ಅಡಿಕೆ ಬೆಳೆಗೆ ಕೊಳೆರೋಗ, ಆತಂಕದಲ್ಲಿ ಬೆಳೆಗಾರರು
ಮಂಗಳೂರು, ಜುಲೈ 23: ಕರಾವಳಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆ ಇಲ್ಲಿನ ಕೃಷಿಕರನ್ನು ಕಂಗೆಡಿಸಿದೆ. ಅದರಲ್ಲೂ ದಕ್ಷಿಣಕನ್ನಡ ಜಿಲ್ಲೆಯ ಕೃಷಿಕರ ಪ್ರಮುಖ ಬೆಳೆಯಾದ ಅಡಿಕೆ ಮಳೆಯಿಂದಾಗಿ ಸಂಪೂರ್ಣ ಹಾನಿಯಾಗುವ ಆತಂಕದಲ್ಲಿದ್ದಾರೆ ರೈತರು.
ಕಳೆದ 50 ದಿನಗಳಿಂದ ಎಡೆಬಿಡದೆ ಮಳೆಯಾದ ಕಾರಣ ಕೃಷಿಕರಿಗೆ ಅಡಿಕೆಗೆ ಔಷಧಿ ಸಿಂಪಡಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲೆಯ ಬಹುತೇಕ ಎಲ್ಲಾ ಅಡಿಕೆ ತೋಟಗಳಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ.
ದಕ್ಷಿಣಕನ್ನಡ ಜಿಲ್ಲೆಯ ಸಾವಿರಾರು ಕುಟುಂಬಗಳು ಅಡಿಕೆಯನ್ನೇ ನೆಚ್ಚಿಕೊಂಡು ಜೀವನ ಸಾಗಿಸುತ್ತಿದೆ. ಆದರೆ ಮಳೆ ಈ ಬಾರಿ ಈ ಕೃಷಿಕರನ್ನು ಮತ್ತೆ ಸಂಕಷ್ಟಕ್ಕೆ ತಂದೊಡ್ಡುವ ಲಕ್ಷಣಗಳು ಗೋಚರಿಸಲಾರಂಭಿಸಿದೆ. ಸಾಮಾನ್ಯವಾಗಿ ಅಡಿಕೆ ಹಿಂಗಾರ ಒಡೆದು ಎಳೆ ಅಡಿಕೆ ಬರುವ ಈ ಸಮಯದಲ್ಲಿ ಇವುಗಳಿಗೆ ಬೋಡೋ ದ್ರಾವಣ ಸಿಂಪಡಿಸುವುದು ವಾಡಿಕೆ.

ಜುಲೈ ತಿಂಗಳಿಗೆ ಸಾಮಾನ್ಯವಾಗಿ ಎರಡನೇ ಬಾರಿಗೆ ಅಡಿಕೆಗೆ ಬೋಡೋ ದ್ರಾವಣ ಸಿಂಪಡಣೆಯನ್ನು ಕೃಷಿಕರು ಮಾಡಬೇಕಿತ್ತು. ಆದರೆ ಭಾರೀ ಮಳೆಯಿಂದಾಗಿ ಒಂದು ಬಾರಿಯೂ ಸಿಂಪಡಣೆ ಮಾಡಲಾರದ ಸ್ಥಿತಿಯನ್ನು ಮಳೆ ತಂದೊಡ್ಡಿದೆ. ಈ ಕಾರಣಕ್ಕಾಗಿ ಅಡಿಕೆ ಗಿಡಗಳಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ.
ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲ್ಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಈ ಎಲ್ಲಾ ಭಾಗಗಳ ತೋಟದಲ್ಲಿರುವ ಅಡಿಕೆ ಗಿಡಗಳಿಂದ ಎಳೆ ಅಡಿಕೆಗಳು ಇದೀಗ ಉದುರಲಾರಂಭಿಸಿದೆ.

ಅಡಿಕೆ ಗಿಡದಲ್ಲಿ ಹಿಂಗಾರ ಅರಳುವ ಸಮಯದಿಂದ ಮೊದಲುಗೊಂಡು ಹಣ್ಣು ಅಡಿಕೆ ಆಗುವವರೆಗೆ ಸರಿ ಸುಮಾರು ಮೂರು ಬಾರಿಯಾದರೂ ಬೋಡೋ ದ್ರಾವಣವನ್ನು ಸಿಂಪಡಿಸಬೇಕಾಗುತ್ತದೆ. ಆದರೆ ಈ ಬಾರಿ ಕೆಲವು ಕೃಷಿಕರು ಒಂದು ಬಾರಿಯೂ ದ್ರಾವಣವನ್ನು ಸಿಂಪಡಿಸಿಲ್ಲ. ಈ ಕಾರಣಕ್ಕಾಗಿ ಜಿಲ್ಲೆಯ ಸಾವಿರಾರು ಎಕರೆ ಪ್ರದೇಶಗಳಲ್ಲಿ ಬೆಳೆದ ಅಡಿಕೆ ತೋಟಗಳಲ್ಲಿ ಕೊಳೆರೋಗ ಕಾಣಿಸಿ ಕೊಂಡಿದೆ.
ಕಳೆದ ಬಾರಿಯಂತೆ ಈ ಬಾರಿಯೂ ಅಡಿಕೆ ಕೃಷಿಕರು ಕೊಳೆರೋಗದಿಂದ ಕಂಗೆಡುವ ಲಕ್ಷಣಗಳು ಗೋಚರಿಸಲಾರಂಭಿಸಿದೆ. ಕೂಡಲೇ ಸರಕಾರ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಬೇಕೆಂಬ ಆಗ್ರಹವೂ ಕೇಳಿ ಬರುತ್ತಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications