ಎರಡು ವರ್ಷದಲ್ಲೇ ಅತಿಹೆಚ್ಚಿನ ಜಿಡಿಪಿ ಸಾಧನೆ
ಹೊಸದೆಹಲಿ, ಆ. 30: ಕಳೆದ ಎರಡು ವರ್ಷದಲ್ಲೇ ಅತಿ ಹೆಚ್ಚಿನ ಜಿಡಿಪಿ ದರ ದಾಖಲಾಗಿದೆ. ಕೇಂದ್ರ ಲೆಕ್ಕ ಪತ್ರ ಸಮಿತಿ ಬಿಡುಗಡೆ ಮಾಡಿರುವ ಅಂಕಿ ಅಂಶದಂತೆ ಕಳೆದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶ ಶೇ. 5.7 ಆರ್ಥಿಕ ಅಭಿವೃದ್ಧಿ ದರ ದಾಖಲಿಸಿದೆ. ಇದು ದೇಶದ ಕ್ಷಿಪ್ರ ಆರ್ಥಿಕ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದೇ ವಿಶ್ಲೇಷಿಸಲಾಗಿದೆ.
ವಿವಿಧ ಉತ್ಪನ್ನ ತಯಾರಿಕಾ ವಿಭಾಗ ಮತ್ತು ಸೇವಾ ಘಟಕಕ್ಕೆ ಸರ್ಕಾರ ನೀಡಿದ ಉತ್ತೇಜನ ಈ ಬೆಳವಣಿಗೆಗೆ ಕಾರಣವಾಗಿದೆ. ಕೇಂದ್ರ ಲೆಕ್ಕಪತ್ರ ಸಮಿತಿ ಬಿಡುಗಡೆಮಾಡಿರುವ ಅಂಕೆ ಸಂಖ್ಯೆಗಳ ಆಧಾರದಲ್ಲಿ ಎಪ್ರಿಲ್-ಜೂನ್ ವೇಳೆಯಲ್ಲಿ ದೇಶ ಶೇ. 5.7 ಅಭಿವೃದ್ಧಿ ದರ ದಾಖಲಿಸಿದೆ. ಇದು ಹಿಂದಿನ ತ್ರೈಮಾಸಿಕದಲ್ಲಿ ಇದು ಶೇ. 4.6 ರಷ್ಟಿತ್ತು.

ಇದು ಕೇಂದ್ರ ಸರ್ಕಾರದ ವಿಶ್ವಾಸ ಹೆಚ್ಚಿಸಿದ್ದು ದೊಡ್ಡ ದೊಡ್ಡ ಯೋಜನೆಗಳಿಗೆ ಮತ್ತು ಕೈಗಾರಿಕೆಗಳ ಸ್ಥಾಪನೆಗೆ ಅವಕಾಶವಾಗುತ್ತದೆ ಎನ್ನಬಹುದಾದರೂ ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ ಇನ್ನೂ ಅನೇಕ ಸಮಸ್ಯೆಗಳಿಂದ ಹೊರತಾಗಿಲ್ಲ.
ಮಳೆ ಕಣ್ಣಾಮುಚ್ಚಾಲೆ ನಡುವೆಯೂ ಉತ್ತಮ ಪ್ರಗತಿ ಸಾಧಿಸಿರುವುದು ಸಂತಸ ತಂದಿದೆ. ರಫ್ತಿನ ಪ್ರಮಾಣ ಹೆಚ್ಚಿಸಲು ಗಮನ ನೀಡಲಾಗುತ್ತಿದೆ. ಕೆಲವೊಂದು ಕ್ಷೇತ್ರಗಳಲ್ಲಿ ನಷ್ಟ ಎದುರಾಗುತ್ತಿದ್ದು ಲೋಪ ತಡೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಹಣಕಾಸು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಜಿಡಿಪಿ ಅಭಿವೃದ್ಧಿ ನಮ್ಮದೇ ಸಾಧನೆ: ಚಿದಂಬರಂ
ಜೆಡಿಪಿ ದರದಲ್ಲಿ ಶೇ. 5.7 ರಷ್ಟು ಸಾಧನೆಯಾಗಲು ಯುಪಿಎ ಸರ್ಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳೇ ಕಾರಣ ಎಂದು ಕೇಂದ್ರದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.
ಆರ್ಥಿಕ ಅಭಿವೃದ್ಧಿಗೆ ಈ ಬೆಳವಣಿಗೆ ದುಕ್ಸೂಚಿಯಾಗಿ ನಿಲ್ಲುತ್ತದೆ. 2014-15 ಹಣಕಾಸು ವರ್ಷದ ಆರಂಭದಲ್ಲಿ ಯುಪಿಎ ಕೈಗೊಂಡ ಕಾರ್ಯಕ್ರಮಗಳೇ ಇದಕ್ಕೆ ಕಾರಣ ಎಂದಿದ್ದಾರೆ.
ಎನ್ಡಿಎ ಸರ್ಕಾರ ಯುಪಿಎ ರೂಪಿಸಿದ್ದ ಉತ್ತಮ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದ್ದಾರೆ
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications