ಯೂರಿಯಾ ರಸಗೊಬ್ಬರ ಬಳಕೆಯಿಂದ ಕ್ಯಾನ್ಸರ್: ಅಮಿತ್ ಶಾ
ಇತ್ತೀಚೆಗೆ ಅಹಮದಾಬಾದ್ನ ಗ್ರಾಮೀಣ ಭಾಗದಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ, ರೈತರಿಗೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ತಾಕೀತು ಮಾಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಯೂರಿಯಾ ಮೇಲಿನ ಅವಲಂಬನೆ ಸಂಪೂರ್ಣ ಕಡಿದುಕೊಳ್ಳಬೇಕು, ಯೂರಿಯಾ ಹಾಕಿ ಬೆಳೆದ ಆಹಾರ ತಿಂದ ಗ್ರಾಹಕರಿಗೆ ಕ್ಯಾನ್ಸರ್ ಬರುತ್ತಿದೆ. ಇದು ಬೆಳೆಗಾರರಿಗೂ ಒಳ್ಳೆಯದಲ್ಲಿ, ಗ್ರಾಹಕರಿಗೂ ಅಲ್ಲ ಹಾಗಾಗಿ ಯೂರಿಯಾ ಬಳಕೆ ಕೈಬಿಡಬೇಕು ಎಂದು ಹೇಳಿದ್ದಾರೆ.
ಒಂದು ಹಸುವಿನಿಂದ 21 ಎಕರೆಯಲ್ಲಿ ನೈಸರ್ಗಿಕ ಕೃಷಿ ಮಾಡಲು ಸಾಧ್ಯ ಎಂದು ಅವರು ಹೇಳಿದರು. ಅಂತೆಯೇ ನೈಸರ್ಗಿಕ ಪದ್ಧತಿಯ ಕೃಷಿಯಲ್ಲಿ1.25 ಪಟ್ಟು ಉತ್ಪಾದಕತೆ ಹೆಚ್ಚಾಗಿರುವುದು ಸಾಬೀತಾಗಿದೆ ಎಂದರು. ಗುಜರಾತ್ನಲ್ಲಿ ಈಗಾಗಲೇ 3 ಲಕ್ಷ ರೈತರು ನೈಸರ್ಗಿಕ ಕೃಷಿ ಅಳವಡಿಸಿಕೊಂಡಿದ್ದಾರೆ.
ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿರುವ ರೈತರ ಹೊಲಗಳಿಗೆ ನೀವೂ ಭೇಟಿ ಕೊಟ್ಟು ಅವರ ಅವರ ಕೃಷಿ ಪದ್ಧತಿಗಳು ಹಾಗೂ ಅನುಭವದಿಂದ ಕಲಿತು ಅಳವಡಿಸಿಕೊಳ್ಳಬೇಕೆಂದರು. "ಮುಂದಿನ ಐದು ವರ್ಷಗಳಲ್ಲಿ ಒಂದೇ ಒಂದು ಯೂರಿಯಾ ಬ್ಯಾಗ್ ಅಹಮದಾಬಾದ್ ಜಿಲ್ಲೆಯಲ್ಲಿ ಕಾಣಿಸಿಕೊಳ್ಳಬಾರದು, ಆ ರೀತಿಯಾಗಿ ಇಲ್ಲಿ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು" ಎಂದು ರೈತರನ್ನು ಹುರಿದುಂಬಿಸಿದರು.

ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಬೆಳೆದ ಬೆಳೆಗಳ ಮಾರಾಟಕ್ಕೆ ಸಹಕಾರ ತತ್ವದಲ್ಲಿ ಸೊಸೈಟಿಗಳನ್ನು ಸ್ಥಾಪಿಸಲಾಗುವುದು. ಅಂತೆಯೇ ಸಾವಯವ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ಹಾಗೂ ಮಣ್ಣು ಪರೀಕ್ಷೆಗೆ ಸಮರ್ಥ ವೇದಿಕೆಗಳು ಬೇಕೆಂದು ಅಭಿಪ್ರಾಯಪಟ್ಟರು. ಸದ್ಯಕ್ಕೆ ಅಂಥ ಪರೀಕ್ಷಾ ಘಟಕಗಳು ಹಾಗೂ ಮಾರುಕಟ್ಟೆಯ ವ್ಯವಸ್ಥೆ ಇಲ್ಲವೆಂದರು. ಅಮುಲ್ ಬ್ರ್ಯಾಂಡ್ ಅಡಿಯಲ್ಲಿ ಸಾವಯವ ಉತ್ಪನ್ನಗಳ ಪರೀಕ್ಷೆ ಮಾರುಕಟ್ಟೆಗೆ ವ್ಯವಸ್ಥೆ ಮಾಡಲಾಗುವುದೆಂದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications