ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಡಿಯೋ : ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡ ರೈತರು

By ಬೆಳಗಾವಿ ಪ್ರತಿನಿಧಿ
|
Google Oneindia Kannada News

Recommended Video

ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡ ರೈತರು | Oneindia Kannada

ಬೆಳಗಾವಿ, ನವೆಂಬರ್ 19 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಬಗ್ಗೆ ನೀಡಿದ್ದ ಒಂದು ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ರೈತರು ವಿಡಿಯೋ ಮೂಲಕ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಬ್ಬು ಬೆಳೆಗಾರರು ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಭಾನುವಾರ ಲಾರಿಯನ್ನು ನುಗ್ಗಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ರೈತ ಮಹಿಳೆಗೆ ನೋವಾಗುವಂತೆ ಮಾತನಾಡಿದ್ದರು. ಈ ಹೇಳಿಕೆ ಭಾರಿ ವಿವಾದಕ್ಕೆ ಕಾರಣಾಗಿದೆ.

ರೈತರ ಪ್ರತಿಭಟನೆ : ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?ರೈತರ ಪ್ರತಿಭಟನೆ : ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

Farmers upset with HD Kumaraswamy statement

'ಸುವರ್ಣ ಸೌಧಕ್ಕೆ ನುಗ್ಗಿದ್ದು ರೈತರಲ್ಲ, ನಮ್ಮ ರೈತರು ಶಾಂತಿ ಪ್ರಿಯರು, ಪ್ರತಿಭಟನೆ ನಡೆಸಿದ್ದು ಗೂಂಡಾಗಳು' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಆದ್ದರಿಂದ, ಇಂದು ರೈತರು ವಿಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.

ಸುವರ್ಣ ವಿಧಾನಸೌಧಕ್ಕೆ ಲಾರಿ ನುಗ್ಗಿಸಿದ ರೈತರ ಬಂಧನ, ಎಫ್‌ಐಆರ್ಸುವರ್ಣ ವಿಧಾನಸೌಧಕ್ಕೆ ಲಾರಿ ನುಗ್ಗಿಸಿದ ರೈತರ ಬಂಧನ, ಎಫ್‌ಐಆರ್

ವಿಡಿಯೋದಲ್ಲಿ ಏನಿದೆ? : ಕೇಳ್ರಪ್ಪೋ ಕೇಳಿ...ಕರ್ನಾಟಕದ ಮಹಾ ಜನರೇ ಕೇಳಿ. ರೈತರು ಎಂದರೆ ಯಾರು? ದೇವೇಗೌಡರು, ದೇವೇಗೌಡರ ಮಕ್ಕಳು, ಅವರ ಮೊಮ್ಮಕ್ಕಳು, ಅವರ ಸೊಸೆಯಂದಿರು, ಅವರ ಮರಿಮಕ್ಕಳು ಮಾತ್ರ ರೈತರು.

ರೈತರ ಪ್ರತಿಭಟನೆ, ಸುವರ್ಣ ವಿಧಾನಸೌಧಕ್ಕೆ ಲಾರಿ ನುಗ್ಗಿಸಿದ ರೈತರು!ರೈತರ ಪ್ರತಿಭಟನೆ, ಸುವರ್ಣ ವಿಧಾನಸೌಧಕ್ಕೆ ಲಾರಿ ನುಗ್ಗಿಸಿದ ರೈತರು!

ಪ್ರತಿಭಟನೆ ಮಾಡುವವರು, ಹಸಿರು ಶಾಲು ಹಾಕಿಕೊಂಡಿರುವವರು ಅವರೆಲ್ಲರೂ ಕಳ್ಳರು, ದರೋಡೆಕೋರರು ಕೇಳ್ರಪ್ಪೋ ಕೇಳಿ ಎಂದು ರೈತರು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Belagavi farmers upset with Karnataka Chief Minister H.D.Kumaraswamy statement on Farmer Jayashree. Farmers protesting against Chief Minister in various districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X