ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ ವ್ಯಾಪ್ತಿಗೆ ಅರಿಶಿನ ಬೆಳೆ

|
Google Oneindia Kannada News

ಚಾಮರಾಜನಗರ, ಜುಲೈ 22 : ಅರಿಶಿನ ಬೆಳೆಯನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ ವ್ಯಾಪ್ತಿಗೆ ಸೇರಿಸಲಾಗಿದೆ. ತೋಟಗಾರಿಕೆ ಇಲಾಖೆಯ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆಯನ್ನು ವಿಮೆ ವ್ಯಾಪ್ತಿಗೆ ಸೇರಿಸಿದೆ.

ಅರಿಶಿನ ಬೆಳೆಗೆ ಇಂಡಿಮ್ನೆಟಿ ಮಟ್ಟ ಶೇ. 90ರಂತೆ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 1 ಲಕ್ಷ 33 ಸಾವಿರ ರೂ. ಆಗಿದೆ. ಬೆಳೆಗಳನ್ನು ಬೆಳೆಯುವ ರೈತರು ವಿಮಾ ಕಂತು ಶೇ. 5ರಂತೆ ಪ್ರತಿ ಎಕೆರೆಗೆ ಪಾವತಿಸಬೇಕಾದ ಮೊತ್ತ 2,692 ರೂ. ಆಗಿರುತ್ತದೆ.

ಕರ್ನಾಟಕದ ಕಥೆ: ಲಾಕ್ ಡೌನ್ ವೇಳೆ ಪ್ರತಿನಿತ್ಯ ಒಬ್ಬ ರೈತ ಆತ್ಮಹತ್ಯೆ! ಕರ್ನಾಟಕದ ಕಥೆ: ಲಾಕ್ ಡೌನ್ ವೇಳೆ ಪ್ರತಿನಿತ್ಯ ಒಬ್ಬ ರೈತ ಆತ್ಮಹತ್ಯೆ!

ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಹರವೆ, ಕಸಬಾ, ಸಂತೇಮರಹಳ್ಳಿ, ಚಂದಕವಾಡಿ ಹೋಬಳಿ, ಗುಂಡ್ಲುಪೇಟೆಯ ಕಸಬಾ, ಬೇಗೂರು, ತೆರಕಣಾಂಬಿ, ಹಂಗಳ, ಕೊಳ್ಳೇಗಾಲದ ಕಸಬಾ, ಪಾಳ್ಯ, ಹಾಗೂ ಹನೂರು ತಾಲೂಕಿನ ಹನೂರು, ರಾಮಾಪುರ, ಲೊಕ್ಕನಹಳ್ಳಿ ಹೋಬಳಿಗಳ ಅರಿಶಿನ ಬೆಳೆಯನ್ನು ವಿಮೆಗೆ ಒಳಪಡಿಸಲಾಗಿದೆ.

ಮಾವು ಬೆಳೆಯುವ ರೈತರಿಗೆ ಇಸ್ರೇಲ್ ತಂತ್ರಜ್ಞಾನದ ಸಲಹೆಗಳುಮಾವು ಬೆಳೆಯುವ ರೈತರಿಗೆ ಇಸ್ರೇಲ್ ತಂತ್ರಜ್ಞಾನದ ಸಲಹೆಗಳು

Good News For Farmers Turmeric Crop Under PMFBY

ಬೆಳೆಯನ್ನು ಬೆಳೆಯುವ ರೈತರು ವಿಮಾ ಕಂತನ್ನು ಪಾವತಿಸಲು ಜುಲೈ 31 ಕೊನೆಯ ದಿನವಾಗಿದೆ. ವಿಮಾ ಕಂತು ಪಾವತಿಸುವಾಗ ಬ್ಯಾಂಕಿಗೆ (ಸಾಲ ಪಡೆಯದ ರೈತರು) ನಿಗದಿತ ಅರ್ಜಿ ನಮೂನೆಯೊಂದಿಗೆ ಪ್ರಸಕ್ತ ಸಾಲಿನ ಮೂಲ ಪಹಣಿ (ಆರ್.ಟಿ.ಸಿ) ನೀಡಬೇಕು.

ಹೆಸರು ಬೆಳೆಯ ಬೇಸಾಯ; ರೈತರಿಗೆ ಕೃಷಿ ಇಲಾಖೆ ಸಲಹೆಗಳು ಹೆಸರು ಬೆಳೆಯ ಬೇಸಾಯ; ರೈತರಿಗೆ ಕೃಷಿ ಇಲಾಖೆ ಸಲಹೆಗಳು

ಅರ್ಜಿಗಳನ್ನು ಸಲ್ಲಿಸುವಾಗ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಸ್ವಯಂ ಘೋಷಿತ ಬೆಳೆ ವಿವರ ನೀಡಿಬೇಕು. ಈ ಸೌಲಭ್ಯವನ್ನು ಸಂಬಂಧಿಸಿದ ಹೋಬಳಿ ರೈತರು ಪಡೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ಮನವಿ ಮಾಡಿದ್ದಾರೆ.

English summary
Now Turmeric crop under Pradhan Mantri Fasal Bima Yojana (PMFBY). Farmers in Chamarajanagar district farmers can pay insurance premium till July 31, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X