ಆ. 6ರಿಂದ ಲಾಲ್ಬಾಗ್ ನಲ್ಲಿ ಪುಷ್ಪ ಪ್ರದರ್ಶನ

ಪತ್ರಿಕಾಗೋಷ್ಠಿಯಲ್ಲಿ ಫಲಪುಷ್ಪ ಪ್ರದರ್ಶನದ ವಿವರಗಳನ್ನು ನೀಡಿದ ತೋಟಗಾರಿಕೆ ಇಲಾಖೆಯ ನಿರ್ದೇಶಕ ಎನ್. ಜಯರಾಮ್ ಅವರು 10 ದಿನಗಳ ಪ್ರದರ್ಶನದ ಸಮಯದಲ್ಲಿ ಹೂಗಳನ್ನು ಬದಲಾಯಿಸಿ ಗೇಟ್ ಬಾಡದಂತೆ ನೋಡಿಕೊಳ್ಳಲಾಗುವುದು ಎಂದರು. ಗಾಜಿನ ಮನೆಯಲ್ಲಿ ಇಂಡಿಯಾ ಗೇಟ್ ಜೊತೆಗೆ ಅಂಥೋರಿಯಂ, ಅರ್ಕಿಡ್ಸ್, ವಿಂಕಾ, ಬೋಗನ್ವಿಲ್ಲಾ, ಇಂಪೇಷನ್ಸ್ ಸೇರಿದಂತೆ 100ಕ್ಕೂ ಹೆಚ್ಚು ಬಣ್ಣ-ಬಣ್ಣದ ಹೂಗಳ ವಿನ್ಯಾಸದ ಜೋಡಣೆಯ ಮತ್ತು 260ಕ್ಕೂ ಹೆಚ್ಚು ವೈವಿದ್ಯಮಯ ವಾರ್ಷಿಕ ಹೂಗಳ ಪ್ರದರ್ಶನವಿರುವುದೆಂದು ತಿಳಿಸಿದರು.
ಫಲಪುಷ್ಪ ಪ್ರದರ್ಶನ ಆಗಸ್ಟ್ 6ರಂದು ಮಧ್ಯಾಹ್ನ 12-15 ಗಂಟೆಗೆ ತೋಟಗಾರಿಕೆ ಮತ್ತು ಬಂದಿಖಾನೆ ಸಚಿವ ಉಮೇಶ್ ವಿ.ಕತ್ತಿ ಅವರಿಂದ ಗಾಜಿನ ಮನೆಯಲ್ಲಿ ಉದ್ಘಾಟನೆಗೊಂಡು ಆಗಸ್ಟ್ 15ರವರೆಗೆ ನಡೆಯಲಿದೆ.
ಪ್ರವೇಶ ಶುಲ್ಕ ಮತ್ತು ವಾಹನ ನಿಲುಗಡೆ : ಫಲಪುಷ್ಪ ಪ್ರದರ್ಶನದ ಪ್ರವೇಶ ಶುಲ್ಕ ವಯಸ್ಕರಿಗೆ ವಾರದ ದಿನ 30 ರು. ಮತ್ತು ರಜಾ ದಿನ 40 ರು. ಮತ್ತು ಮಕ್ಕಳಿಗೆ 10 ರು. ನಿಗದಿಪಡಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು 13ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಉಚಿತವಾಗಿ ವೀಕ್ಷಿಸಬಹುದಾಗಿದೆ. ದ್ವಿಚಕ್ರ ವಾಹನಗಳಿಗೆ ಡಬ್ಬಲ್ ರೋಡ್ ಪ್ರವೇಶದ್ವಾರದಿಂದ, 4 ಚಕ್ರದ ಲಘು ವಾಹನಗಳಿಗೆ ಸಿದ್ಧಾಪುರ ಪ್ರವೇಶದ್ವಾರದಿಂದ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಅವರಿಂದ ಆಗಸ್ಟ್ 7ರಂದು ಮಧ್ಯಾಹ್ನ 3 ಗಂಟೆಗೆ ಡಾ.ಎಂ.ಎಚ್.ಮರಿಗೌಡ ಸ್ಮಾರಕ ಭವನದಲ್ಲಿ ಉದ್ಘಾಟನೆಗೊಳ್ಳರುವ ಇಕೆಬಾನ, ತರಕಾರಿ ಕೆತ್ತನೆ, ಪುಷ್ಪಭಾರತಿ, ಬೊನ್ಸಾಯ್, ಡಚ್ಚ್ ಹೊವಿನ ಜೋಡಣೆ, ಥಾಯ್ ಆರ್ಟ್, ಜಾನೂರು, ಒಣಹೂವಿನ ಜೋಡಣೆಯ ಕಲೆಗಳ ಪ್ರದರ್ಶನವನ್ನು ಆಗಸ್ಟ್ 8ರಂದು ಸಂಜೆ 6 ಗಂಟೆಯವರೆಗೆ ಸಾರ್ವಜನಿಕರು ಹೆಚ್ಚಿನ ಶುಲ್ಕವಿಲ್ಲದೆ ವೀಕ್ಷಿಸಿಬಹುದಾಗಿದೆ.
ವಿಶೇಷ ಭದ್ರತೆ : ಪೊಲೀಸ್ ಇಲಾಖೆಯ ಶಿಫಾರಸ್ಸಿನಂತೆ, ಇತ್ತೀಚಿನ ಭಯೋತ್ಪಾದಕ ವಿದ್ವಂಸಕ ಕೃತ್ಯಗಳ ಹಿನ್ನಲೆಯಲ್ಲಿ ಪ್ರವಾಸಿಗರಿಗೆ ವಿಶೇಷ ಭದ್ರತೆ ನೀಡುವ ದೃಷ್ಟಿಯಿಂದ ರಹಸ್ಯ ಕ್ಯಾಮರಾಗಳನ್ನು ಅಳವಡಿಸುವ ಜೊತೆಗೆ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಗ್ಯಾಲರಿ : ಲಾಲ್ ಬಾಗ್ ವರ್ಷದ ಹಿಂದೆ ಹೀಗಿತ್ತು
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications