ಕೃಷಿ ಕಾಯ್ದೆಗೆ ವಿರೋಧ: ಬಜೆಟ್ ದಿನದಂದು ರೈತರಿಂದ ಕಾಲ್ನಡಿಗೆ ಮೆರವಣಿಗೆ
ನವದೆಹಲಿ, ಜನವರಿ 26: ಗಣರಾಜ್ಯೋತ್ಸವ ದಿನದಂದು ಬೃಹತ್ ಟ್ರ್ಯಾಕ್ಟರ್ ಮೆರವಣಿಗೆ ನಡೆಸುತ್ತಿರುವ ರೈತರು, ಕೇಂದ್ರ ಸರ್ಕಾರ ಬಜೆಟ್ ಮಂಡಿಸುವ ದಿನವಾದ ಫೆಬ್ರವರಿ 1ರಂದು ಎರಡನೆಯ ಮೆರವಣಿಗೆ ನಡೆಸಲಿದ್ದಾರೆ. ಆಯವ್ಯಯ ಮಂಡನೆ ದಿನದಂದು ಕಾಲ್ನಡಿಗೆಯ ಜಾಥಾ ನಡೆಸುವುದಾಗಿ ರೈತ ಮುಖಂಡರು ಸೋಮವಾರ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ರೈತರೊಂದಿಗೆ ನಡೆಸುತ್ತಿರುವ ಸಂಧಾನ ಸಭೆಗಳ ಭಾಗವಾಗಿರುವ ಕೀರ್ತಿ ಕಿಸಾನ್ ಒಕ್ಕೂಟದ ಮುಖಂಡ ಡಾ. ದರ್ಶನ್ ಪಾಲ್, ಫೆಬ್ರವರಿ ಒಂದರಂದು ರೈತರು, ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಾಗಿ ಸಂಸತ್ತಿನ ಕಡೆಗೆ ಕಾಲ್ನಡಿಗೆಯಲ್ಲಿ ಮೆರವಣಿಗೆ ಸಾಗಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಕಾಲ್ನಡಿಗೆ ಜಾಥಾದ ಬಗ್ಗೆ ಇನ್ನು ಒಂದೆರಡು ದಿನಗಳಲ್ಲಿ ಸಂಪೂರ್ಣ ವಿವರ ನೀಡಲಾಗುವುದು. ಆದರೆ ಮೆರವಣಿಗೆ ಶಾಂತಿಯುತವಾಗಿರಲಿದೆ. ಗಣರಾಜ್ಯೋತ್ಸವ ಆಚರಣೆಯಲ್ಲಿ ಸಾಮಾನ್ಯ ಜನರು ಭಾಗವಹಿಸುವುದರಿಂದ ಮಂಗಳವಾರ ನಡೆಯಲಿರುವ ಟ್ರ್ಯಾಕ್ಟರ್ ಮೆರವಣಿಗೆ ವಿಶಿಷ್ಟವಾಗಿರಲಿದೆ ಎಂದು ಹೇಳಿದರು.

'ಮೆರವಣಿಗೆ ಬಳಿಕ ರೈತರು ತಮ್ಮ ಗ್ರಾಮಗಳಿಗೆ ಮರಳಿ ಹೋಗದಂತೆ ಕೋರಲಾಗಿದೆ. ಬದಲಾಗಿ ಗಡಿಗಳಲ್ಲಿಯೇ ಉಳಿದುಕೊಂಡು ಪ್ರತಿಭಟನೆ ಮುಂದುವರಿಸುವಂತೆ ಸೂಚನೆ ನೀಡಲಾಗಿದೆ' ಎಂದು ಭಾರತೀಯ ಕಿಸಾನ್ ಒಕ್ಕೂಟದ ಅಧ್ಯಕ್ಷ ಬಲಬೀರ್ ಸಿಂಗ್ ರಾಜೇವಾಲ್ ತಿಳಿಸಿದರು.
ದೆಹಲಿ ಪೊಲೀಸರು ಸೂಚಿಸಿರುವ ನಿರ್ದಿಷ್ಟ ಮಾರ್ಗಗಳಲ್ಲಿಯೇ ಟ್ರ್ಯಾಕ್ಟರ್ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಗೆ ವಾಹನಗಳ ಮಿತಿ ಅಥವಾ ಸಮಯ ಮಿತಿ ವಿಧಿಸಿಲ್ಲ. ನಿರ್ದಿಷ್ಟ ಮಾರ್ಗಗಳಲ್ಲಿಯೇ ಪಥಸಂಚಲನ ವಾಪಸ್ ಬರಲಿದೆ ಎಂದು ದರ್ಶನ್ ಪಾಲ್ ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications