ಎಂಎಸ್ಪಿ ಅಡಿ ರಾಗಿ, ಜೋಳ ಖರೀದಿ: ರೈತರಿಗೆ ಮಾಹಿತಿ
ಬೆಂಗಳೂರು, ಮಾರ್ಚ್ 24: 2023-24ನೇ ಸಾಲಿನಲ್ಲಿ ಬೆಳೆದ ರಾಗಿ ಮತ್ತು ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲು ದಿನಾಂಕ ಘೋಷಣೆ ಮಾಡಲಾಗಿದೆ. ರೈತರು ಎಂಎಸ್ಪಿ ಅಡಿ ಬೆಳೆಯನ್ನು ಮಾರಾಟ ಮಾಡಲು ಮೊದಲು ನೋಂದಣಿ ಮಾಡಿಸಬೇಕಿದೆ.
ಬಳ್ಳಾರಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಈ ಕುರಿತು ತೀರ್ಮಾನಿಸಿದೆ. ರಾಜ್ಯದಲ್ಲಿ ಇನ್ನು 3 ಲಕ್ಷ ಮೆಟ್ರಿಕ್ ಟನ್ ಜೋಳವನ್ನು ಹಾಗೂ 5,99,392 ಮೆಟ್ರಿಲ್ ಟನ್ ರಾಗಿಯನ್ನು ರೈತರಿಂದ ಖರೀದಿಸಲು ಸರ್ಕಾರ ಮುಂದಾಗಿದೆ.

ಖರೀದಿ ಪ್ರಕ್ರಿಯೆಯಲ್ಲಿ ಖರೀದಿ ಮಿತಿಯು ಪ್ರತಿ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್ನಂತೆ ಗರಿಷ್ಠ 20 ಕ್ವಿಂಟಾಲ್ ಮಿತಿ ಇದ್ದು, ಬಳ್ಳಾರಿ ಜಿಲ್ಲೆಯ ರೈತರು ಮಾರಾಟಕ್ಕೆ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ನೋಂದಣಿ ಮತ್ತು ಖರೀದಿ ಅವಧಿ: 2023-24ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಖರೀದಿಸಲು ತೀರ್ಮಾನಿಸಿರುವ ಕೃಷಿ ಉತ್ಪನ್ನ, ರೈತರ ನೋಂದಣಿ, ಖರೀದಿ ಪ್ರಾರಂಭದ ದಿನದ ವಿವರಗಳನ್ನು ಜಿಲ್ಲಾಡಳಿತ ರೈತರ ಉಪಯೋಗಕ್ಕಾಗಿ ಪ್ರಕಟಿಸಿದೆ.
ಮುಂಗಾರು/ ಹಿಂಗಾರು ಋತುವಿನ ಖರೀದಿಸುವ ಕೃಷಿ ಉತ್ಪನ್ನಗಳಲ್ಲಿ ರಾಗಿ, ಜೋಳ ಸೇರಿವೆ.
ಮುಂಗಾರು/ ಹಿಂಗಾರು ಋತುವಿನ ರೈತರ ನೋಂದಣಿ ಅವಧಿಯೂ ಮಾರ್ಚ್ 31ರವರೆಗೆ ಆಗಿರುತ್ತದೆ. ಖರೀದಿ ಪ್ರಾರಂಭ ಮತ್ತು ಮುಕ್ತಾಯದ ದಿನಾಂಕ ಏಪ್ರಿಲ್ 1 ರಿಂದ ಜೂನ್ 30 ರವರೆಗೆ ಎಂದು ತಿಳಿಸಲಾಗಿದೆ.
2023-24 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ, ಇವರನ್ನು ಖರೀದಿ ಏಜೆನ್ಸಿಯಾಗಿ ನೇಮಿಸಿದೆ. ಕೇಂದ್ರ ಸರ್ಕಾರವು ನಿಗದಿಪಡಿಸಿದ ಗುರಿ ತಲುಪದೇ ಇರುವುದರಿಂದ ರಾಗಿ, ಜೋಳ ಖರೀದಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.
ರಾಗಿ ಮತ್ತು ಜೋಳ ಮಾತ್ರವಲ್ಲ. 2023-24ನೇ ಸಾಲಿನ ಋತುವಿನಲ್ಲಿ ಬೆಳೆದ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಮಾಡಲಾಗುತ್ತದೆ. ಇದಕ್ಕೆ ಬೆಂಬಲ ಬೆಲೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ.
ರೈತರಿಂದ ಖರೀದಿ ಮಾಡುವ ಮಾಲ್ದಂಡಿ ಬಿಳಿ ಜೋಳಕ್ಕೆ ರೂ.3,225 (ಪ್ರತಿ ಕ್ವಿಂಟಾಲ್ಗೆ) ಮತ್ತು ಹೈಬ್ರಿಡ್ ಬಿಳಿ ಜೋಳಕ್ಕೆ ರೂ. 3,180 (ಪ್ರತಿ ಕ್ವಿಂಟಾಲ್ಗೆ) ಬೆಲೆ ನಿಗದಿ ಮಾಡಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ, ಬೆಂಗಳೂರು. ಇವರು ಖರೀದಿಸುವ ಏಜೆನ್ಸಿ.
ಹಿಂಗಾರು ಋತುವಿನ ರೈತರ ನೋಂದಣಿ ಈಗಾಗಲೇ ಪ್ರಾರಂಭವಾಗಿದೆ. ಹಿಂಗಾರು ಋತುವಿನ ಖರೀದಿ ಪ್ರಾರಂಭ ಮತ್ತು ಮುಕ್ತಾಯದ ದಿನವು ಏಪ್ರಿಲ್ 1 ರಿಂದ ಮೇ 31ರ ವರೆಗೆ ಇರುತ್ತದೆ. ಬಿಳಿ ಜೋಳ ಮಾರಾಟ ಮಾಡಲು ಬಯಸುವ ರೈತರು ಬಳ್ಳಾರಿ ಜಿಲ್ಲೆಯಲ್ಲಿ ತೆರೆದಿರುವ ಖರೀದಿ ಕೇಂದ್ರದ ಬಗ್ಗೆ ಮಾಹಿತಿಗಾಗಿ ಬಳ್ಳಾರಿ ತಾಲ್ಲೂಕಿನ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಬಳ್ಳಾರಿ ಘಟಕ-1&2 ರ ನರಸಿಂಹ ಅವರನ್ನು 9900677875, ಕಂಪ್ಲಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ರಂಗಪ್ಪ ಅವರನ್ನು 9740838910 ಸಂಖ್ಯೆ ಮೂಲಕ ಸಂಪರ್ಕಿಸಬಹುದು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications