ಅಣಬೆ ಕೃಷಿ:ಅಣಬೆ ಘಟಕ ಸ್ಥಾಪನೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು ಆಗಸ್ಟ್11: ತಾಂತ್ರಿಕ ಪ್ರಗತಿ, ಪೌಷ್ಠಿಕಾಂಶ ಮತ್ತು ಸಹಾಯಕ ಆದಾಯದ ಮೂಲವಾಗಿರುವುದರಿಂದ ಭಾರತದಲ್ಲಿ ಮಶ್ರೂಮ್ ಕೃಷಿಯ ವೇಗ ಪಡೆದುಕೊಂಡಿದೆ. ರೈತರು ಹೆಚ್ಚಿನ ಪ್ರಮಾಣದಲ್ಲಿ ಈ ಅಣಬೆ ಬೇಸಾಯ ಮಾಡುವತ್ತ ಒಲವು ತೋರುತ್ತಿದ್ದಾರೆ.
ತಾಂತ್ರಿಕತೆಯ ಪ್ರಗತಿಯ ಪರಿಣಾಮ ಇಂದು ಗುಡ್ಡಗಾಡು ಪ್ರದೇಶಗಳು ಹಾಗೂ ಇನ್ನಿತರ ಕಡೆಗಳಲ್ಲಿ ವಿವಿಧ ತಳಿಯ ಅಣಬೆಗಳನ್ನು ಬೆಳೆಯಲು ರೈತರಿಗೆ ಸಾಧ್ಯವಾಗಿದೆ. ಅಲ್ಲದೇ ಈ ಅಣಬೆ ಕೃಷಿ ಮಾಡುವವರನ್ನು ಸರ್ಕಾರವು ಸಹಾಯನ ಧನ ನೀಡುತ್ತಿದೆ. ತೋಟಗಾರಿಕೆ ಇಲಾಖೆ ಯು ಸಹ ಅಗತ್ಯ ಸಲಹೆ, ಸಹಾಯ ಮಾಡುತ್ತಿವೆ.
ಸ್ವಾವಲಂಬಿ ಜೀವನಕ್ಕೆ ಆಧಾರವಾದ ಅಣಬೆ ಬೇಸಾಯ
ಈ ನಿಟ್ಟಿನಲ್ಲಿ ಹೆಚ್ಚಿನ ರೈತರು ಅಣಬೆ ಬೇಸಾಯ ಆರಂಭಿಸುವಂತೆ ಉತ್ತೇಜಿಸಲು ಹರಿಯಾಣ ರಾಜ್ಯ ಸರ್ಕಾರವು ಅಣಬೆ ಘಟಕ ಸ್ಥಾಪಿಸುವ ರೈತರಿಗೆ ಸಹಾಯಧನ ನೀಡಲು ಮುಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಹರಿಯಾಣದಲ್ಲಿ ಅಣಬೆ ಕೃಷಿ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ರೈತರು ಬೃಹತ್ ಪ್ರಮಾಣದಲ್ಲಿ ಅಣಬೆಗಳನ್ನು ಬೆಳೆಸಿ ಉತ್ತಮ ಇಳುವರಿ ಜತೆಗೆ ಉತ್ತಮ ಲಾಭವನ್ನೂ ಪಡೆದಿದ್ದಾರೆ.

ಇದನ್ನು ಮನಗಂಡ ರಾಜ್ಯ ಸರ್ಕಾರ ಇನ್ನಿತರ ರೈತರು ಅಣಬೆ ಕೃಷಿಗೆ ಆದ್ಯತೆ ನೀಡಬೇಕು. ಹೆಚ್ಚು ಬೆಳೆದು ಉತ್ತಮ ಆದಾಯ ಪಡೆಯಬೇಕು ಎಂದು ಬಯಸಿದೆ. ಈ ಕಾರಣಕ್ಕೆ ಅಣಬೆ ಕೃಷಿ ಮತ್ತು ಅಣಬೆ ಬೆಲೆಯುವ ರೈತರನ್ನು ಪ್ರೊತ್ಸಾಹಿಸುತ್ತಿದೆ. ಅವರಿಗೆ ಅಗತ್ಯ ನೆರವು ಒದಗಿಸುತ್ತಿದೆ.
ಇನ್ನು ಅಣಬೆ ಘಟಕ ಸ್ಥಾಪಿಸಲು ಇಚ್ಛಿಸುವ ರೈತರಿಂದ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ರೈತರು ಲಿಂಕ್ ಮೂಲಕ https://hortnet.gov.in/?QUERY ಅರ್ಜಿ ಸಲ್ಲಿಸಬಹುದಾಗಿದೆ.

2 ವಿಧದ ಘಟಕಕ್ಕಾಗಿ ಅರ್ಜಿ ಸಲ್ಲಿಸಿ
ವೈಯಕ್ತಿಕ ಘಟಕ ಹಾಗೂ ಜಂಟಿ ಘಟಕ ಎಂದು ವಿಭಾಗಿಸಲಾಗಿದೆ. ರಾಜ್ಯ ಸರ್ಕಾರದಿಂದ ಅಣಬೆ ಕೃಷಿಗೆ ಸಹಾಯಧನ ಪಡೆಯಲು ಇಚ್ಛಿಸುವ ರೈತರು ಈ ಎರಡು ವಿಭಾಗಳಿಗೆ ಅರ್ಜಿ ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸದವರನ್ನು ಸಹಾಯಧನಕ್ಕಾಗಿ ಪರಿಗಣಿಸಲಾಗುವುದು ಎಂದು ಹರಿಯಾಣ ಸರ್ಕಾರ ತಿಳಿಸಿದೆ. ಯೋಜನೆ, ಸಹಾಯಧನ ಹಾಗೂ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ರೈತರು ಜಿಲ್ಲಾ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ 1800 180 2021ಗೆ ಕರೆ ಮಾಡಿ ವಿಚಾರಿಸಬಹುದು ಎಂದು ತಿಳಿಸಲಾಗಿದೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications