ಭೂ ಸುಧಾರಣೆ ಕಾಯ್ದೆ ವಿರುದ್ಧ ರೈತ ಸಂಘದ BOARD- ಅಧ್ಯಾಯ 2
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ತಂದಿರುವ ಸುಗ್ರೀವಾಜ್ಞೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಧಿಕ್ಕಾರ ಹೇಳಿದೆ. "ಕೃಷಿ ಭೂಮಿ ಮಾರಾಟದ ಸರಕಲ್ಲ, ಬಂಡವಾಳಶಾಹಿಗಳಿಗೆ, ಭೂಗಳ್ಳರಿಗೆ ಗ್ರಾಮದೊಳಗೆ ಪ್ರವೇಶವಿಲ್ಲ" ಎಂಬ ಒಕ್ಕಣೆಯ ಫಲಕ/ಬೋರ್ಡ್ ಪ್ರತಿ ಗ್ರಾಮಗಳ ಪ್ರವೇಶ ದ್ವಾರದಲ್ಲಿ ಹಾಕಲು ಸಂಘ ಮುಂದಾಗಿದೆ.
Recommended Video
ರೈತರು ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಗ್ರಾಮಗಳ ಮುಂದೆ ಬೋರ್ಡ್ ಹಾಕುವುದು ಚಳವಳಿಯ ವಿನೂತನ ಕಾರ್ಯಕ್ರಮಗಳಲ್ಲೊಂದು. ಅದರ ರೂವಾರಿ ಪ್ರೊ.ಎಂ.ಡಿ.ಎನ್. ಇದೀಗ ಅವರ ತತ್ವ ಸಿದ್ಧಾಂತಗಳನ್ನು ಒಪ್ಪುವ ಎಲ್ಲ ರೈತ ಮುಖಂಡರೂ ಒಟ್ಟಾಗಿ ಗ್ರಾಮಗಳ ಮುಂದಿನ ಬೋರ್ಡುಗಳಿಗೆ ಭೂ ಸುಧಾರಣೆ ಕುರಿತಾದ ಹೊಸದೊಂದು ಅಧ್ಯಾಯವನ್ನು ಸೇರ್ಪಡೆ ಮಾಡುತ್ತಿದ್ದಾರೆ.


ಈಗಲೂ ಬಹುತೇಕ ಹಳ್ಳಿಗಳಲ್ಲಿ ಬೋರ್ಡ್ ಕಾಣಬಹುದು
ಹಿಂದೆ ಎಂಡಿಎನ್ ಹಾಕಿಸಿದ್ದ ಬೋರ್ಡುಗಳನ್ನು ಈಗಲೂ ಕರ್ನಾಟಕದ ಬಹುತೇಕ ಹಳ್ಳಿಗಳಲ್ಲಿ ಕಾಣಬಹುದು.
ಅವರು ಹಾಕಿಸಿರುವ ಬೋರ್ಡ್ ಗಳಲ್ಲಿ ಹೀಗೆ ಬರೆಯಲಾಗಿದೆ- "ಭ್ರಷ್ಟ ಸಹಕಾರಿ, ಸರ್ಕಾರಿ, ಬ್ಯಾಂಕ್ ಮತ್ತು ರೆವಿನ್ಯೂ ಇಲಾಖೆ ಸಂಬಳದ ನೌಕರರಿಗೆ ಮತ್ತು ಭ್ರಷ್ಟ ರಾಜಕಾರಣಿಗೆ ಗ್ರಾಮದೊಳಗೆ ಪ್ರವೇಶವಿಲ್ಲ. ಪ್ರಾಮಾಣಿಕರಿಗೆ ಸ್ವಾಗತ. ರೈತರನ್ನು ಭೇಟಿ ಮಾಡುವ ಸಮಯ ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ. ಸೋಮವಾರ ರೈತರಿಗೆ ರಜಾ. ಈ ನಿಯಮ ಉಲ್ಲಂಘಿಸಿದವರು ಗ್ರಾಮ ತೀರ್ಮಾನಿಸಿದ ಶಿಕ್ಷೆಗೆ ಗುರಿಯಾಗುತ್ತಾರೆ"...
ರೈತ ಚಳವಳಿಯ ಮೈಲುಗಲ್ಲು
ರೈತರಿಂದ ಸಾಲ ವಸೂಲಿ ನೆಪದಲ್ಲಿ ಮನೆಗಳನ್ನು ಜಪ್ತಿ ಮಾಡುತ್ತಿದ್ದ ಬ್ಯಾಂಕರ್ ಗಳು ಮತ್ತವರ ಬೆಂಗಾವಲಿಗೆ ನಿಲ್ಲುವ ಸರ್ಕಾರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲೆಂದು ರಾಜ್ಯ ರೈತ ಸಂಘ ನೆಟ್ಟಿರುವ ಈ ಬೋರ್ಡ್ ಗಳು ರೈತರ ಸ್ವಾಭಿಮಾನದ ಸಂಕೇತಗಳಂತಿವೆ. ರೈತ ಚಳವಳಿಯ ಮೈಲುಗಲ್ಲಿನಂತಿವೆ. ರೈತರು ತಮ್ಮ ಹಕ್ಕು ಪ್ರತಿಪಾದಿಸುವ ಸಂವಿಧಾನದಂತಿವೆ.
ಎಂಡಿಎನ್ ಕಂಡುಕೊಟ್ಟ ಇದೊಂದು ಚಳವಳಿಯ ಮಾದರಿ ಮತ್ತು ಮಾರ್ಗ ಇದೀಗ ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ ಮತ್ತು ಸಾಮೂಹಿಕ ನಾಯಕತ್ವದ ಎಲ್ಲ ನಾಯಕರು ಸೇರಿ ಮುಂದುವರೆಸುತ್ತಿದ್ದಾರೆ.

ರೈತ ಸಂಘದ ಗ್ರಾಮ ಘಟಕಗಳು ಮಾಡಬೇಕಾದ್ದೇನು?
"ವಿಶ್ವದಾದ್ಯಂತ ಸಾಮಾಜಿಕ ಬದಲಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿದ ಇಂಥ ಮಾರ್ಗಗಳನ್ನು ಗುರುತಿಸಿ ಸಂರಕ್ಷಿಸುವ ಲಂಡನ್ ನ ವಿಕ್ಟೋರಿಯಾ ಮತ್ತು ಆಲ್ಬರ್ಟ್ ಮ್ಯೂಸಿಯಂ ಈಗ್ಗೆ ಏಳೆಂಟು ವರ್ಷಗಳ ಹಿಂದೆ ಈ ಬೋರ್ಡನ್ನು ಸಂರಕ್ಷಿಸಿದೆ. ಇದರಿಂದಾಗಿ ವಿಕ್ಟೋರಿಯಾ ಗ್ಯಾಲರಿಯಲ್ಲಿ ರೈತಸಂಘದ ಚಳವಳಿಯ ಮಾರ್ಗ (ಫಲಕ) ಶಾಶ್ವತವಾಗಿ ಉಳಿದಂತಾಗಿದೆ.
ಇದೀಗ ರೈತ ಸಂಘದ ಗ್ರಾಮ ಘಟಕಗಳು ಏನು ಮಾಡಬೇಕು? ಇಲ್ಲಿದೆ ಮಾಹಿತಿ; ನಿಮ್ಮ ಗ್ರಾಮದಲ್ಲಿ ಈಗಾಗಲೇ ಇರುವ ಬೋರ್ಡ್ ಯಾವ ಸ್ಥಿತಿಯಲ್ಲಿದೆ ಗಮನಿಸಿ. ಅಕ್ಷರಗಳು ಅಳಿಸಿಹೋಗಿದ್ದರೆ ಮತ್ತೆ ಬರೆಸಿ. ಅದರ ಜೊತೆಗೆ ಹೊಸ ಚಳವಳಿಯ ಅಂಶವನ್ನು ಅದಕ್ಕೆ ಸೇರಿಸಿ. ಮೊದಲಿನ ಬೋರ್ಡಿನ ಜೊತೆಗೆ ಹೊಸದೊಂದು ಫಲಕ ಮಾಡಿಸಿದರೂ ಆದೀತು...
ಹೊಸದಾಗಿ ಬರೆಸಬೇಕಾದ/ಹೊಸ ಫಲಕ ಮಾಡಬೇಕಾದ ಅಂಶ ಇದು. ""ಕೃಷಿ ಭೂಮಿ ಮಾರಾಟದ ಸರಕಲ್ಲ, ಬಂಡವಾಳಶಾಹಿಗಳಿಗೆ, ಭೂಗಳ್ಳರಿಗೆ ಗ್ರಾಮದೊಳಗೆ ಪ್ರವೇಶವಿಲ್ಲ".

ರೈತರು ಒಪ್ಪುವುದಾದರೆ !?
ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಚಳವಳಿಯ ಮಾದರಿಯ "ಬೋರ್ಡ್" ಗೆ ಒಂದು standard size, model ಇದ್ದರೆ ಚೆನ್ನ. ಗಾತ್ರ, ಅಳತೆ, ಅದರಲ್ಲಿ ಬಳಸುವ ಅಕ್ಷರಗಳು (ಫಾಂಟ್), ಬಣ್ಣ, ಮುಖಂಡರ ಚಿತ್ರಗಳು, ಮತ್ತದರ ಅಳತೆ uniform ಮಾಡಬಹುದಾ ಯೋಚಿಸಿ.
ಒಂದು ಕಡೆ ಫ್ಲೆಕ್ಸ್, ಇನ್ನೊಂದೂರಿನಲ್ಲಿ ಕಬ್ಬಿಣದ ಫಲಕ ಮತ್ತೊಂದು ಕಡೆ ಸಿಮೆಂಟ್ ಬೋರ್ಡ್ ಗಳಿವೆ. ಎಲ್ಲಾ ಕಡೆ ಏಕರೂಪದ ಮಾದರಿ ಅನುಸರಿಸಬಹುದಾ ಎಂಬುದನ್ನೂ ಚರ್ಚಿಸಿ ತೀರ್ಮಾನ ಕೈಗೊಳ್ಳಿ. ಏಕರೂಪವಾಗಿ ಮಾಡುವ idea ಮೊದಲಿಗೆ ಎಲ್ಲರಿಗೂ ಒಪ್ಪುವ ವಿಷಯವಾ? Is it practical? ಹೌದಾದರೆ ಆ ದಿಕ್ಕಿನಲ್ಲಿ ಯೋಚಿಸಿ. ಇಲ್ಲವೇ ಈ ವಿಷಯ ಇಲ್ಲಿಗೆ ಮೊಟಕು ಮಾಡಿ. ಚಳವಳಿಯತ್ತ ಗಮನಹರಿಸಿ.
ರೈತ ಚಳವಳಿಗೆ ಜಯವಾಗಲಿ...
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications