ರೈತರ ಮೇಲಿನ ಕೇಸ್ ವಾಪಸ್ಸು

ಸೋಮವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಹಾವೇರಿ, ದಾವಣಗೆರೆ, ಧಾರವಾಡ, ತುಮಕೂರು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ರಸಗೊಬ್ಬರಕ್ಕಾಗಿ ನಡೆಸಿದ ಚಳವಳಿಗೆ ಸಂಬಂಧಿಸಿದಂತೆ ರೈತರ ಮೇಲೆ ಹೂಡಲಾಗಿದ್ದ ಎಲ್ಲ ಕೇಸ್ ಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಹಿಂದಿನ ಕೆಲವು ಮೊಕದ್ದಮೆಗಳನ್ನೂ ವಾಪಸ್ಸು ಪಡೆದಿರುವ ಸರಕಾರ ಅವುಗಳ ವಿವರವನ್ನು ಬಹಿರಂಗಪಡಿಸಿಲ್ಲ. ಆದರೆ, ಅವೆಲ್ಲವೂ ರೈತರ ಮೇಲಿನ ಕೇಸ್ ಗಳು ಎನ್ನುವುದು ಖಚಿತವಾಗಿದೆ.
ಸಚಿವ ಸಂಪುಟದ ನಂತರ ಗೃಹ ಸಚಿವ ವಿ ಎಸ್ ಆಚಾರ್ಯ ಹಾಗೂ ಕಾನೂನು ಸಚಿವ ಸುರೇಶ್ ಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು. ಅಶ್ರಯ ಮನೆಗಳ ನಿರ್ಮಾಣಕ್ಕಾಗಿ ನೀಡಿದ ಸಾಲದ ಮೇಲಿನ ಬಡ್ಡಿ ಮನ್ನಾ, ಡಿಸೆಂಬರ್ ಒಳಗೆ ಅಸಲು ಪಾವತಿ ಮಾಡಿದವರಿಗೆ ಬಡ್ಡಿ ಮನ್ನಾ. ತುಂಗಭದ್ರಾ ಎಡದಂಡೆ ಕಾಲುವೆ ಹಾಗೂ ತುಂಗಭದ್ರಾ ಯೋಜನೆಯ ವಿತರಣಾ ಕಾಲುವೆಗಳ ಅಧುನೀಕರಣ ಕಾಮಗಾರಿಗೆ 251.29ಕೋಟಿ ರುಪಾಯಿ.
ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ವಿದ್ಯನ್ಮಾನ ಮತಯಂತ್ರಗಳ ಬಳಕೆ. ಮಹಿಳಾ ಮೀಸಲಾತಿ ಪ್ರಮಾಣವನ್ನು ಶೇ.33 ರಿಂದ 50ಕ್ಕೆ ಹೆಚ್ಚಿಸಲು ಪಂಚಾಯಿತಿ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ. ಅಬಕಾರಿ ಕರ ವಸೂಲಿ ಕರಸಮಾಧಾನ-3 ಆದೇಶ ಹೊರಬಿದ್ದ 3 ತಿಂಗಳಲ್ಲಿ 3 ಕಂತುಗಳಲ್ಲಿ ಅಸಲು ಮರುಪಾವತಿ ಮಾಡಿದರೆ ಬಡ್ಡಿ ಮನ್ನಾ. 4 ಲಕ್ಷ ಬಡವರಿಗೆ ನಿವೇಶನ. ಮೈಸೂರು, ಹಿರಿಯೂರು ಶಿರಸಿ, ಕೊಪ್ಪಳದಲ್ಲಿ ತೋಟಗಾರಿಕಾ ಕಾಲೇಜುಗಳು ಇದೇ ಶೈಕ್ಷಣಿಕ ಸಾಲಿನಿಂದ ಆರಂಭಿಸಲಾಗುವುದು ಸಚಿವರು ಹೇಳಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications