ಕೊಡಗಿನಲ್ಲಿ ರಸಗೊಬ್ಬರ ಕೊರತೆ: ಮಳೆ ಬಂದರೂ ಆರಂಭವಾಗದ ಕೃಷಿ ಚಟುವಟಿಕೆ
ಕೊಡಗು ಜೂ. 19: ಮುಂಗಾರು ಮಳೆ ಚುರುಕಾದ ಬೆನ್ನಲ್ಲೆ ರಾಜ್ಯದೆಲ್ಲಡೆ ಕಳೆದೊಂದು ತಿಂಗಳಿನಿಂದ ಕೃಷಿ ಸಂಬಂಧಿ ಚಟುವಟಿಕೆಗಳು ಗರಿಗೆದರಿವೆ. ರೈತರು ಮಂದಹಾಸದಿಂದ ವ್ಯವಸಾಯದಲ್ಲಿ ತೊಡಗಿಕೊಂಡಿದ್ದಾರೆ. ಆದರೆ ರಸಗೊಬ್ಬರ ಕೊರತೆ ಸೃಷ್ಟಿಯಾಗಿದ್ದರಿಂದ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳು ಇನ್ನೂ ಆರಂಭವಾಗಿಲ್ಲ. ರಸಗೊಬ್ಬರ ಸಿಗದ ಕೃಷಿಕರಿಗೆ ಕೃಷಿ ಇಲಾಖೆಯ ಭರವಸೆ ಮಾತ್ರ ಸಿಕ್ಕಿದೆ.
ಸಕಾಲಕ್ಕೆ ಕೊಡಗಿನ ವಿವಿಧ ಪ್ರಾಥಮಿಕ ಸಂಘಗಳು ಮತ್ತು ರಸಗೊಬ್ಬರ ವಿತರಕರಿಂದ ರೈತರ ಬೇಡಿಕೆ ಪೂರೈಸಲು ಸಾಧ್ಯವಾಗಿಲ್ಲ. ಅಗತ್ಯದಷ್ಟು ಗೊಬ್ಬರ ರೈತರಿಗೆ ದೊರೆತಿಲ್ಲ. ಹೀಗಾಗಿ ಈ ಭಾಗದಲ್ಲಿ ಬೀಜ ಬಿತ್ತನೆ ಕೆಲಸಗಳು ಮಳೆ ಆರಂಭವಾಗಿ ತಿಂಗಳಾದರೂ ಆರಂಭವಾಗಿಲ್ಲ. ಈ ಸಮಸ್ಯೆ ಉಂಟಾದ ಬೆನ್ನಲ್ಲೆ ಎಚ್ಚತ್ತುಕೊಂಡಿರುವ ಕೃಷಿ ಇಲಾಖೆ ಆದಷ್ಟು ಶೀಘ್ರವೇ ಸಮಸ್ಯೆ ಬಗೆಹರಿಸಿ, ಗೊಬ್ಬರ ಒದಗಿಸಲಾಗುವುದು ಎಂದು ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕಚ್ಚಾ ವಸ್ತುಗಳ ಆಮದು ವಿಳಂಬ
ಭಾರತದಲ್ಲಿ ಗೊಬ್ಬರ ಸಂಸ್ಕರಣೆಗೆ ಅಗತ್ಯವಾದ ಕಚ್ಚಾ ವಸ್ತುಗಳು ಆಮದು ಮಾಡಿಕೊಳ್ಳುವಲ್ಲಿ ವಿಳಂಬವಾಗುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧ ಪರಿಣಾಮವಾಗಿ ಕಚ್ಚಾವಸ್ತುಗಳ ಆಮದು ಸಮಸ್ಯೆ ಉಂಟಾಗಿದ್ದು, ಇದು ಜಾಗತಿಕವಾಗಿ ಪರಿಣಾಮ ಬೀರುತ್ತಿದೆ ಎಂದು ಕೆಲವು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಉಂಟಾದ ಸಮಸ್ಯೆ ನೀಗಿಸಲು ಸರ್ಕಾರಗಳು ಅಗತ್ಯ ಕಚ್ಚಾವಸ್ತುಗಳನ್ನು ಆಮದು ಮಾಡಿಕೊಳ್ಳಲು ತುರ್ತು ಕ್ರಮ ವಹಿಸಬೇಕು ಎಂಬ ಆಗ್ರಹ ರೈತಪರ ಸಂಘದ ಪ್ರತಿನಿಧಿಗಳಿಂದ ಕೇಳಿ ಬಂದಿವೆ.

ಇನ್ನೊಂದಷ್ಟು ದಿನ ಕಾಫಿ ಬೆಳೆಗೆ ಸಮಸ್ಯೆ ಆಗುವುದಿಲ್ಲ ಎನ್ನಬಹುದಾದರೂ ಸಣ್ಣ ಕಾಫಿ ಬೆಳೆಗಾರರು ಮತ್ತು ರೈತರು ಗೊಬ್ಬರ ಕೊರತೆಯಿಂದ ಆತಂಕಕ್ಕೆ ಈಡಾಗಿದ್ದಾರೆ. ಅಗತ್ಯಕ್ಕೆ ತಕ್ಕಷ್ಟು ಮಳೆ ಬಂದ ನಂತರ ಬೆಳೆಗಳಿಗೆ ಗೊಬ್ಬರ ಹಾಕಬೇಕಿದೆ. ಆದರೆ ಕೊರತೆಯಿಂದ ಅದು ಸಾಧ್ಯವಾಗುತ್ತಿಲ್ಲ ಎಂದು ರೈತರೊಬ್ಬರು ಅಳಲು ತೊಂಡಿಕೊಂಡಿದ್ದಾರೆ.
ರಸಗೊಬ್ಬರ ಪೂರೈಕೆಗೆ ಕ್ರಮ:
ಕೊಡಗು ವ್ಯಾಪ್ತಿಯಲ್ಲಿ ಗೊಬ್ಬರ ಸಿಗದ ಪರಿಣಾಮ ರೈತರು ಮಂಡ್ಯ, ಮೈಸೂರು, ಹಾಸನದಲ್ಲಿ ಖರೀದಿಸಿ ತರುತ್ತಿದ್ದಾರೆ. ಗೊಬ್ಬರ ಎಲ್ಲಿ ಸಿಗುತ್ತದೆ ಎಂಬುದರ ಬಗ್ಗೆ ಮಾಹಿತಿ ಪತ್ತೆ ಹೆಚ್ಚುವುದೇ ರೈತರಿಗೆ ಕಾಯಕವಾಗಿದೆ. ಇದರಿಂದ ಸಮಯ ಹಾಗೂ ಅಧಿಕ ಹಣ ಹಾಳಾಗುತ್ತದೆ.

ರಸಗೊಬ್ಬರ ಕೊರತೆಯ ಸಮಸ್ಯೆ ಸರ್ಕಾರದ ಗಮನಕ್ಕೆ ಬಂದಿದೆ. ಇನ್ನೊಂದು ವಾರದೊಳಗೆ ರೈತರಿಗೆ ಬೇಕಾದಷ್ಟು ಗೊಬ್ಬರ ಪೂರೈಸಲಿದ್ದೇವೆ. ಜೂನ್ ಅಂತ್ಯಕ್ಕೆ ಅಂದಾಜು 10 ಸಾವಿರ ಮೆಟ್ರಿಕ್ ಟನ್ ಗಳಷ್ಟು ಗೊಬ್ಬರ ಒದಗಿಸಲಾಗುವುದು ಎಂದು ಇಲ್ಲಿನ ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications