ಕೆ.ಆರ್.ಮಾರ್ಕೆಟ್: ತೆರಿಗೆ ಹೆಸರಲ್ಲಿ ರೈತರ ಸುಲಿಗೆ
ಬೆಂಗಳೂರು, ಡಿಸೆಂಬರ್ 04: ಕೆ.ಆರ್.ಮಾರುಕಟ್ಟೆಯಲ್ಲಿ ರೈತರ ಮೇಲೆ ಆಗುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಕೋಲಾರ, ಚಿಕ್ಕಬಳ್ಳಾಪುರ, ಬೆಂ.ಗ್ರಾಮಾಂತರ ಜಿಲ್ಲೆ ರೈತರು ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.
ರೈತರು ಬೆಳೆದ ಬೆಳೆಯನ್ನು ಕೆ.ಆರ್.ಮಾರುಕಟ್ಟೆಗೆ ತೆಗೆದುಕೊಂಡು ಹೋದರೆ ಮಾರುಕಟ್ಟೆ ತೆರಿಗೆ ಹೆಸರಲ್ಲಿ ಹಫ್ತಾ ವಸೂಲಿ ಮಾಡಲಾಗುತ್ತಿದೆ. ತೆರಿಗೆ ನೀಡಲು ನಿರಾಕರಿಸಿದ ರೈತರ ಮೇಲೆ ಗೂಂಡಾಗಿರಿ ನೆಡಲಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾರುಕಟ್ಟೆಯಲ್ಲಿ ರೈತರಿಗೆ ಮೀಸಲಾಗಿದ್ದ ಶೆಡ್ಗಳನ್ನು ಬಿಬಿಎಂಪಿಯು ತನ್ನ ಲಾಭಕ್ಕಾಗಿ ಕೋಟ್ಯಾಂತರ ರೂಪಾಯಿಗಳಿಗೆ ಖಾಸಗಿಯವರಿಗೆ ಹರಾಜು ಮಾಡಿದ್ದಾರೆ, ಬಂಡವಾಳ ಹೂಡಿದ ಖಾಸಗಿಯವರು ರೈತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ ಆರೋಪಿಸಿದರು.
ಬಯಲು ಸೀಮೆ ರೈತರು 1500 ಅಡಿ ಆಳದಿಂದ ನೀರು ತೆಗೆದು ತರಕಾರಿ ಬೆಳೆಗಳನ್ನು ಬೆಳೆಯುತ್ತಾರೆ, ಬೆಳೆದ ತರಕಾರಿಯನ್ನು ಮಾರುಕಟ್ಟೆಗೆ ತರುವಷ್ಟರಲ್ಲಿ ರೈತನಿಗೆ ಕತ್ತಿನ ವರೆಗೆ ಸಾಲ ಇರುತ್ತದೆ. ಅಲ್ಪ ಸ್ವಲ್ಪ ಹಣ ಮಾಡಿಕೊಳ್ಳುವ ಆಸೆಯಿಂದ ಬಂದ ರೈತನಿಂದ ತೆರಿಗೆ ಹೆಸರಲ್ಲಿ ಹಣ ಕೀಳುತ್ತಿರುವುದು ಅಕ್ಷಮ್ಯ ಎಂದು ಆರೋಪಿಸಿದ ಅವರು ಬಿಬಿಎಂಪಿ ಈ ವಸೂಲಿದಾರರಿಗೆ ಅಭಯ ನೀಡಿದೆ ಎಂದರು.
ಬಿಬಿಎಂಪಿಗೆ ಮುತ್ತಿಗೆ ಹಾಕಿ ರೈತರಿಂದ ವಸೂಲಿ ಮಾಡುತ್ತಿರುವ ತೆರಿಗೆಯನ್ನು ಕೈಬಿಡಬೇಕೆಂದು ಆಗ್ರಹಿಸುತ್ತಿರುವುದಾಗಿ ಅವರು ಮಾಹಿತಿ ನೀಡಿದರು.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ










Click it and Unblock the Notifications