ಯಾವನ್ರಿ ಅವ್ನು ಸಿಎಂ ಬ್ಲಡಿ ಬಾಸ್ಟರ್ಡ್!: ದೇವೇಗೌಡ

ನೈಸ್ ಕಂಪನಿಗೆ ಹೆಚ್ಚು ಭೂಮಿ ನೀಡಿರುವುದನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ಮಾಜಿ ಪ್ರಧಾನಿ ದೇವೇಗೌಡ ಇಂದು ಹೊಸೂರು ರಸ್ತೆಯ ಚಿಕ್ಕತೋಗೂರಿನಲ್ಲಿರುವ ನೈಸ್ ಕಚೇರಿ ಎದುರು ರೈತಸಂಘ, ರೈತರೊಂದಿಗೆ ಪ್ರತಿಭಟನೆ ನಡೆಸಿದ ಗೌಡರು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಚಿಕ್ಕತೋಗೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನೈಸ್ ಕಂಪನಿ ಅಗತ್ಯಕ್ಕಿಂತ ಹೆಚ್ಚುವರಿ ಭೂಮಿ ನೀಡಲು ಸರಕಾರ ಹಸಿರು ನಿಶಾನೆ ತೋರಿಸಿದೆ. ರಾಜ್ಯದ ಅಡ್ವೋಕೇಟ್ ಜನರಲ್ ಸುಪ್ರೀಂಕೋರ್ಟ್ ಗೆ ನೀಡಿದ ತಪ್ಪು ಮಾಹಿತಿಯಿಂದ ಅಮಾಯಕ ರೈತರು ಭೂಮಿಯನ್ನು ಕಳೆದುಕೊಳ್ಳುವ ಹಂತ ತಲುಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ಹಂತದಲ್ಲಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ದೇವೇಗೌಡ, ಈ ಸಿಎಂಗೆ ಮಾನ ಮಾರ್ಯಾದೆ ಇದೆಯೇನ್ರಿ, ರೈತರಿಗೆ ಮೋಸ ಮಾಡಿ ಖೇಣಿಯೊಂದಿಗೆ ಡಕಾಯಿತಿ ನಡೆಸಿದ್ದಾರೆ. ಯಾವನ್ರೀ ಅವ್ನು ಯಡಿಯೂರಪ್ಪ...ಬ್ಲಡಿ ಬಾಸ್ಟರ್ಡ್ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಸಂಯುಕ್ತ ಕರ್ನಾಟಕ ಮುಖಪುಟದಲ್ಲಿ ಬಂದಿರುವ 'ಗೌಡರ ವಿರುದ್ಧ ರಣಕಹಳೆ' ಎಂಬ ವರದಿಗೆ ತೀವ್ರ ಆಕ್ರೋಶಗೊಂಡ ಗೌಡರು, ಈ ಪತ್ರಿಕೆ ಹಾರನಹಳ್ಳಿ ರಾಮಸ್ವಾಮಿ ಮಗಂದು, ನನ್ನ ಹೋರಾಟ ಕುಂದಿಸಲು ಪ್ರಯತ್ನ ನಡೆಸಿದ್ದಾರೆ, ದೇವೇಗೌಡ ಹುಟ್ಟಿರುವುದೇ ಹೋರಾಟಕ್ಕೆ ಇಂಥವರಿಗ ಬಗ್ಗುವುದಿಲ್ಲ ಎಂದು ಹೇಳಿದರು.
ಇಂದಿನಿಂದ ನನ್ನ ಅಧಿಕೃತ ಹೋರಾಟ ಆರಂಭವಾಗಿದೆ. ಚಿಕ್ಕತೋಗೂರು ನೈಸ್ ಕಚೇರಿ ನಾಳೆ ಒಂದು ದಿನ ಹೋರಾಟ ನಡೆಸುವೆ. ನಂತರ ಯಡಿಯೂರಪ್ಪ ಮನೆಯ ಮುಂದೆ ಹೋರಾಟ ನಡೆಸುವೆ ಎಂದು ದೇವೇಗೌಡ ಹೇಳಿದರು. ದೇವೇಗೌಡರ ಕೆಳಮಟ್ಟದ ಹೇಳಿಕೆ ಕಾಂಗ್ರೆಸ್ ಕೂಡಾ ಗಾಬರಿ ವ್ಯಕ್ತಪಡಿಸಿದೆ. ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಯಾರೇ ಆದರೂ ಅಸಂವಿಧಾನಿಕವಾಗಿರುವ ಪದ ಬಳಿಕೆ ಸರಿಯಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಬ್ಲಡಿ ಬಾಸ್ಟರ್ಡ್ ಪದಕ್ಕೆ ಪ್ರಯೋಗಕ್ಕೆ ಬೇಸರ, ಸಿಎಂ
ಬ್ಲಡಿ ಬಾಸ್ಟರ್ಡ್ ಎಂಬ ಪದ ಪ್ರಯೋಗ ಮಾಡಿರುವುದಕ್ಕೆ ತೀವ್ರ ಬೇಸರವಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ 40 ವರ್ಷ ರಾಜಕೀಯ ಮಾಡಿರುವ ದೇವೇಗೌಡರ ಬಾಯಿಯಿಂದ ಈ ಮಾತು ಬರಬಾರದಿತ್ತು, ಇದು ತೀವ್ರ ನೋವು ತರುವ ಸಂಗತಿಯಾಗಿದೆ. ಗೌಡರು ಬಳಸಿದ ಭಾಷೆಯನ್ನು ನಾನು ಬಳಸುವುದಿಲ್ಲ. ಅವರ ಬಗ್ಗೆ ಅಪಾರ ಗೌರವವಿದೆ. ಮಾಜಿ ಪ್ರಧಾನಿಗಳು ಘನತೆಗೆ ತಕ್ಕಂತೆ ವರ್ತಿಸಲಿ ಎಂದು ಯಡಿಯೂರಪ್ಪ ಹೇಳಿದ್ದಾರೆ.
ನೈಸ್ ವಿಷಯಕ್ಕೆ ಸಂಬಂಧಿಸಿದಂತೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡುವ ವಿಷಯವೇನಿದೆ. ಪ್ರಕರಣಕ್ಕೆ ಚಾಲನೆ ನೀಡಿದ್ದು ಈ ದೇವೇಗೌಡ. ಇದೀಗ ಪ್ರಕರಣ ಸುಪ್ರಿಂಕೋರ್ಟ್ ನಲ್ಲಿದೆ. ನ್ಯಾಯಾಲಯದ ತೀರ್ಪಿನ ಮೇರೆಗೆ ಸರಕಾರ ನಡೆದುಕೊಂಡಿದೆ. ಈ ಪ್ರಕರಣದಲ್ಲಿ ನಮ್ಮ ಸರಕಾರ ಅತ್ಯಂತ ಪಾರದರ್ಶಕವಾಗಿದೆ. ವೇದಿಕೆಯಲ್ಲಿ ಚರ್ಚೆ ಮಾಡುವುದು ಏನಿಲ್ಲ. ಬನ್ನಿ ದೇವೇಗೌಡರೆ, ನೈಸ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಬಳಿ ತೆರಳಿ ಚರ್ಚಿಸೋಣ ಎಂದು ಪ್ರತಿ ಸವಾಲು ಹಾಕಿದರು. ದೇವೇಗೌಡರ ವರ್ತನೆಯನ್ನು ರಾಜ್ಯದ ಜನ ವೀಕ್ಷೀಸುತ್ತಿದ್ದಾರೆ. ಹೀಗೆ ಮಾಡುವುದರಿಂದ ಬಿಬಿಎಂಪಿ ಚುನಾವಣೆಯಲ್ಲಿ ಏನಾದರೂ ಲಾಭ ಆಗುವುದಿಲ್ಲ. ಸೂಕ್ತ ಸಮಯದಲ್ಲಿ ಅವರಿಗೆ ತಕ್ಕ ಉತ್ತರ ನೀಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ದೇವೇಗೌಡರನ್ನ ಆಸ್ಪತ್ರೆಗೆ ಸೇರಿಸಿ, ಧನಂಜಯ್ ಕುಮಾರ್
ದೇವೇಗೌಡರ ಕೀಳು ಪದಕ್ಕೆ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಧನಂಜಯ್ ಕುಮಾರ್, ದೇವೇಗೌಡರಿಗೆ ವಯಸ್ಸಾಗಿದೆ. ಮಾನಸಿಕ ಸ್ಥಿತಿ ಸಮತೋಲನದಲ್ಲಿಲ್ಲ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿ ಎಂದು ಲೇವಡಿ ಮಾಡಿದರು. ಮಾಜಿ ಸಿಎಂ, ಪಿಎಂ ಆಗಿದ್ದವರ ಬಾಯಿಯಲ್ಲೇ ಮುಖ್ಯಮಂತ್ರಿಯೊಬ್ಬರನ್ನು ಹೇಗೆ ಟೀಕಿಸಬೇಕು ಎಂಬ ಸೌಜನ್ಯವೂ ಅವರಿಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications