ಫಲ ನೀಡದ ನಾಯಕರ ಸಾಂತ್ವನ, ಮುಂದುವರಿದ ಆತ್ಮಹತ್ಯೆ ಸರಣಿ
ಬೆಂಗಳೂರು, ಜು. 18 : ಇಡೀ ಕರ್ನಾಟಕ ರಾಜ್ಯಕ್ಕೆ ರೈತರ ಆತ್ಮಹತ್ಯೆ ಚಿದಂಬರ ರಹಸ್ಯವಾಗಿದೆ. ಕೃಷಿ ಸಚಿವರು ಎಲ್ಲಿದ್ದಾರೋ ಗೊತ್ತಿಲ್ಲ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ರೇಡಿಯೋ ಮೂಲಕ 'ಆತ್ಮಹತ್ಯೆ ಮಾಡಿಕೊಳ್ಳಬೇಡಿ' ಎಂದು ಕರೆ ನೀಡುತ್ತಿದ್ದರೂ ರಾಜ್ಯದಲ್ಲಿ ರೈತರ ಆತ್ಮಹತ್ಯೆಯ ಸರಣಿ ಮುಂದುವರಿದಿದೆ.
ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ರೈತರ ಮನೆಗೆ ಹೋಗಿ ಭೇಟಿಯಾಗಿ ಸಾಂತ್ವನ ಹೇಳುತ್ತಿದ್ದಾರೆ. ದಯಮಾಡಿ ಆತ್ಮಹತ್ಯೆಗೆ ಶರಣಾಗಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ತುಮಕೂರು ಜಿಲ್ಲೆಯಲ್ಲಿ ಮೂವರು ರೈತರು ಪ್ರಾಣ ನೀಗಿಕೊಂಡಿದ್ದರೆ, ಕಲಬುರ್ಗಿಯಲ್ಲಿ ರೈತನೋರ್ವ ಕುಣಿಕೆಗೆ ಕೊರಳೊಡ್ಡಿದ್ದಾನೆ. ಮೈಸೂರು ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತನೊಬ್ಬ ಧಗಧಗಿಸುವ ಕಬ್ಬಿನ ಜಲ್ಲೆಗಳ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದೇ, ರಾಜ್ಯದೆಲ್ಲೆಡೆ ಸಮೂಹಸನ್ನಿಯಂತೆ ಸಾವಿಗೆ ಶರಣಾಗುತ್ತಿದ್ದಾರೆ. [ರೈತನಿಗೆ ಗುಣಮಟ್ಟದ ಬೀಜ ಒದಗಿಸುವ 'ಬಿಗ್ ಹ್ಯಾಟ್']

ತುಮಕೂರು ಜಿಲ್ಲೆಯ ಕೋರಾ ಹೋಬಳಿಯ ನಂದಿಹಳ್ಳಿ ಗ್ರಾಮದ ಹಾಲಪ್ಪ (55) ಜಮೀನಿನಲ್ಲಿಯೇ ಶುಕ್ರವಾರ ರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಆತ 4.5 ಲಕ್ಷ ರು. ಸಾಲ ಮಾಡಿಕೊಂಡಿದ್ದ. ಬೆಳಿಗ್ಗೆ ಪತಿ ಮನೆಗೆ ಮರಳದಿದ್ದಾಗ ಹೆದರಿದ ಇಂದಿರಮ್ಮ ಹೊಲಕ್ಕೆ ಹೋಗಿ ನೋಡಿದಾಗ ಹಾಲಪ್ಪ ಸಾವಿಗೆ ಶರಣಾಗಿರುವುದು ತಿಳಿದುಬಂದಿದೆ.
ಶಿರಾ ತಾಲೂಕಿನ ಕುಮಾರಸ್ವಾಮಿ (53) ಕೆನರಾ ಬ್ಯಾಂಕಿನಲ್ಲಿ 5 ಲಕ್ಷ ರು. ಸಾಲ ಮಾಡಿಕೊಂಡಿದ್ದ. ಮೂರು ಎಕರೆ ಜಮೀನಿನಲ್ಲಿ ತೆಂಗು ಮತ್ತು ಅಡಿಕೆ ಬೆಳೆಯುತ್ತಿದ್ದ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಸಲು ಕೊಡಿ ಎಂದು ಬ್ಯಾಂಕ್ ಒತ್ತಾಯ ಮಾಡಿದ್ದ ಹಿನ್ನೆಲೆ ಹೆದರಿದ ಕುಮಾರಸ್ವಾಮಿ ವಿಷ ಸೇವಿಸಿ ತನ್ನ ಹೊಲದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದೇ ಜಿಲ್ಲೆಯ ಗುಬ್ಬಿ ತಾಲೂಕಿನ ಕೋಣೆಮಾದೇನಹಳ್ಳಿಯ ವೇದಮೂರ್ತಿ ಹಲವಾರು ಬ್ಯಾಂಕುಗಳಲ್ಲಿ ಸಾಲ ಪಡೆದಿದ್ದ. ಇಡೀ ಕುಟುಂಬದ ಜವಾಬ್ದಾರಿ ಈತನ ಮೇಲೆಯೇ ಇತ್ತು. ಬ್ಯಾಂಕ್ ಅಧಿಕಾರಿಗಳು ಸಾಲ ಹಿಂತಿರುಗಿಸುವಂತೆ ನೋಟೀಸ್ ಕಳುಹಿಸುತ್ತಿದ್ದರು. ಇದರಿಂದ ಮನನೊಂದ ವೇದಮೂರ್ತಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.
ಮತ್ತೊಂದು ಪ್ರಕರಣದಲ್ಲಿ, ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಣಿಕ್ ರೆಡ್ಡಿ ಎಂಬಾತ ಹೊಲದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ನಡುವೆ, ಮುಖ್ಯಮಂತ್ರಿಗಳು, ರೈತರ ಸಾವಿಗೆ ಸಾಲ ಕೊಟ್ಟವರೇ ಹೊಣೆಗಾರರಾಗುತ್ತಾರೆ ಎಂಬ ಸಂದೇಶವನ್ನು ಬ್ಯಾಂಕಿಗೂ ಮತ್ತು ರೈತರಿಗೂ ಸಾರಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications