ನವಲಗುಂದದಲ್ಲಿ ರೈತರು - ಜೆಡಿಎಸ್ ಮುಖಂಡರ ಮಧ್ಯೆ ಜಟಾಪಟಿ
ಹುಬ್ಬಳ್ಳಿ, ಜುಲೈ 21: ನವಲಗುಂದದಲ್ಲಿ ಆಯೋಜಿಸಿದ್ದ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿರುವ ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಪಕ್ಷಾತೀತ ರೈತ ಹೋರಾಟ ಸಮಿತಿ ರಾಜಕಾರಣಿಗಳಿಗೆ ಅಡ್ಡಿಪಡಿಸಿದ ಘಟನೆ ಇಂದು ನಡೆಯಿತು.
ಪಕ್ಷಾತೀತ ರೈತ ಹೋರಾಟ ಸಮಿತಿಯ ನೂರಾರು ರೈತರು ವೀರಗಲ್ಲಿನ ಸುತ್ತ ರಕ್ಷಣಾ ಕವಚದಂತೆ ನಿಂತು ರಾಜಕಾರಣಿಗಳು ಹತ್ತಿರವೂ ಸುಳಿಯದಂತೆ ನೋಡಿಕೊಂಡರು.

ಜೆಡಿಎಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಹುತಾತ್ಮ ದಿನಾಚರಣೆಗೂ ಮುನ್ನ ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಬಂದ ಜೆಡಿಎಸ್ ಮುಖಂಡರೊಂದಿಗೆ ವಾಗ್ವಾದ ನಡೆಸಿದ ಪಕ್ಷಾತೀತ ರೈತ ಹೋರಾಟ ಸಮಿತಿ ಪದಾಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಕಾರಣಿಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಮಧು ಬಂಗಾರಪ್ಪ, ಬಸವರಾಜ ಹೊರಟ್ಟಿ ಸೇರಿದಂತೆ ಹಲವರು ಹಾಗೂ ಸಮಿತಿ ಸದಸ್ಯರ ಮಧ್ಯೆ ಜಟಾಪಟಿ ನಡೆಯಿತು. ಅಲ್ಲದೆ ವೀರಗಲ್ಲಿನ ಸಮೀಪ ಪರಸ್ಪರ ನೂಕುನುಗ್ಗಲು ನಡೆಯಿತು.
ಆದರೆ, ಸಮಿತಿ ಸದಸ್ಯರು ಜೆಡಿಎಸ್ ಮುಖಂಡರಿಗೆ ಮಾಲಾರ್ಪಣೆ ಮಾಡಲು ಅವಕಾಶ ನೀಡಲಿಲ್ಲ. ಕೊನೆಗೆ ಪೊಲೀಸರ ಮಧ್ಯೆಸ್ಥಿಕೆಯಿಂದ ಮಾಲೆ ಹಿಡಿದುಕೊಂಡು ಬಂದಿದ್ದ ಜೆಡಿಎಸ್ ಮುಖಂಡರು ಹಾಗೆ ವಾಪಾಸ್ ಹೋದರು.

ಬಿಎಸ್ವೈ ಕಚಡಾ ಮುಖ್ಯಮಂತ್ರಿ - ಮಧು ಬಂಗಾರಪ್ಪ
"ಯಡಿಯೂರಪ್ಪ ಒಬ್ಬ ಕಚಡಾ ಮುಖ್ಯಮಂತ್ರಿಯಾಗಿದ್ದರು. ಅವರ ರಕ್ತ ಸರಿಯಿಲ್ಲ; ಅವರದ್ದು ರೈತ ವಿರೋಧಿ ರಕ್ತ," ಎಂದು ಜೆಡಿಎಸ್ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಶಾಸಕ ಮಧು ಬಂಗಾರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಪಕ್ಷದ ವತಿಯಿಂದ ನವಲಗುಂದ ಪಟ್ಟಣದಲ್ಲಿ ಆಯೋಜಿಸಿದ್ದ ರೈತ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಧು ಬಂಗಾರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಾಷಣದುದ್ದಕ್ಕೂ ಕಿಡಿಕಾರಿದರು.
"ಕಣ್ಣೀರು ಸುರಿಸಿ ಬಂದಿರುವ ನಿಮಗೆ ರೈತರ ಕಣ್ಣೀರು ಕಾಣಿಸುವುದಿಲ್ಲ. ದಕ್ಷಿಣ ಕನ್ನಡದಲ್ಲಿ ಬೆಂಕಿ ಹಚ್ಚುವ ಮಾತುಗಳನ್ನಾಡುವ ಬಿಎಸ್ವೈ ಧೈರ್ಯವಿದ್ದರೆ ರೈತರ ಎದುರು ಬಂದು ನಿಲ್ಲಲಿ," ಎಂದು ಮಧು ಬಂಗಾರಪ್ಪ ಸವಾಲೆಸೆದರು.
"ಸಾಲಮನ್ನಾ ಕುರಿತಂತೆ ಸಿಎಂ ಸಿದ್ದರಾಮಯ್ಯ ಮೂಗು ಹಿಡಿಯುವ ಬದಲು ಪ್ರಧಾನಿ ನರೇಂದ್ರ ಮೋದಿ ಮೂಗು ಹಿಡಿದು ರೈತರ ಸಾಲಮನ್ನಾ ಮಾಡಿಸಲಿ," ಎಂದು ಮಧು ಬಂಗಾರಪ್ಪ ಯಡಿಯೂರಪ್ಪನವರಿಗೆ ಚಾಲೆಂಜ್ ಮಾಡಿದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications