ಯೂರಿಯಾ ರಸಗೊಬ್ಬರ ಬಳಕೆಯಿಂದ ಕ್ಯಾನ್ಸರ್: ಅಮಿತ್ ಶಾ
ಇತ್ತೀಚೆಗೆ ಅಹಮದಾಬಾದ್ನ ಗ್ರಾಮೀಣ ಭಾಗದಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ, ರೈತರಿಗೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ತಾಕೀತು ಮಾಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಯೂರಿಯಾ ಮೇಲಿನ ಅವಲಂಬನೆ ಸಂಪೂರ್ಣ ಕಡಿದುಕೊಳ್ಳಬೇಕು, ಯೂರಿಯಾ ಹಾಕಿ ಬೆಳೆದ ಆಹಾರ ತಿಂದ ಗ್ರಾಹಕರಿಗೆ ಕ್ಯಾನ್ಸರ್ ಬರುತ್ತಿದೆ. ಇದು ಬೆಳೆಗಾರರಿಗೂ ಒಳ್ಳೆಯದಲ್ಲಿ, ಗ್ರಾಹಕರಿಗೂ ಅಲ್ಲ ಹಾಗಾಗಿ ಯೂರಿಯಾ ಬಳಕೆ ಕೈಬಿಡಬೇಕು ಎಂದು ಹೇಳಿದ್ದಾರೆ.
ಒಂದು ಹಸುವಿನಿಂದ 21 ಎಕರೆಯಲ್ಲಿ ನೈಸರ್ಗಿಕ ಕೃಷಿ ಮಾಡಲು ಸಾಧ್ಯ ಎಂದು ಅವರು ಹೇಳಿದರು. ಅಂತೆಯೇ ನೈಸರ್ಗಿಕ ಪದ್ಧತಿಯ ಕೃಷಿಯಲ್ಲಿ1.25 ಪಟ್ಟು ಉತ್ಪಾದಕತೆ ಹೆಚ್ಚಾಗಿರುವುದು ಸಾಬೀತಾಗಿದೆ ಎಂದರು. ಗುಜರಾತ್ನಲ್ಲಿ ಈಗಾಗಲೇ 3 ಲಕ್ಷ ರೈತರು ನೈಸರ್ಗಿಕ ಕೃಷಿ ಅಳವಡಿಸಿಕೊಂಡಿದ್ದಾರೆ.
ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿರುವ ರೈತರ ಹೊಲಗಳಿಗೆ ನೀವೂ ಭೇಟಿ ಕೊಟ್ಟು ಅವರ ಅವರ ಕೃಷಿ ಪದ್ಧತಿಗಳು ಹಾಗೂ ಅನುಭವದಿಂದ ಕಲಿತು ಅಳವಡಿಸಿಕೊಳ್ಳಬೇಕೆಂದರು. "ಮುಂದಿನ ಐದು ವರ್ಷಗಳಲ್ಲಿ ಒಂದೇ ಒಂದು ಯೂರಿಯಾ ಬ್ಯಾಗ್ ಅಹಮದಾಬಾದ್ ಜಿಲ್ಲೆಯಲ್ಲಿ ಕಾಣಿಸಿಕೊಳ್ಳಬಾರದು, ಆ ರೀತಿಯಾಗಿ ಇಲ್ಲಿ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು" ಎಂದು ರೈತರನ್ನು ಹುರಿದುಂಬಿಸಿದರು.

ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಬೆಳೆದ ಬೆಳೆಗಳ ಮಾರಾಟಕ್ಕೆ ಸಹಕಾರ ತತ್ವದಲ್ಲಿ ಸೊಸೈಟಿಗಳನ್ನು ಸ್ಥಾಪಿಸಲಾಗುವುದು. ಅಂತೆಯೇ ಸಾವಯವ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ಹಾಗೂ ಮಣ್ಣು ಪರೀಕ್ಷೆಗೆ ಸಮರ್ಥ ವೇದಿಕೆಗಳು ಬೇಕೆಂದು ಅಭಿಪ್ರಾಯಪಟ್ಟರು. ಸದ್ಯಕ್ಕೆ ಅಂಥ ಪರೀಕ್ಷಾ ಘಟಕಗಳು ಹಾಗೂ ಮಾರುಕಟ್ಟೆಯ ವ್ಯವಸ್ಥೆ ಇಲ್ಲವೆಂದರು. ಅಮುಲ್ ಬ್ರ್ಯಾಂಡ್ ಅಡಿಯಲ್ಲಿ ಸಾವಯವ ಉತ್ಪನ್ನಗಳ ಪರೀಕ್ಷೆ ಮಾರುಕಟ್ಟೆಗೆ ವ್ಯವಸ್ಥೆ ಮಾಡಲಾಗುವುದೆಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications