ಆ. 6ರಿಂದ ಲಾಲ್ಬಾಗ್ ನಲ್ಲಿ ಪುಷ್ಪ ಪ್ರದರ್ಶನ

ಪತ್ರಿಕಾಗೋಷ್ಠಿಯಲ್ಲಿ ಫಲಪುಷ್ಪ ಪ್ರದರ್ಶನದ ವಿವರಗಳನ್ನು ನೀಡಿದ ತೋಟಗಾರಿಕೆ ಇಲಾಖೆಯ ನಿರ್ದೇಶಕ ಎನ್. ಜಯರಾಮ್ ಅವರು 10 ದಿನಗಳ ಪ್ರದರ್ಶನದ ಸಮಯದಲ್ಲಿ ಹೂಗಳನ್ನು ಬದಲಾಯಿಸಿ ಗೇಟ್ ಬಾಡದಂತೆ ನೋಡಿಕೊಳ್ಳಲಾಗುವುದು ಎಂದರು. ಗಾಜಿನ ಮನೆಯಲ್ಲಿ ಇಂಡಿಯಾ ಗೇಟ್ ಜೊತೆಗೆ ಅಂಥೋರಿಯಂ, ಅರ್ಕಿಡ್ಸ್, ವಿಂಕಾ, ಬೋಗನ್ವಿಲ್ಲಾ, ಇಂಪೇಷನ್ಸ್ ಸೇರಿದಂತೆ 100ಕ್ಕೂ ಹೆಚ್ಚು ಬಣ್ಣ-ಬಣ್ಣದ ಹೂಗಳ ವಿನ್ಯಾಸದ ಜೋಡಣೆಯ ಮತ್ತು 260ಕ್ಕೂ ಹೆಚ್ಚು ವೈವಿದ್ಯಮಯ ವಾರ್ಷಿಕ ಹೂಗಳ ಪ್ರದರ್ಶನವಿರುವುದೆಂದು ತಿಳಿಸಿದರು.
ಫಲಪುಷ್ಪ ಪ್ರದರ್ಶನ ಆಗಸ್ಟ್ 6ರಂದು ಮಧ್ಯಾಹ್ನ 12-15 ಗಂಟೆಗೆ ತೋಟಗಾರಿಕೆ ಮತ್ತು ಬಂದಿಖಾನೆ ಸಚಿವ ಉಮೇಶ್ ವಿ.ಕತ್ತಿ ಅವರಿಂದ ಗಾಜಿನ ಮನೆಯಲ್ಲಿ ಉದ್ಘಾಟನೆಗೊಂಡು ಆಗಸ್ಟ್ 15ರವರೆಗೆ ನಡೆಯಲಿದೆ.
ಪ್ರವೇಶ ಶುಲ್ಕ ಮತ್ತು ವಾಹನ ನಿಲುಗಡೆ : ಫಲಪುಷ್ಪ ಪ್ರದರ್ಶನದ ಪ್ರವೇಶ ಶುಲ್ಕ ವಯಸ್ಕರಿಗೆ ವಾರದ ದಿನ 30 ರು. ಮತ್ತು ರಜಾ ದಿನ 40 ರು. ಮತ್ತು ಮಕ್ಕಳಿಗೆ 10 ರು. ನಿಗದಿಪಡಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು 13ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಉಚಿತವಾಗಿ ವೀಕ್ಷಿಸಬಹುದಾಗಿದೆ. ದ್ವಿಚಕ್ರ ವಾಹನಗಳಿಗೆ ಡಬ್ಬಲ್ ರೋಡ್ ಪ್ರವೇಶದ್ವಾರದಿಂದ, 4 ಚಕ್ರದ ಲಘು ವಾಹನಗಳಿಗೆ ಸಿದ್ಧಾಪುರ ಪ್ರವೇಶದ್ವಾರದಿಂದ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಅವರಿಂದ ಆಗಸ್ಟ್ 7ರಂದು ಮಧ್ಯಾಹ್ನ 3 ಗಂಟೆಗೆ ಡಾ.ಎಂ.ಎಚ್.ಮರಿಗೌಡ ಸ್ಮಾರಕ ಭವನದಲ್ಲಿ ಉದ್ಘಾಟನೆಗೊಳ್ಳರುವ ಇಕೆಬಾನ, ತರಕಾರಿ ಕೆತ್ತನೆ, ಪುಷ್ಪಭಾರತಿ, ಬೊನ್ಸಾಯ್, ಡಚ್ಚ್ ಹೊವಿನ ಜೋಡಣೆ, ಥಾಯ್ ಆರ್ಟ್, ಜಾನೂರು, ಒಣಹೂವಿನ ಜೋಡಣೆಯ ಕಲೆಗಳ ಪ್ರದರ್ಶನವನ್ನು ಆಗಸ್ಟ್ 8ರಂದು ಸಂಜೆ 6 ಗಂಟೆಯವರೆಗೆ ಸಾರ್ವಜನಿಕರು ಹೆಚ್ಚಿನ ಶುಲ್ಕವಿಲ್ಲದೆ ವೀಕ್ಷಿಸಿಬಹುದಾಗಿದೆ.
ವಿಶೇಷ ಭದ್ರತೆ : ಪೊಲೀಸ್ ಇಲಾಖೆಯ ಶಿಫಾರಸ್ಸಿನಂತೆ, ಇತ್ತೀಚಿನ ಭಯೋತ್ಪಾದಕ ವಿದ್ವಂಸಕ ಕೃತ್ಯಗಳ ಹಿನ್ನಲೆಯಲ್ಲಿ ಪ್ರವಾಸಿಗರಿಗೆ ವಿಶೇಷ ಭದ್ರತೆ ನೀಡುವ ದೃಷ್ಟಿಯಿಂದ ರಹಸ್ಯ ಕ್ಯಾಮರಾಗಳನ್ನು ಅಳವಡಿಸುವ ಜೊತೆಗೆ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಗ್ಯಾಲರಿ : ಲಾಲ್ ಬಾಗ್ ವರ್ಷದ ಹಿಂದೆ ಹೀಗಿತ್ತು
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications