ಮೇ 23ರ ನಂತರ 1.5 ಲಕ್ಷ ರೈತರ 900 ಕೋಟಿ ಸಾಲಮನ್ನಾ ಬಿಡುಗಡೆ
ಬೆಂಗಳೂರು, ಮೇ 8: ರೈತರ ಸಾಲ ಮನ್ನಾ ಬಗ್ಗೆ ಸುದ್ದಿಯ ನಿರೀಕ್ಷೆಯಲ್ಲಿ ಇರುವವರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. 1.5 ಲಕ್ಷ ರೈತರ ಸುಮಾರು 900 ಕೋಟಿ ರುಪಾಯಿ ಸಾಲಮನ್ನಾ ಮೊತ್ತ ಬಿಡುಗಡೆಗೆ ಸಿದ್ಧವಾಗಿದ್ದು ಮೇ 23ರ ಲೋಕಸಭಾ ಚುನಾವಣೆ ನಂತರ ರಾಜ್ಯ ಸರಕಾರದಿಂದ ಬಿಡುಗಡೆ ಮಾಡಲಾಗುವುದು.
ಸಾಲ ಮನ್ನಾ ಯೋಜನೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಉನ್ನತ ಮಟ್ಟದ ಸಭೆ ಕರೆದಿದ್ದರು. 2018 ರ ಡಿಸೆಂಬರ್ ತಿಂಗಳಿನಿಂದ ರೈತರ ಸಾಲವನ್ನು ಹಂತಹಂತವಾಗಿ ಖಾತೆಗೆ ಭರ್ತಿ ಮಾಡಲಾಗುತ್ತಿದೆ. ಈವರೆಗೆ ಸಹಕಾರ ಸಂಘಗಳ 8.3 ಲಕ್ಷ ರೈತರಿಗೆ 3500 ಕೋಟಿ ಸಾಲ ಮನ್ನಾ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಯಿತು.
ಇನ್ನು ವಾಣಿಜ್ಯ ಬ್ಯಾಂಕುಗಳಲ್ಲಿ 7.5 ಲಕ್ಷ ರೈತರಿಗೆ 3930 ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ. 1.5 ಲಕ್ಷ ರೈತರ ಸುಮಾರು 900 ಕೋಟಿ ರುಪಾಯಿ ಸಾಲ ಮನ್ನಾ ಮೊತ್ತ ಬಿಡುಗಡೆಗೆ ಸಿದ್ಧವಾಗಿದ್ದು, ಮೇ 23ರ ನಂತರ ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಸಹಕಾರ ಸಂಘಗಳಲ್ಲಿ ರೈತರು ನಿಯಮಾವಳಿಗಳಂತೆ ಅರ್ಹತೆ ಪಡೆದ ದಿನದಂದು ಅವರ ಖಾತೆಗೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾ ದೇವಿ ತಿಳಿಸಿದರು. ಒಟ್ಟಾರೆಯಾಗಿ ವಾಣಿಜ್ಯ ಬ್ಯಾಂಕು ಹಾಗೂ ಸಹಕಾರಿ ಬ್ಯಾಂಕುಗಳ 15.5 ಲಕ್ಷ ರೈತರ 7417 ಕೋಟಿ ರುಪಾಯಿ ಮನ್ನಾ ಮಾಡಲಾಗಿದೆ ಎಂದು ಆರ್ಥಿಕ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ತಿಳಿಸಿದರು.
ರೈತರ ಸಾಲ ಮನ್ನಾ ಯೋಜನೆಯನ್ನು ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ನಿಯಮಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ರೈತರ ಸಾಲಮನ್ನಾ ಈ ಆರ್ಥಿಕ ವರ್ಷದಲ್ಲೇ ಆಗಲಿದೆ ಎಂದು ಅವರು ತಿಳಿಸಿದರು. ರೈತರ ಸಾಲ ಮನ್ನಾ ಯೋಜನೆಗೆ ಹಣಕಾಸು ಕೊರತೆ ಇಲ್ಲ ಹಾಗೂ ಈಗಾಗಲೇ ಪ್ರಕಟಿಸಿರುವ ಯೋಜನಗಳಿಗೆ ಸಾಲ ಮನ್ನಾದಿಂದ ಯಾವುದೇ ಅಡ್ಡಿಯೂ ಆಗುವುದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದರು.
ಸಾಲಮನ್ನಾ ಯೋಜನೆಯ ಅನುಷ್ಠಾನವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಪ್ರಕ್ರಿಯೆಯನ್ನು ವಾರಕ್ಕೊಮ್ಮೆ ಪರಿಶೀಲಿಸುವಂತೆ ಸಹಕಾರ ಸಚಿವರಿಗೆ ಹಾಗೂ ಸಹಕಾರ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಪಶುಸಂಗೋಪನಾ ಸಚಿವ ನಾಡಗೌಡ ಹಾಗೂ ಸಹಕಾರ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications