ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಮೋದಿಗೆ ಪತ್ರ ಬರೆದು ರೈತರ ಸಮಸ್ಯೆ ಬಿಚ್ಚಿಟ್ಟ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ

|
Google Oneindia Kannada News

ಬೆಂಗಳೂರು, ಮೇ 25: ಕೊರೊನಾ ವೈರಸ್‌ನ ಸಂಕಷ್ಟದ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳ ಬೆಲೆ ತೀವ್ರ ಕುಸಿತವಾಗುತ್ತಿದೆ. ಹೀಗಾಗಿ ರೈತರ ನೆರವಿಗೆ ಧಾವಿಸಬೇಕೆಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರವನ್ನು ಬರೆದಿದ್ದಾರೆ. ಎಚ್‌ಡಿ ದೇವೇಗೌಡ ಅವರು ಟ್ವಿಟ್ಟರ್‌ನಲ್ಲಿ ಪ್ರಧಾನಿಗೆ ಬರೆದ ಪತ್ರವನ್ನು ಹಂಚಿಕೊಂಡಿದ್ದಾರೆ.

Recommended Video

ಮೋದಿಗೆ ಭಾವನಾತ್ಮಕ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ | Oneindia Kannada

ಭಾರತದಲ್ಲಿ ಕೊರೊನಾ ವೈರಸ್‌ ಹಾವಳಿ ದೊಡ್ಡ ಸಮಸ್ಯೆಯಾಗಿದ್ದು ಕೇಂದ್ರ, ರಾಜ್ಯ ಹಾಗೂ ಸ್ಥಳೀಯ ಆಡಳಿತಗಳ ಗಮನ ಆ ಕಡೆ ನೆಟ್ಟಿದೆ. ಇಂಥ ಪರಿಸ್ಥಿಯಲ್ಲಿ ಅದು ಅನಿವಾರ್ಯವಾಗಿದೆ. ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗದ ಜನರಿಗೆ ಮತ್ತೊಂದು ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು ಮುಂದಿನ ಕೆಲ ತಿಂಗಳುಗಳಲ್ಲಿ ಇದು ದೊಡ್ಡ ಸಮಸ್ಯೆಯಾಗಿ ಕಾಡಲಿದೆ. ಗ್ರಾಮೀಣ ಭಾಗದಲ್ಲಿ ಕೊರೊನಾವೈರಸ್ ಕಾಡುತ್ತಿರುವಂತೆಯೇ ತೋಟಗಾರಿಕಾ ಉತ್ಪನ್ನಗಳ ಬೆಲೆ ಕುಸಿತ ಎರಡೆರಡು ಸಮಸ್ಯೆಗಳನ್ನು ಉಂಟು ಮಾಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಈ ಪತ್ರದಲ್ಲಿ ಬರೆದಿದ್ದಾರೆ.

ಕರ್ನಾಟಕ: 2ನೇ ಡೋಸ್ ಪಡೆಯುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೋವ್ಯಾಕ್ಸಿನ್ ಲಭ್ಯಕರ್ನಾಟಕ: 2ನೇ ಡೋಸ್ ಪಡೆಯುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೋವ್ಯಾಕ್ಸಿನ್ ಲಭ್ಯ

ಇನ್ನು ಕೃಷಿ ಉತ್ಪನ್ನಗಳಿಗೆ ಬೆಲೆ ಕಡಿಮೆಯಾಗಿ ರೈತರು ಬೆಳೆದ ಬೆಳೆಗಳನ್ನು ನಾಶಪಡಿಸುತ್ತಿರುವ ವಿಚಾರವನ್ನು ದೇವೇಗೌಡರು ಪತ್ರದಲ್ಲಿ ವಿವರಿಸಿದ್ದಾರೆ. ಕರ್ನಾಟಕದ ಕೋಲಾರದಲ್ಲಿ ಟೊಮೆಟೋ ಬೆಳೆಗಾರರು ಉತ್ತಮ ಬೆಲೆ ದೊರೆಯದ ಕಾರಣ ರಸ್ತೆಗೆ ಚೆಲ್ಲಿರುವ ಘಟನೆಯನ್ನು ಈ ಪತ್ರದಲ್ಲಿ ಪ್ರಸ್ತಾವಿಸಿದ್ದಾರೆ. ಜೊತೆಗೆ ಬೇರೆ ಬೇರೆ ರಾಜ್ಯಗಳಲ್ಲಿಯೂ ಇದೇ ರೀತಿಯ ಸಂಕಷ್ಟವನ್ನು ರೈತರು ಅನುಭವಿಸುತ್ತಿರುವ ಬಗ್ಗೆ ಪತ್ರದಲ್ಲಿ ವಿವರಿಸಲಾಗಿದೆ.

HD Deve Gowda writes letter to PM Modi On price crash of horticultural products

ಕೊರೊನಾ ವೈರಸ್‌ನ ಕಾರಣದಿಂದಾಗಿ ಲಾಕ್‌ಡೌನ್ ಮಾಡಿರುವ ಕಾರಣದಿಂದಾಗಿ ಸಂಪರ್ಕಗಳು ಕಡಿತವಾಗಿದೆ. ಇದು ಕೃಷಿ ಮಾರುಕಟ್ಟೆಗಳ ಮೇಲೆಯೂ ಗಾಢ ಪರಿಣಾಮವನ್ನು ಬೀರಿದೆ. ಈ ಕಾರಣದಿಂದಾಗಿ ರೈತರು ಬೆಳೆದ ಬೆಳೆಗಳಿಗೆ ಬೆಲೆ ದೊರೆಯದೆ ನಷ್ಟವಾಗುತ್ತಿದೆ. ಇನ್ನು ಈ ಎಲ್ಲಾ ಕೃಷಿ ಉತ್ಪನ್ನಗಳು ಕೊಳೆತು ಹೋಗಬಲ್ಲವಾದರಿಂದ ಕೋಲ್ಡ್ ಸ್ಟೋರೇಜ್ ವ್ಯವಸ್ಥೆಯೂ ಇಲ್ಲ. ಜೊತೆಗೆ ಇವುಗಳು ಕನಿಷ್ಠ ಬೆಂಬಲ ವ್ಯವಸ್ಥೆಗೂ ಒಳಪಡುತ್ತಿಲ್ಲ ಎಂದು ರೈತರು ಅನುಭವಿಸುತ್ತಿರುವ ಸವಾಲುಗಳನ್ನು ದೇವೇಗೌಡರು ಪತ್ರದಲ್ಲಿ ತೆರೆದಿಟ್ಟಿದ್ದಾರೆ.

ಲಸಿಕೆ ದುರ್ಬಲಗೊಳಿಸುವಂತೆ ಕೋವಿಡ್ ರೂಪಾಂತರವಾಗಿಲ್ಲ ಆದರೆ..WHO ಎಚ್ಚರಿಕೆಲಸಿಕೆ ದುರ್ಬಲಗೊಳಿಸುವಂತೆ ಕೋವಿಡ್ ರೂಪಾಂತರವಾಗಿಲ್ಲ ಆದರೆ..WHO ಎಚ್ಚರಿಕೆ

ಈ ಸಂದರ್ಭದಲ್ಲಿ ರೈತರಿಗೆ ನೆರವಾಗಲು ಕೆಲ ಸಲಹೆಗಳನ್ನು ಕೂಡ ದೇವೇಗೌಡರು ಪತ್ರದಲ್ಲಿ ನೀಡಿದ್ದಾರೆ. ರೈತರು ಎದುರಿಸುತ್ತಿರುವ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸದಿದ್ದರೆ ಕೊರೊನಾ ಸಾಂಕ್ರಾಮಿಕ ರೋಗದಿಂದ ಪಾರಾದರು ಕೂಡ ಬದುಕು ಸಾಗಿಸಲು ಏನೂ ಇಲ್ಲದಂತಾ ಪರಿಸ್ಥಿತಿ ಉಂಟಾಗಬಹುದು ಎಂದು ದೇವೇಗೌಡರು ಈ ಪತ್ರದಲ್ಲಿ ವಿವರಿಸಿದ್ದಾರೆ.

English summary
Former prime minister HD Deve Gowda writes letter to PM Narendra Modi On price crash of horticultural products.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X