ಶ್ರವಣಬೆಳಗೊಳ : ಮಸ್ತಕಾಭಿಷೇಕದಲ್ಲಿ ಪ್ರವಾಸಿಗರಿಗೆ ಎಳನೀರು ಭಾಗ್ಯ
ಹಾಸನ, ಅ.14 : ಫೆಬ್ರವರಿಯಲ್ಲಿ ಶ್ರವಣಬೆಳಗೊಳದಲ್ಲಿ ನಡೆಯುವ ಮಹಾ ಮಸ್ತಕಾಭಿಷೇಕದಲ್ಲಿ ಪ್ರವಾಸಿಗರು ಎಳನೀರು ಸವಿಯಬಹುದು. ಹಾಸನ ಜಿಲ್ಲಾಡಳಿತ ಎಳನೀರು ಮಾರಟಕ್ಕೆ ಉತ್ತೇಜನ ನೀಡಲು ಯೋಜನೆ ರೂಪಿಸುತ್ತಿದೆ.
ಜಿಲ್ಲಾಡಳಿತ ಶ್ರವಣಬೆಳಗೊಳಕ್ಕೆ ಸಾಗುವ ರಸ್ತೆ, ಶ್ರವಣಬೆಳಗೊಳದಲ್ಲಿ ಎಳನೀರು ಮಾರಾಟಕ್ಕೆ ಪ್ರತ್ಯೇಕ ವಾದ ಜಾಗದ ವ್ಯವಸ್ಥೆ ಮಾಡಿಕೊಡಲಿದೆ. ಈ ಮೂಲಕ ಮೂರು ವರ್ಷಗಳಿಂದ ನಷ್ಟ ಅನುಭವಿಸುತ್ತಿರುವ ತೆಂಗು ಬೆಳೆಯುವ ರೈತರಿಗೆ ನೆರವಾಗಲು ಮುಂದಾಗಿದೆ.

'ಕಲ್ಪವೃಕ್ಷ' ಹೆಸರಿನಲ್ಲಿ ರಸ್ತೆಗಳಲ್ಲಿ ಮತ್ತು ವಿವಿಧ ಪ್ರದೇಶಗಳಲ್ಲಿ ಎಳನೀರು ಮಾರಾಟ ಮಳಿಗೆ ಆರಂಭಿಸಲಾಗುತ್ತದೆ. ರೈತರು ಈ ಮಾರಾಟ ಮಳಿಗೆ ಮೂಲಕ ಎಳನೀರು ಮಾರಾಟ ಮಾಡಬಹುದಾಗಿದೆ. 2018ರ ಫೆಬ್ರವರಿಯಲ್ಲಿ ಶ್ರವಣಬೆಳಗೊಳದಲ್ಲಿ ಮಹಾ ಮಸ್ತಕಾಭಿಷೇಕ ನಡೆಯಲಿದ್ದು, ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ.
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. 'ಮಸ್ತಕಾಭಿಷೇಕದಲ್ಲಿ ಎಳನೀರು ಮಾರಾಟ ಪ್ರೋತ್ಸಾಹಿಸಲು ಯೋಜನೆ ರೂಪಿಸಲಾಗಿದೆ. ಕಲ್ಪವೃಕ್ಷ ಅಥವ ಬೇರೆ ಹೆಸರಿನಲ್ಲಿ ಮಾರಾಟ ಮಳಿಗೆ ತೆರೆಯಲು ಅನುಕೂಲ ಮಾಡಿಕೊಡಲಾಗುತ್ತದೆ' ಎಂದು ಹೇಳಿದ್ದಾರೆ.
ಸತತವಾದ ಬರಗಾಲದಿಂದಾಗಿ ಹಾಸನ ಜಿಲ್ಲೆಯ ರೈತರು ಮೂರು ವರ್ಷಗಳಿದ ನಷ್ಟ ಅನುಭವಿಸುತ್ತಿದ್ದಾರೆ. ತೋಟಗಾರಿಕೆ ಇಲಾಖೆ ನಡೆಸಿರುವ ಸಮೀಕ್ಷೆಯಂತೆ ಜಿಲ್ಲೆಯಲ್ಲಿ ಸುಮಾರು ಹದಿನಾಲ್ಕು ಲಕ್ಷ ತೆಂಗಿನ ಮರಗಳು ಸತ್ತು ಹೋಗಿವೆ. ಜಿಲ್ಲಾಡಳಿತದ ಈ ನಿರ್ಧಾರದಿಂದಾಗಿ ರೈತರಿಗೆ ನೆರವಾಗಲಿದೆ.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications