ರೈತರಿಗೆ ನೆಮ್ಮದಿ ನೀಡಿದ ಬಿಎಸ್ವೈ: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
ಬೆಂಗಳೂರು, ಜುಲೈ 29: ಒಂದೆಡೆ ಬರಗಾಲ, ಇನ್ನು ಕೆಲವೆಡೆ ವಿಪರೀತ ಮಳೆಯಿಂದ ಬೆಳೆದ ಬೆಳೆ ಕೈಗೆ ಬಾರದೆ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ನೂತನ ಸರ್ಕಾರ ತುಸು ನೆಮ್ಮದಿ ನೀಡಿದೆ.
ಬೆಳೆ ಹಾನಿಯಿಂದ ವಿಮೆ ರೂಪದಲ್ಲಿ ಪರಿಹಾರ ಪಡೆಯಲು ರೈತರಿಗೆ ಇರುವ ಸೌಲಭ್ಯವನ್ನು ಪಡೆದುಕೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತೊಂದು ಅವಕಾಶ ನೀಡಿದ್ದಾರೆ.
ಪ್ರಸ್ತುತ ಬೆಳೆ ವಿಮೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿತ್ತು. ಆದರೆ, ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ದಿನವೇ ಯಡಿಯೂರಪ್ಪ ಅವರು ಬೆಳೆ ವಿಮೆಯ ನೋಂದಣಿ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸಿದ್ದಾರೆ. ಈ ಬಗ್ಗೆ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಗತ್ಯವಿದ್ದರೆ ಕೇಂದ್ರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆಯೂ ಅವರು ಹೇಳಿದ್ದಾರೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅನೇಕ ಕಾರಣಗಳಿಂದ ಬೆಳೆ ವಿಮೆ ನೋಂದಣಿ ಪ್ರಮಾಣ ತೀರಾ ಕಡಿಮೆ ಮಟ್ಟದಲ್ಲಿದೆ. ಹೀಗಾಗಿ ವಿಮೆ ನೋಂದಣಿ ಅವಧಿಯನ್ನು ವಿಸ್ತರಿಸಬೇಕು. ಅಗತ್ಯಬಿದ್ದರೆ ಕೇಂದ್ರಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸಬೇಕು ಎಂದು ಆರ್ಥಿಕ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಳೆ ವಿಮೆ ನೋಂದಣಿಗೆ ಜುಲೈ 29ರ ಗಡುವು ನೀಡಲಾಗಿತ್ತು. ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಕೃಷಿ ಇಲಾಖೆ ಸೂಚನೆ ನೀಡಿತ್ತು. ಮಳೆ ಅನಿಶ್ಚಿತೆಯಿಂದ ಈ ಬಾರಿ ಅಧಿಕ ಪ್ರಮಾಣದಲ್ಲಿ ಬೆಳೆ ನಷ್ಟ ಉಂಟಾಗಿತ್ತು. ಆದರೆ, ವಿಮೆ ನೋಂದಣಿಗೆ ಹೆಸರು ನೀಡಿದ ರೈತರ ಸಂಖ್ಯೆ ತೀರಾ ಕಡಿಮೆ ಪ್ರಮಾಣದಲ್ಲಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications