ಫೆ. 10, 11ರಂದು ಚಿತ್ರದುರ್ಗದಲ್ಲಿ ಫಲ, ಪುಷ್ಪ ಪ್ರದರ್ಶನ
ತೋಟಗಾರಿಕಾ ಜಿಲ್ಲಾ ಪಂಚಾಯ್ತಿ, ಕೃಷಿ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಆಶ್ರಯದಲ್ಲಿ ನಡೆಯಲಿರುವ ಫಲ ಪುಷ್ಪ ಪ್ರದರ್ಶನವು ಈವರೆಗಿನ 26ನೇ ಪ್ರದರ್ಶನವಾಗಿದ್ದು, ಇದಕ್ಕಾಗಿ ಸುಮಾರು 7 ಲಕ್ಷ ರು. ಹಣವನ್ನು ವ್ಯಯಿಸಲಾಗುತ್ತಿದೆ.
ಚಿತ್ರದುರ್ಗ, ಫೆಬ್ರವರಿ 8: ಪ್ರತಿ ವರ್ಷದಂತೆ ಈ ವರ್ಷವೂ ಐತಿಹಾಸಿಕ ನಗರ ಚಿತ್ರದುರ್ಗ ಜಿಲ್ಲೆಯಲ್ಲಿ ಇದೇ ತಿಂಗಳ 10 ಹಾಗೂ 11ರಂದು ಫಲ, ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ತೋಟಗಾರಿಕಾ ಕಚೇರಿಯ ಆವರಣದಲ್ಲಿಯೇ ಪ್ರದರ್ಶನ ನಡೆಯಲಿದೆ.
ತೋಟಗಾರಿಕಾ ಜಿಲ್ಲಾ ಪಂಚಾಯ್ತಿ, ಕೃಷಿ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಆಶ್ರಯದಲ್ಲಿ ನಡೆಯಲಿರುವ ಫಲ ಪುಷ್ಪ ಪ್ರದರ್ಶನವು ಈವರೆಗಿನ 26ನೇ ಪ್ರದರ್ಶನವಾಗಿದ್ದು, ಇದಕ್ಕಾಗಿ ಸುಮಾರು 7 ಲಕ್ಷ ರು. ಹಣವನ್ನು ವ್ಯಯಿಸಲಾಗುತ್ತಿದೆ.

ವಿವಿಧ ಪುಷ್ಪಾಕೃತಿಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಬ್ಯಾಡ್ಮಿಂಟನ್ ಆಟಗಾರ್ತಿ ಹಾಗೂ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು, ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಕುಸ್ತಿಪಟು ದೀಪಾ ಮಲ್ಲಿಕ್, ಪರಿಸರ ಪ್ರೇಮಿ ಸಾಲು ಮರದ ತಿಮ್ಮಕ್ಕ, ಮುಖ್ಯಮಂತ್ರಿ, ವಿಶ್ವಸುಂದರಿ, ಭುವನಸುಂದರಿ, ಭಾರತದ ಪ್ರಥಮ ಮಹಿಳಾ ಪ್ರಧಾನಿ, ಹೀಗೆ ಎಲ್ಲವೂ ಮಹಿಳೆಯರಿಗೆ ಮೀಸಲಾಗುವಂಥ ವರ್ಣರಂಜಿತ ಕಲಾಕೃತಿಗಳು ಜನರನ್ನು ಸೆಳೆಯಲಿವೆಂದು ನಿರೀಕ್ಷಿಸಲಾಗಿದೆ.
ಈ ಎಲ್ಲಾ ವಿನ್ಯಾಸಗಳೂ ಮೈಸೂರಿನ ಪುಷ್ಪ ಕಲಾವಿದರ ಕೈಚಳಕದಲ್ಲಿ ನಿರ್ಮಾಣವಾಗುತ್ತಿದ್ದು, ಅವೆಲ್ಲವನ್ನೂ ಫೆ. 9ರಂದು ನಗರಕ್ಕೆ ತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಒಟ್ಟಾರೆಯಾಗಿ, ಈ ಬಾರಿ ಮತ್ತಷ್ಟು ಮನೋಹರ ಪುಷ್ಪ ವಿನ್ಯಾಸಗಳನ್ನು ನೋಡುವ ಅವಕಾಶ ಚಿತ್ರದುರ್ಗ ಜಿಲ್ಲೆಯ ನಾಗರೀಕರದ್ದಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications