ಸಾವಯವ ಮತ್ತು ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಳ: ಕುಮಾರಸ್ವಾಮಿ
ಬೆಂಗಳೂರು, ಜನವರಿ 18: ಸಾವಯವ ಮತ್ತು ಸಿರಿಧಾನ್ಯಗಳಿಗೆ ಮತ್ತೆ ಬೇಡಿಕೆ ಹೆಚ್ಚಾಗಿದ್ದು, ಜನ ಇದನ್ನು ಹೆಚ್ಚು ಬಳಸಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಶುಕ್ರವಾರ ಸಾವಯವ ಮತ್ತು ಸಿರಿಧಾನ್ಯಗಳು-2019 ಅಂತರರಾಷ್ಟ್ರೀಯ ವಾಣಿಜ್ಯ ಮೇಳವನ್ನು ಉದ್ಫಾಟಿಸಿ ಮಾತನಾಡಿದರು.
ಆಹಾರ ಸುರಕ್ಷತೆ ಕಾಯ್ದೆಯಡಿ ಸಿರಿಧಾನ್ಯವನ್ನು ಸ್ವಾಭಾವಿಕ ಬೆಳೆ ಎಂದು ಗುರುತಿಸಲಾಗಿದೆ. ಜನರಿಗೆ ಸಿರಿಧಾನ್ಯಗಳ ಬಳಕೆ ಕುರಿತು ಅರಿವು ಮೂಡಿಸಲು ರೈತರು, ಕೈಗಾರಿಕೋದ್ಯಮಿಗಳನ್ನು ಒಂದೇ ಸೂರಿನಡಿ ತಂದು ವೇದಿಕೆ ನಿರ್ಮಾಣ ಮಾಡಲಾಗಿದೆ ಎಂದರು.

ಸಿರಿಧಾನ್ಯಗಳ ಬಳಕೆಯಿಂದ ನಮ್ಮ ಆರೋಗ್ಯ ಸಹ ಸುಧಾರಣೆಯಾಗಲಿದೆ. ಮಕ್ಕಳ ಮಧ್ಯಾಹ್ನದ ಬಿಸಿಯೂಟ ಹಾಗೂ ಇಂದಿರಾ ಕ್ಯಾಂಟೀನ್ಗಳಲ್ಲಿ ಸಹ ಸಿರಿಧಾನ್ಯಗಳನ್ನು ಬಳಸಲು ಸರ್ಕಾರ ಚಿಂತನೆ ನಡೆಸಿದೆ. ಇಲ್ಲಿ ರಾಜ್ಯ, ರಾಷ್ಟ್ರ ಹಾಗೂ ವಿದೇಶ ಮಟ್ಟದಲ್ಲಿ ಉದ್ದಿಮೆದಾರರು ಬಂದಿರುವುದು ಸಂತಸ ತಂದಿದೆ. ಇಂತಹ ದೊಡ್ಡ ಮಟ್ಟದ ಸಿರಿಧಾನ್ಯಗಳ ಮೇಳ ಇದೇ ಪ್ರಥಮ ಎಂದು ಹೇಳಿದರು.
ಕೃಷಿ ಇಲಾಖೆ ಕಾರ್ಯದರ್ಶಿ ಮಹೇಶ್ವರ್ ರಾವ್, ಈ ಸಿರಿಧಾನ್ಯಗಳ ಮೇಳವನ್ನು 3ನೇ ಬಾರಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದು, ಇದರಿಂದ ಉತ್ತಮ ಪ್ರತಿಕ್ರಿಯೆ ಬಂದಿವೆ. ಜನರಿಗೆ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯ ಹಾಗೂ ಇದರಿಂದ ಆಗುವ ಪ್ರಯೋಜನದ ಬಗ್ಗೆ ಸಹ ಮಾಹಿತಿ ನೀಡಲಾಗುತ್ತಿದೆ ಎಂದರು.
ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ ಮಾತನಾಡಿ, ಸಿರಿಧಾನ್ಯಗಳಿಂದ ಪೌಷ್ಟಿಕತೆ ದೊರೆಯಲಿದ್ದು, ದೇಹವನ್ನು ತಂಪಾಗಿ ಇರುವಂತೆ ಮಾಡುತ್ತದೆ. ಇದರಿಂದ ಮಧುಮೇಹ ಮುಂತಾದ ಕಾಯಿಲೆಗಳನ್ನು ತಡೆಯಬಹುದು. ಈ ವಾಣಿಜ್ಯ ಮೇಳದಲ್ಲಿ ಇತರ ರಾಜ್ಯ, ವಿದೇಶಗಳಿಂದಲೂ ಪ್ರತಿನಿಧಿಗಳು ಭಾವಹಿಸಿ ಮೇಳಕ್ಕೆ ಮೆರಗು ನೀಡಿದ್ದಾರೆ. ಈ ಮೇಳ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುಮಾರು 400 ರೂ ಹೆಚ್ಚಿನ ಮಳಿಗೆಗಳಲ್ಲಿ ಸಿರಿಧಾನ್ಯಗಳು ಹಾಗೂ ಅದರ ಉತ್ಪನ್ನಗಳು ಜನರನ್ನು ಕೈ ಬೀಸಿ ಕರೆಯುತ್ತಿತ್ತು. ಸಿರಿಧಾನ್ಯಗಳಿಂದ ತಯಾರಾದ ಖಾದ್ಯಗಳನ್ನು ಸಹ ಜನರು ಸವಿದರು.
ಈ ಮೇಳವು ಜನವರಿ 18 ರಿಂದ 20 ರವರೆಗೆ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಲಾಗಿದೆ.
ಉದ್ಫಾಟನಾ ಕಾರ್ಯಕ್ರಮದಲ್ಲಿ ಸಚಿವರಾದ ಎಂ.ಸಿ. ಮನುಗುಳಿ, ಕೃಷ್ಣಬೈರೇಗೌಡ, ಹೆಚ್. ವೆಂಕಟರಾವ್ ನಾಡಗೌಡ, ಕೇರಳ ಕೃಷಿ ಸಚಿವರಾದ ಸುನೀಲ್ ಪ್ರಭ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರರಾದ ಗಂಗಾಂಬಿಕಾದೇವಿ, ವಿಧಾನ ಪರಿಷತ್ ಸದಸ್ಯರಾದ ರೇವಣ್ಣ, ರಮೇಶ್ ಗೌಡ, ದೇವೇಗೌಡ, ಇಕ್ರಿಸ್ಯಾಟ್ ಡೈರೆಕ್ಟರ್ ಜನರಲ್ ಡಾ ಪೀಡರ್ ಕಾರ್ಬೆರಿ, ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಪ್ರಾಧಿಕಾರ ಸಿ.ಇ.ಒ. ಡಾ.ಅಶೋಕ್ ದಳವಾಯಿ ಹಾಗೂ ಇತರರು ಉಪಸ್ಥಿತರಿದ್ದರು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications