ಕರ್ನಾಟಕ ಕೃಷಿಕರ ಪಾಲಿಗೆ ಜಿಎಸ್ಟಿ ವರದಾನ
ಬೆಂಗಳೂರು, ಜೂನ್ 30: ಜಿಎಸ್ಟಿ ಜಾರಿಯಿಂದ ಕರ್ನಾಟಕದ ರೈತರಿಗೆ ಲಾಭವಾಗಲಿದೆ. ಇಲ್ಲಿಯವರೆಗೆ ಕರ್ನಾಟಕದಲ್ಲಿ ರಸಗೊಬ್ಬರ, ಕ್ರಿಮಿನಾಶಕ, ಟ್ರಾಕ್ಟರ್ ಗಳ ಮೇಲೆ ವ್ಯಾಟ್ ಮತ್ತು ಕೇಂದ್ರ ಅಬಕಾರಿ ತೆರಿಗೆಗಳಿದ್ದವು. ಇದೀಗ ಇದೆಲ್ಲಾ ಹೋಗಿ ಕೇವಲ ಜಿಎಸ್ಟಿ ದರಗಳು ಮಾತ್ರ ಇರಲಿವೆ, ಹೀಗಾಗಿ ರಸಗೊಬ್ಬರ, ಟ್ರಾಕ್ಟರ್ ಗಳ ಬೆಲೆ ಇಳಿಕೆಯಾದರೆ, ಕೀಟನಾಶಕಗಳ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ.
ಹಳೆಯ ತೆರಿಗೆ ದರಗಳಿಗೆ ಹೋಲಿಸಿದರೆ ಜಿಎಸ್ಟಿಯಿಂದ ಕರ್ನಾಟಕದ ರೈತರಿಗೆ ಲಾಭವಾಗಲಿದೆ ಎಂದು ಜಿಎಸ್ಟಿ ಸಭೆಯಲ್ಲಿ ಭಾಗವಹಿಸಿದ ಕರ್ನಾಟಕದ ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಇಲ್ಲಿಯವರೆಗೆ ರಸಗೊಬ್ಬರಗಳಿಗೆ ಶೇಕಡಾ 18 ತೆರಿಗೆ ಇತ್ತು. ಇನ್ನು ಮುಂದೆ ಇದು ಶೇಕಡಾ 12ಕ್ಕೆ ಇಳಿಕೆಯಾಗಲಿದೆ. ಕೀಟನಾಶಕಗಳಿಗೆ ಮುಂದೆಯೂ ಶೇಕಡಾ 18 ತೆರಿಗೆ ಇರಲಿದೆ. ಇನ್ನು ಪಂಪ್ ಮತ್ತು ಟ್ರಾಕ್ಟರ್ ಗಳಿಗೆ ಹಾಲಿ ಶೇಕಡಾ 18ರಷ್ಟು ತೆರಿಗೆ ಇತ್ತು. ಇದು ಕೂಡಾ ಶೇಕಡಾ 12ಕ್ಕೆ ಇಳಿಕೆಯಾಗಲಿದೆ.
ವಿದ್ಯುತ್ ನಿಂದ ಕೆಲಸ ಮಾಡುವ ಯಂತ್ರಗಳಿಗೆ ಮಾತ್ರ ಈಗ ಶೇಕಡಾ 5.5 ತೆರಿಗೆ ಇತ್ತು. ಇನ್ನು ಮುಂದೆ ಇದು ಶೇಕಡಾ 12ಕ್ಕೆ ಏರಿಕೆಯಾಗಲಿದೆ.
ಇನ್ನು ಬಿತ್ತನೆ ಬೀಜ, ಕೈಯಿಂದ ಚಾಲನೆ ಮಾಡುವ ಯಂತ್ರಗಳಿಗೆಲ್ಲಾ ಯಾವುದೇ ತೆರಿಗೆ ಇರುವುದಿಲ್ಲ.
ಆದರೆ ಪಂಜಾಬ್, ಹರ್ಯಾಣದಂಥ ಕೆಲವು ರಾಜ್ಯಗಳಲ್ಲಿ ಸದ್ಯ ರಸಗೊಬ್ಬರ, ಕೀಟನಾಶಕ ಯಾವುದರ ಮೇಲೆಯೂ ತೆರಿಗೆ ಇರಲಿಲ್ಲ. ಹಾಗಾಗಿ ಇಲ್ಲಿನ ರೈತರಿಗೆ ಮಾತ್ರ ಜಿಎಸ್ಟಿ ಹೊರೆಯಾಗಲಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications