Rain in Chikkamagaluru : ಕಾಫಿನಾಡು ಚಿಕ್ಕಮಗಳೂರಿನ ರೈತರ ಮುಖದಲ್ಲಿ ಮಂದಹಾಸ ತರಿಸಿದ ವರ್ಷಧಾರೆ
ಕಾಫಿನಾಡಿನ ಮಲೆನಾಡು ಭಾಗದದ ಅಲ್ಲಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲಝಳದಿಂದ ರೋಸಿಹೋಗಿದ್ದ ರೈತರು, ಸಾರ್ವಜನಿಕರು ದಿಢೀರ್ ಸುರಿದ ಅಕಾಲಿಕ ಮಳೆಯಿಂದ ಸಂತಸಗೊಂಡಿದ್ದಾರೆ.
ಚಿಕ್ಕಮಗಳೂರು, ಮಾರ್ಚ್, 15: ಕಾಫಿನಾಡಿನ ಮಲೆನಾಡು ಭಾಗದದ ಅಲ್ಲಲ್ಲಿ ಮಂಗಳವಾರ ಸಂಜೆ ವೇಳೆ ಧಾರಾಕಾರ ಮಳೆಯಾಗಿದ್ದು, ಬಿಸಿಲಝಳದಿಂದ ರೋಸಿಹೋಗಿದ್ದ ರೈತರು, ಸಾರ್ವಜನಿಕರು ದಿಢೀರ್ ಸುರಿದ ಅಕಾಲಿಕ ಮಳೆಯ ಸಿಂಚನದಿಂದಾಗಿ ಸಂತಸಗೊಂಡಿದ್ದಾರೆ.
ಕಾಫಿನಾಡಿನಲ್ಲಿ ಕಳೆದ ಕೆಲ ತಿಂಗಳುಗಳಿಂದ ಬಿಸಿಲ ತಾಪ ಗರಿಷ್ಠಮಟ್ಟಕ್ಕೆ ತಲುಪಿತ್ತು. ಸಾರ್ವಜನಿಕರು ಬಿಸಿಲ ತಾಪದಿಂದ ಹೈರಾಣಾಗಿದ್ದರೇ, ಬಿಸಿಲಿನಿಂದ ಬೆಳೆ ರಕ್ಷಣೆ ಮಾಡಿಕೊಳ್ಳಲು ರೈತರು ಹರಸಾಹಪಡುತ್ತಿದ್ದರು. ಆದ್ದರಿಂದ ಇಲ್ಲಿನ ಜನರು ಆಕಾಶದತ್ತ ಮುಖ ಮಾಡಿ ಮಳೆಯ ನಿರೀಕ್ಷೆಯಲ್ಲಿದ್ದರು. ಸದ್ಯ ಮಂಗಳವಾರ ಮಧ್ಯಾಹ್ನದ ಬಳಿಕ ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಅಲ್ಲಲ್ಲಿ ದಿಢೀರ್ ಧಾರಾಕಾರ ಮಳೆ ಸುರಿದಿದೆ.

ಕಾಫಿನಾಡಿನ ಹಲವೆಡೆ ಮಳೆಯ ಸಿಂಚನ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು, ಜಾವಳಿ, ಕಳಸ ತಾಲೂಕಿನ ಹೊರನಾಡು, ಜಾಂಬಳೆ, ಸಂಸೆ, ಬಲಿಗೆ, ಕುದುರೆಮುಖ, ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ, ನೆಮ್ಮಾರ್, ಕೊಪ್ಪ ತಾಲೂಕಿನ ಜಯಪುರ, ಹೇರೂರು ಹಾಗೂ ಎನ್.ಆರ್.ಪುರ ತಾಲೂಕಿನ ಮಾಗುಂಡಿ, ಬಾಳೆಹೊನ್ನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಅಲ್ಲಲ್ಲಿ ಧಾರಾಕಾರ ಮಳೆ ಸುರಿದಿದ್ದರೇ, ಮತ್ತೊಂದೆಡೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಸಂಜೆ ವೇಳೆ ಮೋಡಕವಿದ ವಾತಾವರಣ ಇದ್ದು, ಮಳೆಯ ಸುಳಿವಿರಲಿಲ್ಲ.
ಜಿಲ್ಲೆಯಲ್ಲಿ ಕಳೆದ ಕೆಲ ತಿಂಗಳುಗಳಿಂದ ಬಿಸಿಲ ಝಳ ತೀವ್ರಗೊಂಡಿದ್ದು, ಸಾರ್ವಜನಿಕರು ಬಿಸಿಲ ತಾಪ ತಣಿಸಿಕೊಳ್ಳಲು ತಂಪು ಪಾನೀಯಗಳ ಮೊರೆ ಹೋಗುತ್ತಲೇ ಇದ್ದಾರೆ. ಕಾಫಿ, ಅಡಿಕೆ ಬೆಳೆಗಾರರು ತೋಟ ಉಳಿಸಿಕೊಳ್ಳಲು ನದಿ, ಹಳ್ಳಗಳ ಮೂಲಕ ನೀರು ಹಾಯಿಸಲು ಪರದಾಡುತ್ತಿದ್ದರು. ಆದರೆ ವಿದ್ಯುತ್ ಸಮಸ್ಯೆಯಿಂದಾಗಿ ತೋಟಗಳಿಗೆ ನೀರು ಹಾಯಿಸಲು ಭಾರೀ ಸಮಸ್ಯೆ ಎದುರಿಸುವಂತಾಗಿತ್ತು.

ಬಿಸಿಲ ಧಗೆಯಿಂದ ಬೇಸತ್ತಿದ್ದ ಜನ
ಪರಿಣಾಮ ಡೀಸೆಲ್ ಪಂಪ್ಸೆಟ್ಗಳ ಮೂಲಕ ನೀರು ಹಾಯಿಸಿ ಬಿಸಿಲಿನಿಂದ ತೋಟಗಳ ರಕ್ಷಣೆಗೆ ಮುಂದಾಗಿದ್ದರು. ಸದ್ಯ ದಿಢೀರ್ ಸುರಿದ ಮಳೆ ಕಾಫಿ, ಅಡಿಕೆ ತೋಟಗಳಿಗೆ ತಂಪೆರೆದಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ. ಮಳೆ ಇನ್ನು ಕೆಲ ದಿನಗಳ ಕಾಲ ಸುರಿದಲ್ಲಿ ತಾಪಮಾನದಲ್ಲಿ ಇಳಿಕೆಯಾಗಿ ಬಿಸಿಲಝಳದಿಂದ ಮುಕ್ತಿ ಸಿಗಲಿದೆ. ಹಾಗೆಯೇ ರೈತರ ಬೆಳೆ ರಕ್ಷಣೆ ಸಾಧ್ಯವಾಗಲಿದೆ ಎಂಬುದು ಕಾಫಿನಾಡಿನ ಜನರು ಅಭಿಪ್ರಾಯವಾಗಿದೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications