"ಲಗ್ನಪತ್ರಿಕೆ"ಗಳಲ್ಲಿ ರೈತ ಪರ ಘೋಷಣೆ; ರೈತರ ಪ್ರತಿಭಟನೆಗೆ ಸಾಥ್
ಚಂಡೀಗಢ, ಫೆಬ್ರುವರಿ 05: ದೆಹಲಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಹರಿಯಾಣದ ಕೆಲವು ರೈತರು ಭಿನ್ನ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಲು ಮುಂದಾಗಿದ್ದಾರೆ.
ದೆಹಲಿ ಗಡಿಗಳಲ್ಲಿ ಕುಳಿತು ತಮ್ಮ ಪರ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ನೀಡಲು ಲಗ್ನ ಪತ್ರಿಕೆಗಳಲ್ಲಿ ರೈತ ಪರ ಘೋಷಣೆಗಳನ್ನು ಮುದ್ರಿಸುತ್ತಿದ್ದಾರೆ. "ನೋ ಫಾರ್ಮರ್, ನೋ ಫುಡ್" (ರೈತರಿಲ್ಲವೆಂದರೆ ಆಹಾರವೂ ಇಲ್ಲ) ಎಂಬಂಥ ರೈತಪರ ಘೋಷಣೆಗಳನ್ನು ಹಾಗೂ ರೈತ ಸಂಘಟನೆ ಮುಖಂಡ ಸರ್ ಚೊಟ್ಟು ರಾಂ ಫೋಟೊವನ್ನು ಲಗ್ನ ಪತ್ರಿಕೆಯಲ್ಲಿ ಮುದ್ರಿಸಿ ಹೊಸ ರೀತಿಯಲ್ಲಿ ಬೆಂಬಲ ನೀಡುತ್ತಿದ್ದಾರೆ. ಮುಂದೆ ಓದಿ...

ಹರಿಯಾಣದಲ್ಲೀಗ ಮದುವೆ ಸೀಸನ್
ಹರಿಯಾಣದ ಹಲವು ಕಡೆಗಳಲ್ಲಿ ಇದೀಗ ಮದುವೆ ಸಮಾರಂಭಗಳು ಹೆಚ್ಚು ನಡೆಯುತ್ತಿವೆ. ಇದೇ ಅವಕಾಶವನ್ನು ರೈತರಿಗೆ ಬೆಂಬಲ ವ್ಯಕ್ತಪಡಿಸಲೂ ಕೆಲವು ರೈತರು ಬಳಸಿಕೊಳ್ಳುತ್ತಿದ್ದಾರೆ. ರೈತ ಮುಖಂಡರ ಚಿತ್ರಗಳನ್ನು, ಹಾಗೆಯೇ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಲಗ್ನ ಪತ್ರಿಕೆಯಲ್ಲಿ ಮುದ್ರಿಸಿ ಈ ಮೂಲಕ ಚಳವಳಿಯನ್ನು ಪ್ರಚುರಪಡಿಸುತ್ತಿರುವುದು ಕಂಡುಬಂದಿದೆ.

"ಲಗ್ನ ಪತ್ರಿಕೆ ಮೂಲಕ ಪ್ರತಿಭಟನೆ ಬಗ್ಗೆ ತಿಳಿವಳಿಕೆ"
ತಮ್ಮ ಮನೆಯ ಮದುವೆ ಕಾರ್ಯದ ಲಗ್ನ ಪತ್ರಿಕೆಗಳಲ್ಲಿ ರೈತ ಪರ ಘೋಷಣೆಗಳನ್ನು ಹಾಗೂ ರೈತರ ಚಿತ್ರಗಳನ್ನು ಮುದ್ರಿಸಿಕೊಡುವಂತೆ ಕೋರಿಕೊಳ್ಳುತ್ತಿದ್ದಾರೆ. ಹಲವು ರೈತರು ಈಗಾಗಲೇ ಇಂಥ ಲಗ್ನಪತ್ರಿಕೆಗಳನ್ನು ಮುದ್ರಿಸಿ ಹಂಚಿದ್ದಾರೆ. ಇದು ಪ್ರತಿಭಟನೆ ಬಗ್ಗೆ ಎಲ್ಲರಿಗೂ ತಿಳಿಸುವ ಮಾರ್ಗವೂ ಆಗುತ್ತಿದೆ ಎಂದು ಪ್ರಿಂಟಿಂಗ್ ಪ್ರೆಸ್ ಮಾಲೀಕರೊಬ್ಬರು ತಿಳಿಸಿದ್ದಾರೆ.

ರೈತ ನಾಯಕ ಚೊಟ್ಟು ರಾಂ ಅವರ ಚಿತ್ರ
ನವೆಂಬರ್ 24, 1881ರಂದು ಚೊಟ್ಟು ರಾಂ ಅವರು ಜನಿಸಿದ್ದು, ರೈತರ ಪಾಲಿನ ದೇವರೆಂದೇ ಅವರು ಬಿಂಬಿತರಾಗಿದ್ದರು. ಸ್ವಾತಂತ್ರ್ಯಪೂರ್ವ ಭಾರತದಲ್ಲಿ ರೈತರ ಸಬಲೀಕರಣಕ್ಕೆ ಹೋರಾಟ ಮಾಡಿದ್ದರು. ಬ್ರಿಟಿಷ್ ಆಡಳಿತದಲ್ಲಿ ರೈತರ ಹಕ್ಕುಗಳಿಗಾಗಿ ಹೋರಾಟ ನಡೆಸಿ ಮನೆ ಮಾತಾಗಿದ್ದರು. ಇದೀಗ ಅವರ ಭಾವಚಿತ್ರವನ್ನು ಇಲ್ಲಿನ ರೈತರು ಲಗ್ನಿಪತ್ರಿಕೆಗಳಲ್ಲಿ ಮುದ್ರಿಸುವ ಮೂಲಕ ರೈತ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

"ರೈತರ ಪರ ನಾವು ನಿಂತಿದ್ದೇವೆ"
v ಸಾವಿರಾರು ರೈತರು ಈ ಕಾಯ್ದೆಗಳ ವಿರುದ್ಧ ಗಡಿಗಳಲ್ಲಿ ಹೋರಾಡುತ್ತಿದ್ದಾರೆ. ಅವರ ಪರವಾಗಿ ನಾವು ನಿಂತಿದ್ದೇವೆ. ನನ್ನ ಮಗನ ಮದುವೆ ಇದ್ದ ಕಾರಣ ದೆಹಲಿಗೆ ಹೋಗಿ ಪ್ರತಿಭಟನೆ ನಡೆಸಲು ಸಾಧ್ಯವಾಗಲಿಲ್ಲ. ಹೀಗಾಗಿ ನಾನು ಮಗನ ಮದುವೆ ಕಾರ್ಡ್ ನಲ್ಲಿಯೇ ರೈತನಾಯಕನ ಫೋಟೊ ಹಾಕಿ, ಘೋಷಣೆ ಬರೆದು ರೈತರ ಹೋರಾಟವನ್ನು ಪ್ರಚುರ ಪಡಿಸುತ್ತಿದ್ದೇನ ಎಂದು ಹರಿಯಾಣದ ಪ್ರೇಮ್ ಸಿಂಗ್ ಗೋಯತ್ ಎಂಬ ರೈತರೊಬ್ಬರು ಹೇಳಿದರು.
ಕೇಂದ್ರ ಸರ್ಕಾರದ ಮೂರು ಕೃಷಿ ಸಂಬಂಧಿತ ಕಾನೂನುಗಳನ್ನು ರದ್ದು ಮಾಡಬೇಕು, ವಿದ್ಯುತ್ ಮಸೂದೆ-2020 ವಾಪಸು ಪಡೆಯಬೇಕು ಹಾಗು ಎಲ್ಲಾ ಕೃಷಿ ಉತ್ಪನ್ನಗಳಿಗೆ ಡಾ.ಎಂ.ಎಸ್. ಸ್ವಾಮಿನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿ ಮಾಡುವ ಕಾನೂನನ್ನು ರಚಿಸಬೇಕೆಂದು ಆಗ್ರಹಿಸಲಾಗಿದೆ. ನವೆಂಬರ್ 26ರಿಂದಲೂ ಪ್ರತಿಭಟನೆಯನ್ನು ಮುಂದುವರೆಸಲಾಗಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ











Click it and Unblock the Notifications