ರಸಗೊಬ್ಬರ, ಬೀಜಗಳ ಅಭಾವ ಸೃಷ್ಟಿಸಿದರೆ ಸೂಕ್ತ ಕ್ರಮ; ಬಾಗಲಕೋಟೆ ಜಿಲ್ಲಾಧಿಕಾರಿ ಎಚ್ಚರಿಕೆ
ಬಾಗಲಕೋಟೆ, ಅಕ್ಟೋಬರ್, 12: ಪ್ರಸಕ್ತ ಹಿಂಗಾರು ಹಂಗಾಮಿಗೆ ರೈತರಿಗೆ ಬೇಕಾದ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡಲಾಗುತ್ತಿದೆ. ರಸಗೊಬ್ಬರಗಳ ಅಭಾವ ಸೃಷ್ಟಿಸಿದರೆ ಅಂತಹವರ ಮೇಲೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಇಂದು ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ವಿತರಣೆ ಕುರಿತು ಸಭೆಯನ್ನು ಮಾಡಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಇದೆ. ಹಿಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹಿಂಗಾರಿ ಜೋಳ, ಗೋಧಿ, ಕಡಲೆ, ಸೂರ್ಯಕಾಂತಿ ಹಾಗೂ ಕಬ್ಬು ಸೇರಿದಂತೆ ಇತರೆ ಬೆಳೆಗಳ ಒಟ್ಟು 3.10 ಲಕ್ಷ ಹೆಕ್ಟೇರ್ ಕ್ಷೇತ್ರದಲ್ಲಿ ಬಿತ್ತನೆ ಗುರಿಯನ್ನು ಹೊಂದಲಾಗಿದೆ. ಈ ಪೈಕಿ ಈಗಾಗಲೇ 12,280 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿದೆ ಎಂದು ತಿಳಿಸಿದರು.
ಶೇಖರಣೆ ಮಾಡಲಾದ ಬೀಜಗಳ ಪ್ರಮಾಣ
ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬಿತ್ತನೆ ಕಾರ್ಯದಲ್ಲಿ ವಿಳಂಬ ಆಗಿದೆ. ಜಿಲ್ಲೆಯಲ್ಲಿ 18 ರೈತ ಸಂಪರ್ಕ ಕೇಂದ್ರಗಳು ಹಾಗೂ ಹೆಚ್ಚುವರಿ 7 ಕೇಂದ್ರಗಳು ಸೇರಿ ಒಟ್ಟು 25 ಕೇಂದ್ರಗಳ ಮೂಲಕ ರಿಯಾಯಿತಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. 6 ತಾಲೂಕು ಸೇರಿ ಜೋಳ 830 ಕ್ವಿಂಟಲ್, ಮುಸುಕಿನ ಜೋಳ 300 ಕ್ವಿಂಟಲ್, ಗೋದಿ 3,760 ಕ್ವಿಂಟಲ್, ಕಡಲೆ 14,095 ಕ್ವಿಂಟಲ್, ಶೇಂಗಾ 4,700 ಕ್ವಿಂಟಲ್, ಸೂರ್ಯಕ್ರಾಂತಿ 30 ಕ್ವಿಂಟಲ್, ಕುಸುಮೆ 20 ಕ್ವಿಂಟಲ್ ಸೇರಿದಂತೆ ಒಟ್ಟು 23,735 ಕ್ವಿಂಟಲ್ ಬೀತ್ತನೆ ಬೀಜ ವಿತರಣೆ ಮಾಡಲಾಗಿದೆ. ಹೆಚ್ಚುವರಿಯಾಗಿ ಮುಸುಕಿನ ಜೋಳ, ಗೋಧಿ, ಕಡಲೆ, ಸೂರ್ಯಕಾಂತಿ ಹಾಗೂ ಶೇಂಗಾ ಬೀಜ ಸೇರಿದಂತೆ ಒಟ್ಟು 16,500 ಕ್ವಿಂಟಲ್ ಬೀಜಗಳಿಗೆ ಬೇಡಿಕೆ ಇಡಲಾಗಿದೆ ಎಂದರು.

ದಾಸ್ತಾನಿನಲ್ಲಿ ಲಭ್ಯವಿರುವ ಗೊಬ್ಬರದ ಪ್ರಮಾಣ
ಜಿಲ್ಲೆಯಲ್ಲಿ ಸದ್ಯ ರಸಗೊಬ್ಬರದ ಕೊರತೆ ಇಲ್ಲ. ಲಭ್ಯವಿರುವ ದಾಸ್ತಾನಿನ ಪೈಕಿ ಯೂರಿಯಾ 13,549 ಮೆಟಾ ಟನ್, ಡಿ.ಎ.ಪಿ 1,605 ಮೆಟಾ ಟನ್, ಕಾಂಪ್ಲೆಕ್ಸ್ 17,440 ಮೆಟಾ ಟನ್, ಎಂ.ಒ.ಪಿ 2,019 ಮೆಟಾ ಟನ್, ಎಸ್.ಎಸ್.ಪಿ 1,691 ಮೆಟಾ ಟನ್ ಲಭ್ಯವಿದೆ. ರೈತರು ಯೂರಿಯಾ ರಸಗೊಬ್ಬರ ಒಂದನ್ನೇ ಹೆಚ್ಚಾಗಿ ಬಳಸಿದರೆ ಗಿಡಗಳು ರೋಗ ಮತ್ತು ಕೀಟಬಾದೆಗೆ ತುತ್ತಾಗಲಿದೆ. ಸಸ್ಯ ಸಮಗ್ರ ಪೋಷಣೆಗೆ ವಿವಿಧ ಬಗೆಯ ರಸಗೊಬ್ಬರ ಬಳಸುವುದು ಸೂಕ್ತವಾಗಿದೆ. ಕಾಂಪ್ಲೆಕ್ಸ್ ಗೊಬ್ಬರ ಹೆಚ್ಚಿಗೆ ಬಳಸಿದರೆ ಸೂಕ್ತವೆಂದು ತಿಳಿಸಿದರು. ಮಾರಾಟಗಾರರು ರಸಗೊಬ್ಬರದ ಅಭಾವ ಸೃಷ್ಟಿಸಿದಲ್ಲಿ ಅಂತಹವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ್, ಕೃಷಿ ಉಪನಿರ್ದೇಶಕ ಎಚ್.ಪಿ.ಕೋಳೇಕರ, ಕೃಷಿ ಸಹಾಯಕ ನಿರ್ದೇಶಕ ಪಾಂಡಪ್ಪ ಲಮಾಣಿ ಸೇರಿದಂತೆ ಜಿಲ್ಲಾ ಕೃಷಿ ಮಾರಾಟಗಾರರ ಸಂಘದ ಪ್ರತಿನಿಧಿಗಳು, ವಿವಿಧ ರಸಗೊಬ್ಬರ ಉತ್ಪಾದನ ಸಂಸ್ಥೆಗಳ ಜಿಲ್ಲಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications