ಏರಿದ ತರಕಾರಿ ಬೆಲೆ, ಮೊಟ್ಟೆಯ ದರ ಕೊಂಚ ಇಳಿಕೆ
Recommended Video

ಬೆಂಗಳೂರು, ಏಪ್ರಿಲ್ 05: ಬೇಸಿಗೆಯಲ್ಲಿ ನೀರಿನ ಅಭಾವ ಒಂದೆಡೆಯಾದರೆ, ಹಲವೆಡೆ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ತರಕಾರಿಗಳ ಬೆಳೆಗಳು ಹಾಳಾಗಿವೆ. ಹಾಗಾಗಿ ಸಾಕಷ್ಟು ತರಕಾರಿಗಳ ಬೆಲೆ ಏರಿಕೆಯಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಹೀಗಾಗಿ ಬೀನ್ಸ್, ಟೊಮೇಟೋ ಮತ್ತಿತರೆ ತರಕಾರಿಗಳ ದರದಲ್ಲಿ ಏರಿಕೆಯಾಗಿದೆ. ಮಾರ್ಚ್ ನಲ್ಲಿ ಬೀನ್ಸ್ 25ರೂ ಇದ್ದಿದ್ದು, ಇದೀಗ ಕೆಜಿಗೆ 44ರೂ. ತಲುಪಿದೆ. 10ರೂ. ಇದ್ದ ಟೊಮೇಟೊ ದರ 20ರೂ.ಗೆ ಏರಿಕೆಯಾಗಿದೆ. ಸೌತೆಕಾಯಿ ದರ ಒಂದಕ್ಕೆ 10ರೂ. ತಲುಪಿದೆ. ಬೆಂಡೆಕಾಯಿ 38ರೂ.ಇದೆ. ಕೊತ್ತಂಬರಿ ಸೊಪ್ಪು ಸೇರಿದಂತೆ ಇತರೆ ಸೊಪ್ಪುಗಳ ದರವೂ ಏರಿಕೆಯಾಗಿದೆ.
ಮೊಟ್ಟೆಗಳ ದರ ಇಳಿಕೆ: ಕೆಲ ತಿಂಗಳ ಹಿಂದೆ 6ರೂ.ವರೆಗೆ ಏರಿಕೆಯಾಗಿದ್ದ ಮೊಟ್ಟೆಯ ದರ ಇದೀಗ ಕಡಿಮೆಯಾಗಿದೆ. ಚಿಲ್ಲರೆ ಮೊಟ್ಟೆಯೊಂದರ ಬೆಲೆ 4.30ರಿಂದ 5 ರೂಗೆ ಇಳಿದಿದೆ. ಸರ್ಕಾರದ ವತಿಯಿಂದ ಅಂಗನವಾಡಿ ಮಕ್ಕಳಿಗೆ ವಾರಕ್ಕೆ ಎರಡು ದಿನ ಬೇಯಿಸಿದ ಮೊಟ್ಟೆ ನೀಡಲಾಗುತ್ತದೆ.

ಶಾಲೆಗಳಿಗೆ ನೀಡುವಂತೆ ಬೇಸಿಗೆ ರಜೆಯನ್ನು ಅಂಗನವಾಡಿಗಳಿಗೆ ನೀಡುವುದಿಲ್ಲವಾದರೂ ಈ ಅವಧಿಯಲ್ಲಿ ಹೆಚ್ಚಿನ ಮಕ್ಕಳು ಅಲ್ಲಿಗೆ ಬರುವುದಿಲ್ಲ ಇವೆಲ್ಲ ಕಾರಣಗಳಿಂದ ಮೊಟ್ಟೆಯ ದರ ಕಡಿಮೆಯಗಿದೆ.
ಬೇಸಿಗೆಯಲ್ಲಿ ಕೋಳಿಗಳು ಜೋಳ ಮತ್ತಿತರೆ ಆಹಾರ ಪದಾರ್ಥಗಳನ್ನು ಸೇವಿಸುವುದು ಕಡಿಮೆ. ಈ ಋತುವಿನಲ್ಲಿ ಹೆಚ್ಚಾಗಿ ನೀರು ಕುಡಿಯುತ್ತವೆ. ರಾಜ್ಯದಲ್ಲಿ ನಿತ್ಯ 1.20 ಕೋಟಿ ಮೊಟ್ಟೆ ಉತ್ಪಾದನೆಯಾಗುತ್ತದೆ. ಬೇಸಿಗೆಯಲ್ಲಿ ಉತ್ಪಾದನಾ ಪ್ರಮಾಣದಲ್ಲಿ ಶೇ.10-15ರಷ್ಟು ಇಳಿಕೆಯಾಗುತ್ತಿದೆ ಎಂದು ಎನ್ಇಸಿಸಿ ಬೆಂಗಳೂರು ವಲಯದ ಅಧ್ಯಕ್ಷ ಬಿ.ಆರ್. ಸಾಯಿನಾಥ್ ಮಾಹಿತಿ ನೀಡಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications