ಗೊಬ್ಬರದ ಮೇಲಿನ ಜಿಎಸ್ ಟಿ ಶೇ 12ರಿಂದ 5ಕ್ಕೆ ಇಳಿಕೆ, ರೈತರು ನಿರಾಳ
ನವದೆಹಲಿ, ಜೂನ್ 30: ಜಿಎಸ್ ಟಿ ಜಾರಿಯ ಕೆಲ ಗಂಟೆಗಳ ಮುಂಚೆ ಗೊಬ್ಬರದ ಮೇಲೆ ತೆರಿಗೆಯನ್ನು ಶೇ ಹನ್ನೆರಡರಿಂದ ಐದಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಇದರಿಂದ ಬೆಲೆ ಏರಿಕೆಯಾಗಿ, ರೈತರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ.
ಗೊಬ್ಬರದ ಮೇಲೆ ಹನ್ನೆರಡು ಪ್ರತಿಶತ ಜಿಎಸ್ ಟಿ ಹೆಚ್ಚಾಯಿತು. ಇದರಿಂದ ರೈತರ ಮೇಲೆ ಹೊರೆ ಬಿದ್ದಂತಾಗುತ್ತದೆ ಎಂದು ಕೆಲವರು ಅಭಿಪ್ರಾಯಪಟ್ಟರು. ಆ ನಂತರ ಸಮಿತಿಯಲ್ಲಿ ಈ ಬಗ್ಗೆ ಒಮ್ಮತಾಭಿಪ್ರಾಯದಿಂದ ಐದು ಪರ್ಸೆಂಟ್ ಗೆ ಇಳಿಸಲಾಯಿತು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಸದ್ಯಕ್ಕೆ ಗೊಬ್ಬರದ ಮೇಲಿನ ತೆರಿಗೆ ಶೇ ಸೊನ್ನೆಯಿಂದ ಆರರಷ್ಟಿದೆ. ಹನ್ನೆರಡರಷ್ಟು ಜಿಎಸ್ ಟಿ ಹಾಕುವುದರಿಂದ ಪ್ರತಿ ಐವತ್ತು ಕೆಜಿ ಗೊಬ್ಬರಕ್ಕೆ ಮೂವತ್ತರಿಂದ ನೂರಾ ಇಪ್ಪತ್ತು ರುಪಾಯಿ ದುಬಾರಿಯಾಗುತ್ತಿತ್ತು. ಪಂಜಾಬ್, ಹರಿಯಾಣ, ಆಂಧ್ರಪ್ರದೇಶ ಮತ್ತಿತರ ಕಡೆ ಗೊಬ್ಬರಕ್ಕೆ ತೆರಿಗೆ ವಿಧಿಸುತ್ತಿಲ್ಲ.
ರೈತರ ಹಿತ ಕಾಯುವ ದೃಷ್ಟಿಯಿಂದ ಗೊಬ್ಬರದ ಮೇಲಿನ ಜಿಎಸ್ ಟಿ ದರ ಇಳಿಸುವಂತೆ ಹಲವು ಮನವಿ ಮಾಡಲಾಗಿತ್ತು. ಇಷ್ಟು ತೆರಿಗೆ ವಿಧಿಸಿದರೆ ವೆಚ್ಚ ಹೆಚ್ಚಾಗಿ, ರೈತರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ತಿಳಿಸಲಾಗಿತ್ತು. ಅಂದಹಾಗೆ ಮುಂದಿನ ಐದು ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳ್ಳಬೇಕು ಎಂಬುದು ಸರಕಾರದ ಆಶಯವಾಗಿದೆ.
ಜಿಎಸ್ ಟಿ ಪರಿಚಯಿಸುವ ಕಾರ್ಯಕ್ರಮ ಶುಕ್ರವಾರ ರಾತ್ರಿ ಸಂಸತ್ ನಲ್ಲಿ ನಡೆಯಲಿದೆ. ಇದರಿಂದ ದೇಶದ ಜಿಡಿಪಿ ಶೇ ಎರಡರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications