ಮಾಜಿ ಸಚಿವ ಪರಮೇಶ್ಚರ ನಾಯ್ಕ ಪುತ್ರನಿಂದ ರೈತರ ಮೇಲೆ ಹಲ್ಲೆ
ದಾವಣಗೆರೆ, ಡಿಸೆಂಬರ್ 19: ಮಾಜಿ ಸಚಿವ ಪಿ. ಟಿ. ಪರಮೇಶ್ವರ ನಾಯ್ಕ ಅವರ ಪುತ್ರ ಹಾಗೂ ಆತನ ಬೆಂಬಲಿಗರು ಸೇರಿಕೊಂಡು ರೈತರ ಮೇಲೆ ಹಲ್ಲೆ ನಡೆಸಿದ ಘಟನೆ ಬಳ್ಳಾರಿ ಜಿಲ್ಲೆ ಹರಪನಹಳ್ಳಿಯ ಹೊರವಲಯದಲ್ಲಿ ನಡೆದಿದೆ.
ಕಲ್ಲು ಗಣಿಗಾರಿಕೆ ವಿಚಾರವಾಗಿ ಪ್ರಶ್ನಿಸಿದ ರೈತರ ಮೇಲೆ ಹಲ್ಲೆ ನಡೆಸಲಾಗಿದ್ದು, ಹಲ್ಲೆ ನಡೆಸಿರುವ ಫೋಟೋದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹರಪ್ಪನಹಳ್ಳಿ ಪಟ್ಟಣದ ಹೊರವಲಯದಲ್ಲಿ ಮಾಜಿ ಸಚಿವ ಪಿ. ಟಿ. ಪರಮೇಶ್ವರ ನಾಯ್ಕ, ಅವರ ಪುತ್ರ ಭರತ್ ಹಾಗೂ ಬೆಂಬಲಿಗರಿಂದ ಹಲ್ಲೆ ನಡೆಸಿದ್ದು ವಿಡಿಯೋದಲ್ಲಿದೆ. ಮಾತ್ರವಲ್ಲ ಮಾಜಿ ಪರಮೇಶ್ವರ ನಾಯ್ಕ ಸಹ ವಿಡಿಯೋದಲ್ಲಿದ್ದಾರೆ.

ಕಲ್ಲು ಗಣಿಗಾರಿಕೆಯಿಂದ ತಮ್ಮ ಜಮೀನಿಗೆ ತೊಂದರೆ ಆಗುತ್ತಿದೆ. ಈ ಬಗ್ಗೆ ಹಲವು ಬಾರಿ ಸಂಬಂಧ ಪಟ್ಟವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ಧೂಳಿನಿಂದ ಭಾರಿ ಸಮಸ್ಯೆಯಾಗಿದೆ ಎಂದು ಹೇಳಿದ್ದ ಕಾರಣ ಉಪವಿಭಾಗಾಧಿಕಾರಿಗಳನ್ನು ಪರಿಶೀಲನೆಗೆ ಕರೆದುಕೊಂಡು ಬಂದಿದ್ದರು.
ಈ ವೇಳೆ ಇದೇ ಮಾರ್ಗದಲ್ಲಿ ಪಿ.ಟಿ. ಪರಮೇಶ್ವರ ನಾಯ್ಕ್ ಕಾರಿನಲ್ಲಿ ಹೋಗುವಾಗ ಧೂಳು ಬಂದ ಕಾರಣ ರೈತರು ಆಕ್ಷೇಪಿಸಿದರು. ಆಗ ಪರಮೇಶ್ವರ ನಾಯ್ಕ್ ರ ಬೆಂಬಲಿಗರು ಹಲ್ಲೆ ಮಾಡಲು ಮುಂದಾದರು. ಆಗ ಕಾರಿನಿಂದ ಇಳಿದು ಬಂದ ಪರಮೇಶ್ಚರ ನಾಯ್ಕ, ಆತನ ಪುತ್ರ ಸಹ ರೈತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದವರು ಆರೋಪ ಮಾಡಿದ್ದಾರೆ.
ಹರಪನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ರೈತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು, ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸೇರಿಸಿದ್ದು ಈಗ ಚೇತರಿಸಿಕೊಂಡಿದ್ದಾರೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications