ಕೊಪ್ಪಳದಲ್ಲಿ ಪೇರಲ ಬೆಳೆ ಸಂಸ್ಕರಣೆ ಕ್ಲಸ್ಟರ್ ಸ್ಥಾಪನೆ
ಕೊಪ್ಪಳ, ಮಾರ್ಚ್ 02: ಕರ್ನಾಟಕ ತೋಟಗಾರಿಕೆ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಗೆ 'ಒಂದು ಜಿಲ್ಲೆ ಒಂದು ಬೆಳೆ' ಯೋಜನೆಯಡಿ ಪೇರಲ ಬೆಳೆಯನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಪೇರಲ ಬೆಳೆಯುವ ಕ್ಷೇತ್ರವನ್ನು ಆಧರಿಸಿ ಈ ಬೆಳೆಯನ್ನು ನಿರ್ಧರಿಸಲಾಗಿದೆ.
ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ಪೇರಲ ಬೆಳೆಗೆ ಸಂಬಂಧಿಸಿದಂತೆ ಕೊಪ್ಪಳ ಪೇರಲ ಲಾಂಛನವನ್ನು, ಪೇರಲ ಬೆಳೆ ಕುರಿತ ತಾಂತ್ರಿಕ ಕೈಪಿಡಿಯನ್ನು, ಕೊಪ್ಪಳ ಪೇರಲ ಬಾಕ್ಸ್ ಬಿಡುಗಡೆ ಮಾಡಿದ್ದಾರೆ.
ಮಾಧ್ಯಮ ಜೊತೆ ಮಾತನಾಡಿದ ಸಚಿವರು, "ರೈತರು ಬೆಳೆದ ಬೆಳೆಗೆ ಉತ್ತಮ ವೇದಿಕೆ, ಮಾರುಕಟ್ಟೆ ಒದಗಿಸುವುದು ಇಲಾಖೆಯ ಉದ್ದೇಶವಾಗಿದೆ. ಒಂದು ಜಿಲ್ಲೆ ಒಂದು ಬೆಳೆ ಯೋಜನೆಯಡಿ ಆಯ್ಕೆಯಾದ ಬೆಳೆಗೆ ಸಾಮಾನ್ಯ ಮೂಲಭೂತ ಸೌಕರ್ಯ, ಬ್ರಾಂಡಿಂಗ್, ಸಂಸ್ಕರಣೆ ಮತ್ತು ರಫ್ತು ಮಾರುಕಟ್ಟೆ ಕುರಿತು ರೈತರಿಗೆ ತರಬೇತಿ ನೀಡಲಾಗುತ್ತಿದೆ" ಎಂದು ಹೇಳಿದರು.

"ರೈತರು ಬೆಳೆಯುವ ಯಾವುದೇ ಬೆಳೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲು ರಾಜ್ಯದಲ್ಲಿ ಒಟ್ಟು 715 ಕೃಷಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ರೈತರು ತಮಗೆ ಬೇಕಾದ ಬೆಳೆ, ಬ್ಯಾಂಕ್ ಸಹಾಯ, ಸರ್ಕಾರದ ಸೌಲಭ್ಯ, ಸಬ್ಸಿಡಿ ಮುಂತಾದ ವಿಷಯಗಳ ಕುರಿತು ಮಾಹಿತಿ ಪಡೆಯಬಹುದು" ಎಂದು ಸಚಿವರು ವಿವರಣೆ ನೀಡಿದರು.
"ಕೊಪ್ಪಳ ಜಿಲ್ಲೆಯ ಬಸಾಪುರ ಕೈಗಾರಿಕಾ ವಲಯದಲ್ಲಿ ಪೇರಲ ಬೆಳೆಯ ಸಂಸ್ಕರಣೆ ಕ್ಲಸ್ಟರ್ ಅನ್ನು ಸ್ಥಾಪಿಸಲು ಜಿಲ್ಲಾಧಿಕಾರಿಗಳು ಯೋಜನೆ ರೂಪಿಸಿದ್ದಾರೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಸಚಿವರು ಭರವಸೆ ನೀಡಿದರು.

ಕೊಪ್ಪಳ ಜಿಲ್ಲೆಯ 4 ತಾಲೂಕಿಗಳಲ್ಲಿ 700 ಹೆಕ್ಟೇರ್ ಪ್ರದೇಶದಲ್ಲಿ ಪೇರಲ ಬೆಳೆಯನ್ನು ಬೆಳೆಯಲಾಗುತ್ತಿದೆ. ಒಟ್ಟು ಮೂರು ಸಾವಿರ ಹೆಕ್ಟೆರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಇತರೆ ಬೆಳೆಗಳಿಗಿಂತ ಪೇರಲ ಬೆಳೆ ಕೃಷಿಯು ಕಡಿಮೆ ವೆಚ್ಚದ್ದಾಗಿದೆ.
ಪೇರಲ ಬೆಳೆಗೆ ರೋಗಗಳು ಬಾಧಿಸುವುದು ಕಡಿಮೆ ಹಾಗೂ ನಿರ್ವಹಣಾ ವೆಚ್ಚವೂ ಸಹ ಕಡಿಮೆ. ಪೇರಲ ಬೆಳೆಯಲ್ಲಿ ಅಲಹಾಬಾದ್ ಸಫೇದ್, ಬನಾರಸಿ, ನಾಸಿಕ್ ಸೀಬೆ, ಲಕ್ನೋ 49 ಅರ್ಕಾಕಿರಣ್ ಪ್ರಮುಖ ತಳಿಗಳಾಗಿವೆ.
-
PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications