ಕಾವೇರಿ ಕೊಳ್ಳದ ವಾಸ್ತವ ಚಿತ್ರಣ ಅಧ್ಯಯನ ಆರಂಭ
ಬೆಂಗಳೂರು, ಅಕ್ಟೋಬರ್ 07: ಕಾವೇರಿ ಕೊಳ್ಳದ ವಾಸ್ತವ ಚಿತ್ರಣದ ಅಧ್ಯಯನಕ್ಕೆ ಜಿ.ಎಸ್.ಝಾ ನೇತೃತ್ವದ ತಂಡ ಅಕ್ಟೋಬರ್ 7 ಮತ್ತು 8 ರಂದು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದೆ. ಈ ಅಧ್ಯಯನದ ವರದಿ ಅಕ್ಟೋಬರ್ 18 ರಂದು ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಮಹತ್ವ ಪಡೆಯಲಿದೆ.
ಕಾವೇರಿ ಕೊಳ್ಳದ ವಾಸ್ತವ ಚಿತ್ರಣದ ಅಧ್ಯಯನ ನಡೆಸಿ ವರದಿ ಮಾಡಲು ನದಿ ಅಭಿವೃದ್ಧಿ ಹಾಗೂ ಗಂಗಾ ಪುನಶ್ಚೇತನಕ್ಕೆ ನೇಮಕಗೊಂಡಿರುವ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ. ಎಸ್. ಝಾ ಅವರ ನೇತೃತ್ವದ ಉನ್ನತ ಮಟ್ಟದ ತಾಂತ್ರಿಕ ತಂಡವು ಅಕ್ಟೋಬರ್ 7 ಮತ್ತು 8 ರಂದು ರಾಜ್ಯದಲ್ಲಿ ಪ್ರವಾಸ ಮಾಡಲಿದೆ ಎಂದು ಜಲ ಸಂಪನ್ಮೂಲ ಸಚಿವ ಎಂ. ಬಿ.ಪಾಟೀಲ್ ಅವರು ಹೇಳಿದ್ದಾರೆ.
ಕೇಂದ್ರ ಜಲ ಆಯೋಗದ ಸದಸ್ಯ ಸೈಯದ್ ಮಸೂದ್ ಹುಸೇನ್ ಹಾಗೂ ಜಲ ಸಂಪನ್ಮೂಲ ಆಯೋಗದ ಕೃಷ್ಣಾ ಮತ್ತು ಗೋದಾವರಿ ಕಣಿವೆಯ ಮುಖ್ಯ ಅಭಿಯಂತ ಆರ್. ಕೆ. ಗುಪ್ತಾ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಹಿರಿಯ ಹಾಗೂ ತಾಂತ್ರಿಕ ಅಧಿಕಾರಿಗಳ ಜೊತೆಗೆ ರಾಜ್ಯದ ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಹಾಗೂ ಕೃಷ್ಣರಾಜ ಸಾಗರ ಅಣೆಕಟ್ಟಿನ ಮುಖ್ಯ ಅಭಿಯಂತರ ಶಿವಕುಮಾರ್ ಅವರೂ ಈ ತಂಡದೊಂದಿಗೆ ಪ್ರವಾಸ ಮಾಡಲಿದ್ದಾರೆ.

ಭಾರತ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದ ಮೇರೆಗೆ ಆಗಮಿಸಿರುವ ಈ ಅಧ್ಯಯನ ತಂಡವು ಕಾವೇರಿ ಕೊಳ್ಳದ ಕೃಷ್ಣರಾಜ ಸಾಗರ, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಿಗೆ ಭೇಟಿ ನೀಡಿ, ನಾಲ್ಕೂ ಜಲಾಶಯಗಳಲ್ಲಿ ಲಭ್ಯವಿರುವ ನೀರು ಸಂಗ್ರಹದ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಿದ್ದಾರೆ.
ಕಾವೇರಿ ಕೊಳ್ಳದ ಮಂಡ್ಯ, ಮೈಸೂರು ನಗರಗಳು ಮತ್ತು ಸುತ್ತ-ಮುತ್ತಲ 600 ಗ್ರಾಮಗಳು ಹಾಗೂ ರಾಜ್ಯದ ರಾಜಧಾನಿ ಬೆಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಮುಂದಿನ ಬೇಸಿಗೆಯ ಅಂತ್ಯದವರೆಗೆ ಅಗತ್ಯವಿರುವ ನೀರು ಪ್ರಮಾಣದ ಬಗ್ಗೆಯೂ ಅಧ್ಯಯನ ತಂಡವು ಪರಿಶೀಲನೆ ನಡೆಸಲಿದೆ. ಅಂತೆಯೇ, ಮುಂಗಾರು ವೈಫಲ್ಯದಿಂದ ಅಲ್ಲಿನ ಅಚ್ಚುಕಟ್ಟು ಪ್ರದೇಶಗಳಲ್ಲಿ ಉಂಟಾಗಿರುವ ಬೆಳೆ ಹಾನಿ ಹಾಗೂ ನೀರಿನ ಲಭ್ಯತೆ ಕುರಿತು ವಾಸ್ತವ ಚಿತ್ರಣವನ್ನು ಅಂದಾಜು ಮಾಡಿ ವರದಿ ಸಲ್ಲಿಸಲಿದೆ.
ರಾಜ್ಯದ ಪ್ರವಾಸ ಪೂರ್ಣಗೊಂಡ ನಂತರ ಝಾ ನೇತೃತ್ವ ತಂಡವು ಶನಿವಾರ ಸಂಜೆಯೇ ತಮಿಳುನಾಡಿನ ಮೆಟ್ಟೂರಿಗೆ ತೆರಳಿ, ಅಲ್ಲಿನ ಜಲಾಶಯದ ನೀರು ಸಂಗ್ರಹದ ಪ್ರಮಾಣ ಹಾಗೂ ನೀರಾವರಿ ಪ್ರದೇಶದಲ್ಲಿನ ಬೆಳೆಗಳ ಪರಿಸ್ಥಿತಿಯನ್ನೂ ಅಧ್ಯಯನ ನಡೆಸಲಿದೆ. ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳ ಕಾವೇರಿ ಕೊಳ್ಳದ ಪ್ರದೇಶಗಳಿಗೆ ಭೇಟಿ ನೀಡಿದ ನಂತರ, ಝಾ ನೇತೃತ್ವದ ತಂಡವು ಅಕ್ಟೋಬರ್ 17 ರಂದು ಸುಪ್ರೀಂಕೋರ್ಟಿಗೆ ತನ್ನ ವಾಸ್ತವಾಂಶದ ವರದಿ ಸಲ್ಲಿಸಲಿದೆ ಎಂದು ಎಂ. ಬಿ. ಪಾಟೀಲ್ ಅವರು ಹೇಳಿದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications