ಯಾವನ್ರಿ ಅವ್ನು ಸಿಎಂ ಬ್ಲಡಿ ಬಾಸ್ಟರ್ಡ್!: ದೇವೇಗೌಡ

ನೈಸ್ ಕಂಪನಿಗೆ ಹೆಚ್ಚು ಭೂಮಿ ನೀಡಿರುವುದನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ಮಾಜಿ ಪ್ರಧಾನಿ ದೇವೇಗೌಡ ಇಂದು ಹೊಸೂರು ರಸ್ತೆಯ ಚಿಕ್ಕತೋಗೂರಿನಲ್ಲಿರುವ ನೈಸ್ ಕಚೇರಿ ಎದುರು ರೈತಸಂಘ, ರೈತರೊಂದಿಗೆ ಪ್ರತಿಭಟನೆ ನಡೆಸಿದ ಗೌಡರು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಚಿಕ್ಕತೋಗೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನೈಸ್ ಕಂಪನಿ ಅಗತ್ಯಕ್ಕಿಂತ ಹೆಚ್ಚುವರಿ ಭೂಮಿ ನೀಡಲು ಸರಕಾರ ಹಸಿರು ನಿಶಾನೆ ತೋರಿಸಿದೆ. ರಾಜ್ಯದ ಅಡ್ವೋಕೇಟ್ ಜನರಲ್ ಸುಪ್ರೀಂಕೋರ್ಟ್ ಗೆ ನೀಡಿದ ತಪ್ಪು ಮಾಹಿತಿಯಿಂದ ಅಮಾಯಕ ರೈತರು ಭೂಮಿಯನ್ನು ಕಳೆದುಕೊಳ್ಳುವ ಹಂತ ತಲುಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ಹಂತದಲ್ಲಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ದೇವೇಗೌಡ, ಈ ಸಿಎಂಗೆ ಮಾನ ಮಾರ್ಯಾದೆ ಇದೆಯೇನ್ರಿ, ರೈತರಿಗೆ ಮೋಸ ಮಾಡಿ ಖೇಣಿಯೊಂದಿಗೆ ಡಕಾಯಿತಿ ನಡೆಸಿದ್ದಾರೆ. ಯಾವನ್ರೀ ಅವ್ನು ಯಡಿಯೂರಪ್ಪ...ಬ್ಲಡಿ ಬಾಸ್ಟರ್ಡ್ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಸಂಯುಕ್ತ ಕರ್ನಾಟಕ ಮುಖಪುಟದಲ್ಲಿ ಬಂದಿರುವ 'ಗೌಡರ ವಿರುದ್ಧ ರಣಕಹಳೆ' ಎಂಬ ವರದಿಗೆ ತೀವ್ರ ಆಕ್ರೋಶಗೊಂಡ ಗೌಡರು, ಈ ಪತ್ರಿಕೆ ಹಾರನಹಳ್ಳಿ ರಾಮಸ್ವಾಮಿ ಮಗಂದು, ನನ್ನ ಹೋರಾಟ ಕುಂದಿಸಲು ಪ್ರಯತ್ನ ನಡೆಸಿದ್ದಾರೆ, ದೇವೇಗೌಡ ಹುಟ್ಟಿರುವುದೇ ಹೋರಾಟಕ್ಕೆ ಇಂಥವರಿಗ ಬಗ್ಗುವುದಿಲ್ಲ ಎಂದು ಹೇಳಿದರು.
ಇಂದಿನಿಂದ ನನ್ನ ಅಧಿಕೃತ ಹೋರಾಟ ಆರಂಭವಾಗಿದೆ. ಚಿಕ್ಕತೋಗೂರು ನೈಸ್ ಕಚೇರಿ ನಾಳೆ ಒಂದು ದಿನ ಹೋರಾಟ ನಡೆಸುವೆ. ನಂತರ ಯಡಿಯೂರಪ್ಪ ಮನೆಯ ಮುಂದೆ ಹೋರಾಟ ನಡೆಸುವೆ ಎಂದು ದೇವೇಗೌಡ ಹೇಳಿದರು. ದೇವೇಗೌಡರ ಕೆಳಮಟ್ಟದ ಹೇಳಿಕೆ ಕಾಂಗ್ರೆಸ್ ಕೂಡಾ ಗಾಬರಿ ವ್ಯಕ್ತಪಡಿಸಿದೆ. ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಯಾರೇ ಆದರೂ ಅಸಂವಿಧಾನಿಕವಾಗಿರುವ ಪದ ಬಳಿಕೆ ಸರಿಯಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಬ್ಲಡಿ ಬಾಸ್ಟರ್ಡ್ ಪದಕ್ಕೆ ಪ್ರಯೋಗಕ್ಕೆ ಬೇಸರ, ಸಿಎಂ
ಬ್ಲಡಿ ಬಾಸ್ಟರ್ಡ್ ಎಂಬ ಪದ ಪ್ರಯೋಗ ಮಾಡಿರುವುದಕ್ಕೆ ತೀವ್ರ ಬೇಸರವಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ 40 ವರ್ಷ ರಾಜಕೀಯ ಮಾಡಿರುವ ದೇವೇಗೌಡರ ಬಾಯಿಯಿಂದ ಈ ಮಾತು ಬರಬಾರದಿತ್ತು, ಇದು ತೀವ್ರ ನೋವು ತರುವ ಸಂಗತಿಯಾಗಿದೆ. ಗೌಡರು ಬಳಸಿದ ಭಾಷೆಯನ್ನು ನಾನು ಬಳಸುವುದಿಲ್ಲ. ಅವರ ಬಗ್ಗೆ ಅಪಾರ ಗೌರವವಿದೆ. ಮಾಜಿ ಪ್ರಧಾನಿಗಳು ಘನತೆಗೆ ತಕ್ಕಂತೆ ವರ್ತಿಸಲಿ ಎಂದು ಯಡಿಯೂರಪ್ಪ ಹೇಳಿದ್ದಾರೆ.
ನೈಸ್ ವಿಷಯಕ್ಕೆ ಸಂಬಂಧಿಸಿದಂತೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡುವ ವಿಷಯವೇನಿದೆ. ಪ್ರಕರಣಕ್ಕೆ ಚಾಲನೆ ನೀಡಿದ್ದು ಈ ದೇವೇಗೌಡ. ಇದೀಗ ಪ್ರಕರಣ ಸುಪ್ರಿಂಕೋರ್ಟ್ ನಲ್ಲಿದೆ. ನ್ಯಾಯಾಲಯದ ತೀರ್ಪಿನ ಮೇರೆಗೆ ಸರಕಾರ ನಡೆದುಕೊಂಡಿದೆ. ಈ ಪ್ರಕರಣದಲ್ಲಿ ನಮ್ಮ ಸರಕಾರ ಅತ್ಯಂತ ಪಾರದರ್ಶಕವಾಗಿದೆ. ವೇದಿಕೆಯಲ್ಲಿ ಚರ್ಚೆ ಮಾಡುವುದು ಏನಿಲ್ಲ. ಬನ್ನಿ ದೇವೇಗೌಡರೆ, ನೈಸ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಬಳಿ ತೆರಳಿ ಚರ್ಚಿಸೋಣ ಎಂದು ಪ್ರತಿ ಸವಾಲು ಹಾಕಿದರು. ದೇವೇಗೌಡರ ವರ್ತನೆಯನ್ನು ರಾಜ್ಯದ ಜನ ವೀಕ್ಷೀಸುತ್ತಿದ್ದಾರೆ. ಹೀಗೆ ಮಾಡುವುದರಿಂದ ಬಿಬಿಎಂಪಿ ಚುನಾವಣೆಯಲ್ಲಿ ಏನಾದರೂ ಲಾಭ ಆಗುವುದಿಲ್ಲ. ಸೂಕ್ತ ಸಮಯದಲ್ಲಿ ಅವರಿಗೆ ತಕ್ಕ ಉತ್ತರ ನೀಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ದೇವೇಗೌಡರನ್ನ ಆಸ್ಪತ್ರೆಗೆ ಸೇರಿಸಿ, ಧನಂಜಯ್ ಕುಮಾರ್
ದೇವೇಗೌಡರ ಕೀಳು ಪದಕ್ಕೆ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಧನಂಜಯ್ ಕುಮಾರ್, ದೇವೇಗೌಡರಿಗೆ ವಯಸ್ಸಾಗಿದೆ. ಮಾನಸಿಕ ಸ್ಥಿತಿ ಸಮತೋಲನದಲ್ಲಿಲ್ಲ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿ ಎಂದು ಲೇವಡಿ ಮಾಡಿದರು. ಮಾಜಿ ಸಿಎಂ, ಪಿಎಂ ಆಗಿದ್ದವರ ಬಾಯಿಯಲ್ಲೇ ಮುಖ್ಯಮಂತ್ರಿಯೊಬ್ಬರನ್ನು ಹೇಗೆ ಟೀಕಿಸಬೇಕು ಎಂಬ ಸೌಜನ್ಯವೂ ಅವರಿಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications