'ರೈತರನ್ನು ನಿರ್ಲಕ್ಷಿಸಿದರೆ ಸಿದ್ದರಾಮಯ್ಯಗೆ ಉಳಿಗಾಲ ಇಲ್ಲ'
ಬೆಳಗಾವಿ, ನವೆಂಬರ್ 21: ಸುವರ್ಣ ಸೌಧದಲ್ಲಿ ಸೋಮವಾರ ಅಧಿವೇಶನ ಪ್ರಾರಂಭವಾಗಲಿದೆ ಆದರೆ ಅಧಿವೇಶನಕ್ಕೆ ಮುನ್ನವೇ ರೈತರು ಸುವರ್ಣ ಸೌಧವನ್ನು ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಸರ್ಕಾರದ ವಿರುದ್ಧ ಆಕ್ರೋಶವನ್ನೂ ವ್ಯಕ್ತಪಡಿಸಿದ್ದಾರೆ.
ಸುವರ್ಣ ಸೌಧದಲ್ಲಿ ಸೋಮವಾರ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದ್ದು, ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಆದರೆ ರೈತಸಂಘವು ಬೆಳಗಾವಿಯಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಗು ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ಪ್ರಾರಂಭಿಸಿದೆ.
ಇನ್ನು ರೈತರು ಐವತ್ತಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸಿದ್ದು, ಸುವರ್ಣ ಸೌಧದ ಬಳಿ ಧರಣಿ ಕುಳಿತಿದ್ದಾರೆ. ಸೌಧದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಯಾಗಿರುವ ಹಿನ್ನೆಲೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.[ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಐಷಾರಾಮಕ್ಕೆ ಕತ್ತರಿ]

ರೈತಸಂಘದ ಮುಖ್ಯಸ್ಥ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವುದಾಗಿ ರೈತರು ತಿಳಿಸಿದ್ದು, ಬೆಳೆಗಳಿಗೆ ಸೂಕ್ತ ಬೆಲೆ, ಸಾಲ ಮನ್ನಾ, ಕಬ್ಬಿನ ಬೆಳೆಗೆ ಪರಿಹಾರ, ಬೆಳೆ ಬಾಕಿ ಇತ್ಯಾದಿ ಅನೇಕ ಬೇಡಿಕೆಗಳ ಈಡೇರಿಕೆಗೆ ರೈತರು ಒತ್ತಾಯಿಸಿದ್ದಾರೆ.
ತಮ್ಮ ಬೇಡಿಕೆ ಈಡೇರಿಸುವವರೆಗೆ ಯಾವುದೇ ಕಾರಣಕ್ಕೂ ಅಧಿವೇಶನಕ್ಕೆ ಅವಕಾಶ ಕೊಡುವುದಿಲ್ಲ ಎಂಬುದು ರೈತರ ವಾದವಾಗಿದೆ. 'ರೈತರನ್ನು ನಿರ್ಲಕ್ಷಿಸಿದರೆ ಸಿದ್ದರಾಮಯ್ಯಗೆ ಉಳಿಗಾಲ ಇಲ್ಲ' ಎಂದು ರೈತರು ಕಿಡಿಕಾರಿದ್ದಾರೆ.
ವಿವಿಧೆಡೆಯಿಂದ ಬರುತ್ತಿರುವ ರೈತರನ್ನು ಹಲ್ಯಾಳ ಗ್ರಾಮದ ಬಳಿ ಕೆಲ ರೈತರನ್ನು ಪೊಲೀಸರು ತಡೆಹಿಡಿದಿದ್ದಾರೆ, ಇದರ ವಿರುದ್ಧ ರೈತರು ಅಕ್ರೋಶ ವ್ಯಕ್ತ ಪಡಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications