ಈರುಳ್ಳಿ ಸಂಗ್ರಹದ ಮೇಲೆ ಮಿತಿ ವಿಧಿಸಿದ ಕೇಂದ್ರ ಸರ್ಕಾರ
ನವದೆಹಲಿ, ಅಕ್ಟೋಬರ್ 24: ದೇಶದ ಅನೇಕ ಭಾಗಗಳಲ್ಲಿ ಈರುಳ್ಳಿ ದರ ಕೆಜಿಗೆ 100 ರೂ. ದಾಟಿದೆ. ಇನ್ನು ಕೆಲವು ಕಡೆಗಳಲ್ಲಿ 100 ರೂ. ಗಿಂತ ಕಡಿಮೆ ಇದ್ದು, ಶತಕ ತಲುಪುವ ಸನ್ನಿಹಿತದಲ್ಲಿದೆ. ಈಗಾಗಲೇ ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ ಹೇರಿ ಆಮದಿಗೆ ಉತ್ತೇಜನ ನೀಡಿರುವ ಕೇಂದ್ರ ಸರ್ಕಾರ, ಚಿಲ್ಲರೆ ಹಾಗೂ ಹೋಲ್ಸೇಲ್ ಮಾರಾಟಗಾರರು ಈರುಳ್ಳಿ ಸಂಗ್ರಹ ಮಾಡುವುದರ ಮೇಲೆ ಮಿತಿ ಹೇರಿದೆ.
ಅಗತ್ಯವಸ್ತುಗಳ ಕಾಯ್ದೆಗೆ ಕೆಲವು ದಿನಗಳ ಹಿಂದಷ್ಟೇ ತಿದ್ದುಪಡಿ ತಂದಿದ್ದ ಸರ್ಕಾರ, ಅಗತ್ಯ ವಸ್ತುಗಳ ಪಟ್ಟಿಯಿಂದ ಈರುಳ್ಳಿಯನ್ನು ಕೈಬಿಟ್ಟಿತ್ತು. ಆದರೆ ಈಗ ಬೆಲೆ ಏರಿಕೆ ತಡೆಯುವ ಉದ್ದೇಶದಿಂದ ಈರುಳ್ಳಿ ಸಂಗ್ರಹದ ಮೇಲೆ ಮಿತಿ ವಿಧಿಸಿದೆ.
ಚಿಲ್ಲರೆ ಮಾರಾಟಗಾರರು 20 ಕ್ವಿಂಟಲ್ ಹಾಗೂ ಸಗಟು ಮಾರಾಟಗಾರರು 250 ಕ್ವಿಂಟಲ್ ಈರುಳ್ಳಿ ಸಂಗ್ರಹ ಮಾಡಬಹುದಾಗಿದೆ. ದೇಶದ ಅನೇಕ ನಗರಗಳಲ್ಲಿ ಈರುಳ್ಳಿ ದರ ತೀರಾ ಹೆಚ್ಚಾಗಿದೆ. ಇದರಿಂದ ಪೂರೈಕೆಯ ಕೃತಕ ಅಭಾವ ಉಂಟಾಗಿ ಮತ್ತಷ್ಟು ದರ ಹೆಚ್ಚುವಂತೆ ಮಾಡುವುದನ್ನು ತಡೆಯಲು ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿದೆ.

ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಈ ಬಾರಿ 43 ಲಕ್ಷ ಟನ್ ಈರುಳ್ಳಿ ಉತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಮಳೆ, ಪ್ರವಾಹದಿಂದ ಬೆಳೆ ನಾಶವಾಗಿದ್ದು, ಉತ್ಪಾದನೆಯ ಅಂದಾಜನ್ನು 36 ಲಕ್ಷ ಟನ್ಗೆ ಪರಿಷ್ಕರಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications