ಜನವರಿ 31ಕ್ಕೆ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಲಿದ್ದಾರೆ ರೈತರು
ಬೆಂಗಳೂರು, ಜನವರಿ 29: 'ರೈತ ಸಾಲಗಾರನಲ್ಲ, ಸಾಲ ನನ್ನದಲ್ಲ' ಎಂಬ ಘೋಷ ವಾಕ್ಯದೊಂದಿಗೆ ರೈತರು ಜನವರಿ 31ರಂದು ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೇರಲಿದ್ದಾರೆ.
ರೈತ ಪರ ನಿಲುವುಗಳನ್ನು ತಳೆಯುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ರೈತರು ಒತ್ತಾಯಿಸಲಿದ್ದಾರೆ. ಬಡ ರೈತರ ಕೂಗು ಕ್ಷೀಣಿಸಬಾರದೆಂದು, ಸರ್ಕಾರಗಳ ಮರಗಟ್ಟಿದ ಕಿವಿಗಳಿಗೆ ಕ್ಷೀಣ ಧ್ವನಿಗಳ ಕೇಳವೆಂಬ ಅರಿವಿರುವ ಕಾರಣದಿಂದ ಗಟ್ಟಿ ಧ್ವನಿ ಹೊರಡಿಸಲೆಂದೇ ಸಾವಿರಾರು ಸಂಖ್ಯೆಯಲ್ಲಿ ರೈತರು ಅಂದು ನ್ಯಾಷನಲ್ ಕಾಲೇಜು ಮೈದಾನದಲ್ಲಿ ಒಂದಾಗಲಿದ್ದಾರೆ.
'ರೈತರ ಸಾಲ ಮನ್ನಾ' ಎಂಬ ಕನ್ನಡಿ ಒಳಗಿನ ಗಂಟನ್ನು ತೋರಿಸಿ ಅಧಿಕಾರ ಹಿಡಿಯುವ ರಾಜಕೀಯ ಪಕ್ಷಗಳ ವಿರುದ್ಧ ಅಂದು ರೈತರು ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ದೇಶಕ್ಕೆ ಸೇವೆ ಒದಗಿಸುವ 'ರಾಜ್ಯ ಸುಭಿಕ್ಷವಾಗಿ ನಡೆಯಲು ಇಂಧನ ಒದಗಿಸುವ ರೈತ ಸಾಲಗಾರನಲ್ಲ, ರಾಜ್ಯದ ಜನರನ್ನು ಸುಭಿಕ್ಷವಾಗಿಡಲು ನೆರವಾಗಿದ್ದಕ್ಕೆ ಸರ್ಕಾರವೇ ರೈತನಿಗೆ ಹಣ ನೀಡಬೇಕು, 'ರೈತ ಸಾಲಗಾರನಲ್ಲ, ಸರ್ಕಾರವೇ ಬಾಕೀದಾರ' ಎಂಬ ಘೋಷ ವಾಕ್ಯ ಅಂದು ಸಮಾವೇಶಕ್ಕೆ ಬಂದ ಪ್ರತಿಯೊಬ್ಬ ರೈತನ ಮನದ ಮಾತಾಗಲಿದೆ.

ಸಹಸ್ರ ರೈತರ ನೋವನ್ನು ತಮ್ಮ ಮಾತಿನ ಮೂಲಕ ವ್ಯಕ್ತಪಡಿಸಲು ಅಂದು ಹಿರಿಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಪ್ರಕಾಶ್ ರೈ, ರಾಜು ಶೆಟ್ಟಿ, ನಟರಾಜ್ ಹುಳಿಯಾರ್, ದೇವೇಂದ್ರ ವರ್ಮ, ಹರಿಶ್ ಚೌಹಾಣ್ ಮುಂತಾದ ರೈತ ಪರ ಮನಸ್ಸುಗಳು ವೇದಿಕೆ ಮೇಲಿರಲಿವೆ.
ಸಮಾವೇಶವನ್ನು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಉದ್ಘಾಟಿಸಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಡಿಹಳ್ಳಿ ಚಂದ್ರಶೇಖರ್ ವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಹಸಿರು ಸೇನಾನಿ ಪುಸ್ತಕ ಬಿಡುಗಡೆ ಆಗಲಿದೆ. ಕಾರ್ಯಕ್ರಮ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜನವರಿ 31ರಂದು ಮಧ್ಯಾಹ್ನ 12ಕ್ಕೆ ಪ್ರಾರಂಭವಾಗಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications