ತಮಿಳುನಾಡಿಗೆ ಮತ್ತೆ ಹರಿದ ಕಾವೇರಿ, ನದಿಗಿಳಿದು ರೈತರ ಪ್ರತಿಭಟನೆ
ಮೈಸೂರು, ಜುಲೈ 22 : ಕೃಷ್ಣ ರಾಜ ಸಾಗರ ಮತ್ತು ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ನಿಲ್ಲಿಸಿ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ತಿ.ನರಸೀಪುರದ ಶ್ರೀ ಗುಂಜಾನರಸಿಂಹ ಸ್ವಾಮಿ ದೇವಾಲಯದ ಬಳಿ ಕಾವೇರಿ ಕಪಿಲಾ ನದಿಗೆ ಇಳಿದು ರೈತರು ಶನಿವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಿರಗಸೂರು ಶಂಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ರೈತರು ಕಾವೇರಿ ನದಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡಿಗೆ ಹರಿಯಲು ಬಿಟ್ಟಿರುವ ನೀರನ್ನು ತಕ್ಷಣಕ್ಕೆ ನಿಲ್ಲಿಸಿ ಕಬಿನಿ ಎಡ ಮತ್ತು ಬಲದಂಡ ನಾಲೆಗಳಿಗೆ ಕೂಡಲೇ ಹರಿಸುವ ತನಕ ನದಿಯಿಂದ ಹೊರ ಬರುವುದಿಲ್ಲ ಎಂದು ಪಟ್ಟುಹಿಡಿದರು. ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಈ ವೇಳೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಿರಗಸೂರು ಶಂಕರ್, ರಾಜ್ಯದಲ್ಲಿ ಕಳೆದ ಮೂರು ವರ್ಷದಿಂದ ಮಳೆ ಬೆಳೆ ಇಲ್ಲದೆ ರೈತರು ಭೀಕರ ಬರಗಾಲದಿಂದ ತತ್ತರಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ರೈತರು ಹೊಟ್ಟೆಪಾಡಿಗಾಗಿ ಹೊಲ ಗದ್ದೆ ಮನೆಗಳನ್ನು ತೊರೆದು ಪಟ್ಟಣದತ್ತ ಗುಳೆ ಹೋಗಿದ್ದಾರೆ. ಆದರೂ ಇಲ್ಲಿನ ರೈತರ ಹಿತ ಕಾಪಾಡದೆ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಸಕ್ತ ವೈನಾಡು ಮತ್ತು ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳಿಗೆ ನೀರು ಹರಿದು ಬರುತ್ತಿರುವುದರಿಂದ ಭರ್ತಿಯಾಗುವ ಲಕ್ಷಣಗಳು ಕಂಡು ಬರುತ್ತಿದ್ದು, ರೈತರು ಹರ್ಷಗೊಂಡಿದ್ದಾರೆ. ಸರ್ಕಾರ ಜಲಾಶಯ ಭರ್ತಿಯಾಗುವ ಮೊದಲೇ ತಮಿಳುನಾಡಿಗೆ ನೀರು ಬಿಟ್ಟು ಈ ಭಾಗದ ರೈತರಿಗೆ ಎಳ್ಳುನೀರು ಬಿಡುವಂತಹ ಧೋರಣೆಯನ್ನು ತಾಳಿರುವುದು ಖಂಡನೀಯ. ನದಿಗೆ ಬಿಟ್ಟಿರುವ 2500 ಕ್ಯೂಸೆಕ್ ನೀರನ್ನು ನಿಲ್ಲಿಸಿ ನಾಲೆಗಳಿಗೆ 2000 ಕ್ಯೂಸೆಕ್ ನೀರು ಬಿಡಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ಮನೋಜ್ ಕುಮಾರ್, ನೀರಾವರಿ ಇಲಾಖೆಯ ಎ.ಇ ಮಹೇಶ್, ವರದರಾಜು ಅವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ರೈತರ ಹಿತ ಕಾಯಲು ನಾವು ಎಲ್ಲ ರೀತಿಯಲ್ಲೂ ಬದ್ಧರಾಗಿದ್ದೇವೆ. ಈ ವಿಚಾರವಾಗಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಸದ್ಯದಲ್ಲೇ ರೈತರ ಸಭೆಯನ್ನು ಕರೆದು ನಾಲೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ವೃತ್ತ ನಿರೀಕ್ಷಕ ಮನೋಜ್ ಕುಮಾರ್ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ಮಾತಿಗೆ ಸ್ಫಂದಿಸಿದ ರೈತರು ಸೋಮವಾರದವರೆಗೆ ಗಡುವು ನೀಡಿ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.

ಈ ನಡುವೆ ಮೂಗೂರು ಗೌಡ್ರು ಪ್ರಕಾಶ್ ಎಂಬುವರು ಅಧಿಕಾರಿಗಳ ಭರವಸೆ ಮಾತನ್ನು ನಂಬಲು ಸಾಧ್ಯವಿಲ್ಲ, ತಕ್ಷಣದಲ್ಲೇ ನಿಮ್ಮ ಮೇಲಾಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಮಾಹಿತಿಯನ್ನು ನೀಡಿ ನೀರು ಬೀಡುವ ದಿನಾಂಕವನ್ನು ನಿಗದಿಪಡಿಸಬೇಕೆಂದು ಪಟ್ಟು ಹಿಡಿದರು. ನಿಮ್ಮಿಂದ ನಿಖರ ಉತ್ತರ ದೊರೆಯದೆ ಇದ್ದಲ್ಲಿ ಈ ಭಾಗದ ರೈತ ಹಿತಕ್ಕಾಗಿ ಪ್ರಾಣ ಬಿಡಲು ಸಿದ್ಧ ಎಂದು ಹೇಳಿ ನದಿಗೆ ಹಾರಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ರಕ್ಷಿಸಿ ತೆಪ್ಪದ ಮೂಲಕ ದಡಕ್ಕೆ ಸೇರಿಸಿದರು. ಮುಂಜಾಗೃತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications