ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಣ್ಣು, ತರಕಾರಿ ಬೆಳೆದ ರೈತರು ಪರಿಹಾರ ಪಡೆಯುವುದು ಹೇಗೆ?

|
Google Oneindia Kannada News

ಬೆಂಗಳೂರು, ಜೂನ್ 03 : ಲಾಕ್ ಡೌನ್ ಪರಿಣಾಮ ನಷ್ಟ ಅನುಭವಿಸಿದ ಹಣ್ಣು, ತರಕಾರಿ ಬೆಳೆಗಾರರಿಗೆ ಕರ್ನಾಟಕ ಸರ್ಕಾರ ಪರಿಹಾರವನ್ನು ಘೋಷಣೆ ಮಾಡಿದೆ. 16/6/2020ರೊಳಗೆ ಪರಿಹಾರವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಬೇಕು ಎಂದು ರೈತರಿಗೆ ಸೂಚನೆ ನೀಡಲಾಗಿದೆ.

Recommended Video

Pregnant Elephant loses life in Kerala due to the cruelty of villagers | Kerala l Oneindia Kannada

ಕೊರೊನಾ ವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಘೋಷಣೆ ಮಾಡಿದ ಪರಿಣಾಮ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದೇ ರೈತರು ನಷ್ಟ ಅನುಭವಿಸಿದರು. ಇದನ್ನು ಗಮನಿಸಿದ ಸರ್ಕಾರ ನಷ್ಟ ಅನುಭವಿಸಿದ ರೈತರಿಗೆ ಪರಿಹಾರವನ್ನು ಘೋಷಣೆ ಮಾಡಿದೆ.

ಕಲ್ಲು ಭೂಮಿಯಲ್ಲಿ ಅಂಜದೆ ಅಂಜೂರ ಬೆಳೆದ ಕೊಪ್ಪಳ ರೈತ! ಕಲ್ಲು ಭೂಮಿಯಲ್ಲಿ ಅಂಜದೆ ಅಂಜೂರ ಬೆಳೆದ ಕೊಪ್ಪಳ ರೈತ!

ಮುಂದಿನ ದಿನಗಳಲ್ಲಿ ಹಣ್ಣು, ತರಕಾರಿ ಬೆಳೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ನಷ್ಟ ಹೊಂದಿದ ರೈತರಿಗೆ ಪರಿಹಾರ ನೀಡಲಾಗುತ್ತದೆ. ರೈತರಿಗೆ ಪ್ರತಿ ಹೆಕ್ಟೇರ್‌ಗೆ ರೂ. 15,000 ಪರಿಹಾರವನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ವಾಟ್ಸಪ್, ಫೇಸ್ ಬುಕ್ ಮೂಲಕ ಮಾವು ಮಾರಿ ಮಾದರಿಯಾದ ರೈತ! ವಾಟ್ಸಪ್, ಫೇಸ್ ಬುಕ್ ಮೂಲಕ ಮಾವು ಮಾರಿ ಮಾದರಿಯಾದ ರೈತ!

ರೈತರು ತಮ್ಮ ಸಮೀಪದ ತಾಲೂಕು ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳನ್ನು ನೀಡಿ, ಸ್ವಯಂ ದೃಢೀಕರಣ ಘೋಷಣಾ ಪತ್ರಗಳನ್ನು ದಿನಾಂಕ 16/6/2020ರೊಳಗೆ ನೀಡಬೇಕು ಎಂದು ಸೂಚಿಸಲಾಗಿದೆ.

ಮಿಡತೆ ದಾಳಿ ತಡೆಗೆ ರೈತರಿಗೆ ಕೃಷಿ ಇಲಾಖೆ ಸಲಹೆಗಳು ಮಿಡತೆ ದಾಳಿ ತಡೆಗೆ ರೈತರಿಗೆ ಕೃಷಿ ಇಲಾಖೆ ಸಲಹೆಗಳು

ಯಾವ-ಯಾವ ಬೆಳೆ

ಯಾವ-ಯಾವ ಬೆಳೆ

ಅನಾನಸ್, ಪಪ್ಪಾಯ, ಅಂಜೂರ, ಕಲ್ಲಂಗಡಿ, ಬಾಳೆ, ಖರ್ಬೂಜ ಹಣ್ಣಿನ ಬೆಳೆಗಳು. ಬೂದುಗುಂಬಳ, ಎಲೆಕೋಸು, ಹೂಕೋಸು, ಹಸಿಮೆಣಸು, ಟೊಮ್ಯಾಟೊ ತರಕಾರಿಗಳನ್ನು ಬೆಳದ ರೈತರು ಸಮೀಕ್ಷೆಯಲ್ಲಿ ನಮೂದಾಗಿರುವ ರೈತರುಗಳು ಪರಿಹಾರವನ್ನು ಪಡೆಯಬಹುದಾಗಿದೆ.

ತಾಲೂಕು ತೋಟಗಾರಿಕಾ ಕಚೇರಿಗೆ ಭೇಟಿ

ತಾಲೂಕು ತೋಟಗಾರಿಕಾ ಕಚೇರಿಗೆ ಭೇಟಿ

ರೈತರು ತಮ್ಮ ಸಮೀಪದ ತಾಲೂಕು ತೋಟಗಾರಿಕಾ ಇಲಾಖೆ ಕಚೇರಿಗೆ ಭೇಟಿ ನೀಡಿ ಪಹಣಿ, ಆಧಾರ್ ಕಾರ್ಡ್, ರೈತರ ಬ್ಯಾಂಕ್ ಖಾತೆ ಪಾಸ್ ಪುಸ್ತಕದ ಝೆರಾಕ್ಸ್ ಪ್ರತಿ, ಸ್ವಯಂ ದೃಢೀಕೃತ ಘೋಷಣಾ ಪತ್ರಗಳನ್ನು ದಿನಾಂಕ 16/6/2020ರೊಳಗೆ ನೀಡಬೇಕು. ಒಬ್ಬ ಫಲಾನುಭವಿ ಒಂದು ಹೆಕ್ಟೇರ್‌ವರೆಗೂ ಪರಿಹಾರ ಧನ ಪಡೆಯಲು ಅವಕಾಶವಿದೆ.

ನಾಲಫಲಕದಲ್ಲಿ ಪ್ರದರ್ಶನ

ನಾಲಫಲಕದಲ್ಲಿ ಪ್ರದರ್ಶನ

ಹೋಬಳಿವಾರು ಹಾಗೂ ಗ್ರಾಮವಾರು ಬೆಳೆ ಸಮೀಕ್ಷೆಯಲ್ಲಿನ ಹಣ್ಣು ಮತ್ತು ತರಕಾರಿ ಬೆಳೆಗಾರರ ದೃಢೀಕರಿಸಿದ ಪಟ್ಟಿಯನ್ನು ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ತೋಟಗಾರಿಕಾ ಇಲಾಖೆ ಕಚೇರಿಯ ನಾಮಫಲಕದಲ್ಲಿ ಪ್ರದರ್ಶನ ಮಾಡಲಾಗುತ್ತದೆ. ಈ ಪಟ್ಟಿಗಳಲ್ಲಿ ವ್ಯತ್ಯಾಸಗಳಿದ್ದು, ರೈತರ ಆಕ್ಷೇಪಣೆಗಳು ಇದ್ದರೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗೆ ಸಲ್ಲಿಕೆ ಮಾಡಬಹುದಾಗಿದೆ.

ಬಾಳೆ ಬೆಳೆಯ ಮಾಹಿತಿ

ಬಾಳೆ ಬೆಳೆಯ ಮಾಹಿತಿ

ಬಾಳೆ ಬೆಳೆಗೆ ಸಂಬಂಧಿಸಿದಂತೆ ಮಾರ್ಚ್ 2ನೇ ವಾರದ ನಂತರದ ಕಟಾವಿಗೆ ಬಂದಿರುವ ಬೆಳೆಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಈ ರೀತಿ ಬೆಳೆಯನ್ನು ಪರಿಶೀಲಿಸಲು ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳಿದ್ದು, ಸಮಿತಿಗಳು ಪರಿಶೀಲಿಸಿದ ನಂತರ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಸಮಿತಿಯು ಅಂತಿಮವಾಗಿ ತೀರ್ಮಾನಿಸಿ ಪರಿಹಾರ ಧನ ವಿತರಣೆ ಮಾಡಲಾಗುತ್ತದೆ.

English summary
Guidelines for the vegetable and fruit farmers to apply for the composition announced by Karnataka government. 15,000 Rs composition announced for each hectare of land.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X