ದೆಹಲಿಯಲ್ಲಿನ ಹೋರಾಟ ಬೆಂಬಲಿಸಿ ದಾವಣಗೆರೆಯಲ್ಲಿ ರೈತರ ಐಕ್ಯತಾ ದಿನಾಚರಣೆ

ದಾವಣಗೆರೆ, ಡಿಸೆಂಬರ್ 03: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಡಿ.3 ಅನ್ನು ಅಖಿಲ ಭಾರತ ರೈತರ ಐಕ್ಯತಾ ದಿನವನ್ನಾಗಿ ಆಚರಿಸಿದರು.

ಇಲ್ಲಿನ ಜಯದೇವ ವೃತ್ತದಿಂದ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಆರ್ ಕೆಎಸ್ ರಾಜ್ಯಾಧ್ಯಕ್ಷ ಡಾ.ಟಿ.ಎಸ್.ಸುನೀತ್ ಕುಮಾರ್, ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ರದ್ದುಪಡಿಸುವಂತೆ ದೆಹಲಿಯಲ್ಲಿ ರೈತರು ಪ್ರತಿಭಟಿಸಲು ಮುಂದಾದ ಸಂದರ್ಭ ಅವರು ದೆಹಲಿ ಪ್ರವೇಶಿಸದಂತೆ ತಡೆಯಲು ಬ್ಯಾರಿಕೇಡ್ ‌ಗಳನ್ನು ಹಾಕಿ, ಮುಳ್ಳಿನ ತಂತಿ ಕಟ್ಟಿದ್ದರು. ಇದನ್ನು ಲೆಕ್ಕಿಸದೇ ಮುನ್ನುಗ್ಗಿದ ರೈತರ ಹೋರಾಟವನ್ನು ದಮನ ಮಾಡಲು ಪ್ರಯತ್ನಿಸಿರುವುದು ಪ್ರಜಾತಂತ್ರ ವ್ಯವಸ್ಥೆಗೆ ಮಾಡಿದ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

Farmers Solidarity Day In Davanagere Supporting Delhi Protest

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಮ್ಮನೂರು ಬಸವರಾಜ್ ಮಾತನಾಡಿ, ಕೇಂದ್ರ ಸರ್ಕಾರ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಶವ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಿದ್ದು, ತಕ್ಷಣವೇ ಈ ರೈತ ವಿರೋಧಿ ತಿದ್ದುಪಡಿಗಳನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+