ರೈತರಿಗೆ ನೆಮ್ಮದಿ ನೀಡಿದ ಬಿಎಸ್ವೈ: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
ಬೆಂಗಳೂರು, ಜುಲೈ 29: ಒಂದೆಡೆ ಬರಗಾಲ, ಇನ್ನು ಕೆಲವೆಡೆ ವಿಪರೀತ ಮಳೆಯಿಂದ ಬೆಳೆದ ಬೆಳೆ ಕೈಗೆ ಬಾರದೆ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ನೂತನ ಸರ್ಕಾರ ತುಸು ನೆಮ್ಮದಿ ನೀಡಿದೆ.
ಬೆಳೆ ಹಾನಿಯಿಂದ ವಿಮೆ ರೂಪದಲ್ಲಿ ಪರಿಹಾರ ಪಡೆಯಲು ರೈತರಿಗೆ ಇರುವ ಸೌಲಭ್ಯವನ್ನು ಪಡೆದುಕೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತೊಂದು ಅವಕಾಶ ನೀಡಿದ್ದಾರೆ.
ಪ್ರಸ್ತುತ ಬೆಳೆ ವಿಮೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿತ್ತು. ಆದರೆ, ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ದಿನವೇ ಯಡಿಯೂರಪ್ಪ ಅವರು ಬೆಳೆ ವಿಮೆಯ ನೋಂದಣಿ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸಿದ್ದಾರೆ. ಈ ಬಗ್ಗೆ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಗತ್ಯವಿದ್ದರೆ ಕೇಂದ್ರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆಯೂ ಅವರು ಹೇಳಿದ್ದಾರೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅನೇಕ ಕಾರಣಗಳಿಂದ ಬೆಳೆ ವಿಮೆ ನೋಂದಣಿ ಪ್ರಮಾಣ ತೀರಾ ಕಡಿಮೆ ಮಟ್ಟದಲ್ಲಿದೆ. ಹೀಗಾಗಿ ವಿಮೆ ನೋಂದಣಿ ಅವಧಿಯನ್ನು ವಿಸ್ತರಿಸಬೇಕು. ಅಗತ್ಯಬಿದ್ದರೆ ಕೇಂದ್ರಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸಬೇಕು ಎಂದು ಆರ್ಥಿಕ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಳೆ ವಿಮೆ ನೋಂದಣಿಗೆ ಜುಲೈ 29ರ ಗಡುವು ನೀಡಲಾಗಿತ್ತು. ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಕೃಷಿ ಇಲಾಖೆ ಸೂಚನೆ ನೀಡಿತ್ತು. ಮಳೆ ಅನಿಶ್ಚಿತೆಯಿಂದ ಈ ಬಾರಿ ಅಧಿಕ ಪ್ರಮಾಣದಲ್ಲಿ ಬೆಳೆ ನಷ್ಟ ಉಂಟಾಗಿತ್ತು. ಆದರೆ, ವಿಮೆ ನೋಂದಣಿಗೆ ಹೆಸರು ನೀಡಿದ ರೈತರ ಸಂಖ್ಯೆ ತೀರಾ ಕಡಿಮೆ ಪ್ರಮಾಣದಲ್ಲಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications