ಮಹಾರಾಷ್ಟ್ರದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ

ಮುಂಬೈ, ಜೂನ್ 22 : ಮಹಾರಾಷ್ಟ್ರದಲ್ಲಿ ಮತ್ತೆ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನೌಕಾಸೇನೆಯ ಭೂಸ್ವಾಧೀನಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತರು ಮುಂಬೈನ ಥಾಣೆ-ಬದ್ಲಾಪುರ ಹೆದ್ದಾರಿಯಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯ ನೌಕಾಪಡೆ ಸುಮಾರು 17 ಗ್ರಾಮಗಳ ರೈತರ ನೂರಾರು ಎಕರೆ ಕೃಷಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ ಎಂದು ಆರೋಪಿಸಿ ನೂರಾರು ರೈತರು ಹೆದ್ದಾರಿ ತಡೆ ನಡೆಸಿದ್ದಾರೆ. ಈ ವೇಳೆ ಕೆಲ ಆಕ್ರೋಶಿತ ಕೆಲ ರೈತರು ಹೆದ್ದಾರಿಯಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದರು. ಈ ಘಟನೆಯಲ್ಲಿ ಕೆಲ ಪೊಲೀಸರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Farmers Protest Near Thane, Block Highway, Cops Injured In Clash

ಈ ಹಿನ್ನೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗಲಭೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಇನ್ನು ರೈತರ ಗಲಭೆ ನಿಯಂತ್ರಣಕ್ಕಾಗಿ ತುರ್ತು ಪ್ರಹಾರ ದಳ ಹಾಗೂ ಕೇಂದ್ರೀಯ ಪಡೆಗಳಿಗೆ ಬುಲಾವ್ ನೀಡಲಾಗಿದ್ದು, ಶೀಘ್ರದಲ್ಲೇ ತುರ್ತು ಪ್ರಹಾರ ದಳ ಹಾಗೂ ಕೇಂದ್ರೀಯ ಪಡೆಗಳು ರಕ್ಷಣೆ ನಿಯೋಜನೆಯಾಗಲಿವೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+