗಳೊಂದಿಗೆ ಆಟವಾಡಬೇಡಿ. ರೈತ ಸಮುದಾಯವನ್ನು ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ತಂದೊಡ್ಡುವ ಈ ಕಾನೂನನ್ನು ಹಿಂಪಡೆಯಿರಿ. ಮರುಪರಿಶೀಲಿಸಿ. ಇಲ್ಲವೇ ಮುಂಬರುವ ದಿನಗಳಲ್ಲಿ ಜಾನುವಾರು ಸಾಕಾಣೆ ಮಾಡುವವರ ಹೋರಾಟವೂ ಹುಟ್ಟಿಕೊಳ್ಳುವುದರಲ್ಲಿ ಸಂಶಯವಿಲ್ಲ.
ಕಾಯಿದೆಯನ್ನು ಪುನರ್ ಪರಿಶೀಲಿಸಿ. ನ್ಯಾಯಸಮ್ಮತವಾದ ಕಾನೂನು ರಚಿಸಿ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications