ಎಂಎಸ್ಪಿ ಅಂತ್ಯಗೊಂಡರೆ ರಾಜಕೀಯ ತ್ಯಜಿಸುವೆ: ರೈತರಿಗೆ ಮನೋಹರ್ ಖಟ್ಟರ್ ಭರವಸೆ
ಚಂಡೀಗಡ, ಡಿಸೆಂಬರ್ 31: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಗಳು ತೀವ್ರವಾಗಿರುವ ಬೆನ್ನಲ್ಲೇ ರಾಜ್ಯದ ರೈತರಿಗೆ ಭರವಸೆ ನೀಡಿರುವ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಮುಂದುವರಿಕೆಗೆ ತಾವು ಬದ್ಧರಾಗಿರುವುದಾಗಿ ಘೋಷಿಸಿದ್ದಾರೆ. ಎಂಎಸ್ಪಿಗೆ ಸರ್ಕಾರ ಅಂತ್ಯಹಾಡಿದರೆ ರಾಜಕೀಯವನ್ನೇ ತ್ಯಜಿಸುವುದಾಗಿ ಅವರು ಪುನರುಚ್ಚರಿಸಿದ್ದಾರೆ.
'ಹರ್ಯಾಣದಲ್ಲಿ ಎಂಎಸ್ಪಿ ಮುಂದುವರಿಸುವಿಕೆಗೆ ನಾವು ಬದ್ಧರಾಗಿದ್ದೇವೆ. ಎಂಎಸ್ಪಿ ವ್ಯವಸ್ಥೆಯನ್ನು ಯಾರೇ ಆದರೂ ಅಂತ್ಯಗೊಳಿಸಲು ಪ್ರಯತ್ನಿಸಿದರೆ ಮನೋಹರ್ ಲಾಲ್ ರಾಜಕೀಯ ತ್ಯಜಿಸುತ್ತಾರೆ' ಎಂದು ಅವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಪ್ರತಿಭಟನೆಗಳ ನಡುವೆ ನಡೆದ ಐದು ಪಾಲಿಕೆ ಚುನಾವಣೆಗಳ ಪೈಕಿ ಮೂರರಲ್ಲಿ ಬಿಜೆಪಿ ಸೋಲು ಕಂಡ ಬಳಿಕ ಖಟ್ಟರ್ ಈ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಖಟ್ಟರ್ ಅವರು ಕೃಷಿ ಕಾಯ್ದೆಗಳು ರೈತರಿಗೆ ಮಾರಕ ಎಂದು ಸಾಬೀತಾದರೆ ತಾವು ರಾಜಕೀಯವನ್ನು ಬಿಡುವುದಾಗಿ ಹೇಳಿದ್ದರು.

ಹರ್ಯಾಣದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯದಲ್ಲಿ ಬಿಜೆಪಿಯ ಮಿತ್ರ ಪಕ್ಷ ಜನನಾಯಕ್ ಜನತಾ ಪಾರ್ಟಿಯ (ಜೆಜೆಪಿ) ಮುಖಂಡ ದುಷ್ಯಂತ್ ಚೌಟಾಲಾ ಅವರು ಬಿಜೆಪಿಗೆ ಬೆಂಬಲವಾಗಿ ನಿಂತಿದ್ದಾರೆ. 'ರೈತರಿಗೆ ಎಂಎಸ್ಪಿ ಖಂಡಿತವಾಗಿಯೂ ಸಿಗಲಿದೆ ಎಂದು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎಂಎಸ್ಪಿ ಸೇರಿದಂತೆ ಸೌಲಭ್ಯಗಳ ಕುರಿತು ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತರಿಗೆ ಲಿಖಿತ ಪ್ರಸ್ತಾವಗಳನ್ನು ನೀಡಿದ್ದಾರೆ. ನಾನು ಅಧಿಕಾರದಲ್ಲಿ ಇರುವವರೆಗೂ ರೈತರಿಗೆ ಎಂಎಸ್ಪಿ ಉಳಿಸಲು ಕೆಲಸ ಮಾಡುತ್ತೇನೆ. ಈ ಮಾತನ್ನು ಉಳಿಸಿಕೊಳ್ಳಲು ನನಗೆ ಸಾಧ್ಯವಾಗದೆ ಇದ್ದರೆ ಹುದ್ದೆಗೆ ರಾಜೀನಾಮೆ ನೀಡುತ್ತೇನೆ' ಎಂದಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications